ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸಭೆ ನಡೆಸಿದರು.
ಕೊರೊನಾ ಸಾವಿನ ಬಗ್ಗೆ ತನಿಖೆ ನಡೆಸಲು 13 ಮಂದಿ ವೈದ್ಯಾಧಿಕಾರಿಗಳ ತಂಡ ಕಾರ್ಯರಂಭ ಮಾಡಲಿದೆ. ಜಿಲ್ಲೆಯಲ್ಲಿ 36 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇವರಲ್ಲಿ 26 ಜನರು ಇತರ ಖಾಯಿಲೆಗಳಿಂದ ಬಳಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.
ಮೃತರಲ್ಲಿ ಮೂವರು ಮೂವರು ಮಂದಿ ಭಟ್ಕಳ, ಒಬ್ಬರು ಚಿತ್ರದುರ್ಗ ಮತ್ತೊಬ್ಬರು ಮಡಿಕೇರಿ ಮೂಲದವರಾಗಿದ್ದಾರೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ 9 ಮಂದಿ ಸಾವನ್ನಪ್ಪಿದ್ದರೆ, 50 -60 ವರ್ಷದೊಳಗಿನ 10 ಮಂದಿ ಸಾವನ್ನಪ್ಪಿದ್ದಾರೆ. 60-70 ವರ್ಷದೊಳಗೆ 11 ಮಂದಿ ಸಾವನ್ನಪ್ಪಿದ್ದರೆ, 70 ವರ್ಷಕ್ಕಿಂತ ಮೇಲಿನವರು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ದ.ಕ ಜಿಲ್ಲಾಧಿಕಾರಿ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ
ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...








