ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಸಡಿಲಿಕೆ ಆದಾಗಿನಿಂದಲೂ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾಸುರ ರಣಕೇಕೆ ಹಾಕುತ್ತಾ ಅಬ್ಬರಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ಎರಡು ಲಾಕ್ ಡೌನ್ ಅವಧಿಯಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಂಜೆ ಐದು ಗಂಟೆಗೆ ಸಭೆ ನಡೆಯಲಿದೆ.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಸಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ, ವಿದೇಶಾಂಗ ಸಚಿವ ಜೈಶಂಕರ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ಭಾಗಿಯಾಗಲಿದ್ದಾರೆ.
ಇನ್ನು ಸಭೆಯಲ್ಲಿ ಪ್ರಸುತ್ತ ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಮತ್ತು ಲಾಕ್ ಡೌನ್ ವಿನಾಯತಿ. ರೈಲು ಮತ್ತು ವಿಮಾನ ಸಂಚಾರಕ್ಕೆ ಅವಕಾಶ, ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್ ಅನುಷ್ಠಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.