ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಡಗಿಗೆ ಹುಲಿ ಸಂಖ್ಯೆ ಹೆಚ್ಚಳವೇ ಮುಳುವಾಯಿತೇ..?

Kariyappa N by Kariyappa N
October 23, 2020
in Newsbeat, Saaksha Special, ಎಸ್ ಸ್ಪೆಷಲ್, ರಾಜ್ಯ
kodagu forest
Share on FacebookShare on TwitterShare on WhatsappShare on Telegram

ಮಡಿಕೇರಿ: ದೇಶದೆಲ್ಲೆಡೆ ರಾಯಲ್ ಬಂಗಾಲಿ ಹುಲಿಯ ಸಂತತಿ ಹೆಚ್ಚಾಗಿದೆ. ಈಗಾಗಲೇ ನಶಿಸುತ್ತಿರುವ ಹುಲಿಗಳ ರಕ್ಷಣೆಯಲ್ಲಿ ಸಾಧನೆ ಮಾಡಿರುವುದಕ್ಕೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರಿ ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿರುವುದಂತೂ ನಿಜ.

ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯ ಪರಿಣಾಮ ಕೊಡಗಿನ ಅರಣ್ಯದಂಚಿನ ಗ್ರಾಮ ಸೇರಿದಂತೆ ಜಲ ಮೂಲಗಳಿರುವ ಕಾಫಿ ತೋಟಗಳಲ್ಲಿ ಹುಲಿಗಳು ಪ್ರತ್ಯಕ್ಷವಾಗುತ್ತಿವೆ. ಭತ್ತದ ಗದ್ದೆಗಳ ಏರಿ, ತೋಟದ ನಡುವೆ ಹುಲಿ ಹೆಜ್ಜೆ ಪತ್ತೆ, ಮೇಯಲು ಬಿಟ್ಟ ಜಾನುವಾರುಗಳ ಮೇಲೆ ದಾಳಿ ಮಾಡಿ ಅವುಗಳ ಸಾವಿಗೆ ಕಾರಣವಾಗುತ್ತಿರುವುದು ಆತಂಕ ಮೂಡಿಸಿದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

30ಕ್ಕೂ ಹೆಚ್ಚು ಹಸುಗಳ ಬಲಿ
ಇದು ಅಚ್ಚರಿಯಾದರೂ ಸತ್ಯ. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ ನಾಗರಹೊಳೆಗೆ ಹೊಂದಿಕೊಂಡಂತೆ ಇರುವ ವಿರಾಜಪೇಟೆ ತಾಲ್ಲೂಕಿನ ಬಹುತೇಕ ಗ್ರಾಮಗಳು ಈ ಸಮಸ್ಯೆ ಎದುರಿಸುತ್ತಿದೆ. ಅರಣ್ಯ ಇಲಾಖೆ ಬಳಿಯಿರುವ ಮಾಹಿತಿ ಪ್ರಕಾರ ಕಳೆದ 11 ತಿಂಗಳಿನಲ್ಲಿ 33 ಜಾನುವಾರುಗಳು ಹುಲಿಗಳ ದಾಳಿಗೆ ಬಲಿಯಾಗಿವೆ.

tiger attack death

ಹೆಚ್ಚು ಹುಲಿ ಓಡಾಟದ ಪ್ರದೇಶಗಳು..
ನಾಗರಹೊಳೆ ಅಂಚಿನಲ್ಲಿರುವ ಕಾರಣ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು, ಕಿರುಮಕ್ಕಿ, ಕಲ್ಲುಬಾಣೆ, ಬಾಳೆಲೆ, ನಿಟ್ಟೂರು, ಶ್ರೀಮಂಗಲ, ಬಿಟ್ಟಂಗಾಲ, ಕೆದಮಯಳ್ಳೂರು, ತೋರ, ಬಿರುನಾಣಿ, ಆರ್ಜಿ ಗ್ರಾಮದಲ್ಲಿ ಹೆಚ್ಚಾಗಿ ಜಾನುವಾರು ಬಲಿಯಾಗಿದ್ದು, ಮಡಿಕೇರಿ ತಾಲ್ಲೂಕಿನ ಕರಿಕೆ, ಬೆಟ್ಟತ್ತೂರು ವ್ಯಾಪ್ತಿಯಲ್ಲಿ ಅಡ್ಡಾಡಿದಕ್ಕೆ ಕೆಲವು ಪುರಾವೆ ಸಿಕ್ಕಿದೆ ಜೊತೆಗೆ ಸೋಮವಾರಪೇಟೆ ತಾಲ್ಲೂಕಿನ ಕೆಲವೆಡೆ ಕಂಡು ಬಂದಿದೆ ಎನ್ನಲಾಗಿದ್ದು ಈ ಪ್ರದೇಶದಲ್ಲಿ ಹೆಚ್ಚಾಗಿರುವ ಕಾಫಿ ತೋಟಗಳಿಗೆ ತೆರಳಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.

tiger steps

ಕ್ರಮ ಏನು..?
ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಸಹಾ ಮಿತಿ ಮೀರಿದೆ. ಅವುಗಳ ನಿಯಂತ್ರಣ ಕಾಡಿಗೆ ಅಟ್ಟುವ ಕೆಲಸ ಅರಣ್ಯ ಇಲಾಖೆಗೆ ದೊಡ್ಡ ಸವಾಲೇ ಸರಿ. ಈ ನಡುವೆ ವ್ಯಾಘ್ರಗಳು ನಡೆಸುತ್ತಿರುವ ದಾಳಿಗಳ ನಿಯಂತ್ರಣಕ್ಕೆ ವಿಳಂಬವಾಗುತ್ತಿದೆ. ಹುಲಿ ದಾಳಿ ಮಾಡುವ ಪ್ರದೇಶದಲ್ಲಿ ಸತ್ತ ಜಾನುವಾರುವಿನ ಕಳೇಬರ ಇಟ್ಟು ಬೋನ್ ನಲ್ಲಿ ಹಿಡಿಯುವುದು ಕಷ್ಟ ಸಾಧ್ಯ.
ಕಾರಣ ಹೀಗೆ ಮಾಂಸ ಅರಸಿ ಹುಲಿಗಳು ಅದೇ ಸ್ಥಳದಲ್ಲೇ ಅಡ್ಡಾಡುತ್ತವೆ ಅಂದರೆ ಅದು ವಯಸ್ಸಾಗಿರಬೇಕು, ಇಲ್ಲವೇ ಗಾಯವಾಗಿ ಬೇಟೆಯಾಡಲು ಶಕ್ತಿ ಇಲ್ಲದೆಯೂ ಇರಬಹುದು ಅಥವಾ ತಾಯಿಯಿಂದ ಬೇರ್ಪಟ್ಟು ತನ್ನದೇ ಆವಾಸ ತಾಣ ಮಾಡಿಕೊಂಡಿರುವ ಬಾಳುಗೋಡು, ಕಿರುಮಕ್ಕಿ, ಕಲ್ಲುಬಾಣೆಯಲ್ಲಿ ಕಂಡು ಬಂದಿರುವ ವ್ಯಾಘ್ರನ ಮನಸ್ಥಿತಿಯೂ ಕಾರಣವಿರುತ್ತದೆ.

forest kodagu
ಈಗಾಗಲೇ ಇವುಗಳ ಪತ್ತೆಗೆ ಟೈಗರ್ ಟ್ರಾಪ್ ಕ್ಯಾಮರಾಗಳನ್ನು ಅಳವಡಿಸುವ ಕೆಲಸ ಆಗಿದ್ದರೂ ಅವುಗಳ ಸ್ಥಳ(ಲೊಕೇಷನ್) ಪತ್ತೆಗೆ ಕಾಲರ್ ಐಡಿ ಅಳವಡಿಸಿ ಬಳಿಕ ಸೆರೆ ಕಾರ್ಯಾಚರಣೆ ಸೂಕ್ತ. ಇನ್ನು ಅರಣ್ಯದಲ್ಲಿ ಹುಲಿಗಳಿಗೂ ಬೇಟೆಯಾಡಲು ಸೂಕ್ತ ಪ್ರಾಣಿಗಳು ಸಿಗದಿರುವುದು ಮತ್ತು ಅರಣ್ಯದಂಚಿನಲ್ಲಿ ಸುಲಭವಾಗಿ ಸಿಗುವ ಜಾನುವಾರುಗಳು ಆಹಾರ ವಾಗುತ್ತಿವೆ. ಅರಣ್ಯ ಇಲಾಖೆ ಕಾಡಿನಲ್ಲೇ ಹುಲಿಗಳಿಗೆ ಪೂರಕ ವಾತಾವರಣ ನಿರ್ಮಾಣ ಮಾಡುವುದು, ಇದಕ್ಕಾಗಿಯೆ ಅರಣ್ಯ ಇಲಾಖೆಯಲ್ಲಿರುವ ಸಿಬ್ಬಂದಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದು ಸೂಕ್ತ. ಇದೀಗ ದಸರಾ ಸಂಬಂಧ ಹುಲಿ ಕಾರ್ಯಾಚರಣೆಯಲ್ಲಿ ಎಕ್ಸ್‍ಪರ್ಟ್ ಅಭಿಮನ್ಯು ಮೈಸೂರಿನಲ್ಲಿದ್ದಾನೆ. ನಿರಂತರ ಮಳೆಯೂ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿರುವುದು ಗಮನಿಸಬೇಕಾದ ವಿಚಾರ.

ಜಾನುವಾರು ರಕ್ಷಣೆಗೆ ಕೊಟ್ಟಿಗೆ ನಿರ್ಮಿಸಿಕೊಳ್ಳಿ..
ಜಾನುವಾರುಗಳನ್ನು ಸಾಕುವ ಮಾಲೀಕರಿಗೆ ಒಂದು ಜಾನುವಾರು ಬಲಿಯಾದರೆ ಅರಣ್ಯ ಇಲಾಖೆಯಿಂದ ದೊರೆಯುವುದು ಕೇವಲ ಹತ್ತು ಸಾವಿರ ಪರಿಹಾರ. ಇದಲ್ಲದೆ ದಾಳಿ ನಡೆದು ಅದೆಷ್ಟೋ ಹೊತ್ತಿನ ಬಳಿಕ ಅರಣ್ಯ ಇಲಾಖೆ ಭೇಟಿ ನೀಡುವುದು ಹಲವು ರೈತ ಸಂಘಟನೆಗಳ ಅಸಮಧಾನ ಇರುವುದು ಸತ್ಯ. ಇದಕ್ಕೆ ರೈತರಿಗೊಂದು ಸಲಹೆ ಅಂದರೆ ತಮ್ಮ ಜಾನುವಾರುಗಳನ್ನು ಸುಭದ್ರಗೊಳಿಸಿರುವ ಕೊಟ್ಟಿಗೆಯಲ್ಲಿ ಇರಿಸುವುದು. ಹುಲ್ಲು ಹೆಚ್ಚಿದೆ ಎಂದು ಬರಡು ಗದ್ದೆ, ಬಾಣೆಗಳಿಗೆ ಬಿಡುವ ಮುನ್ನ ಅರಣ್ಯ ಇಲಾಖೆಯಲ್ಲಿ ಮಾಹಿತಿ ಪಡೆಯುವುದು ಒಳಿತು. ಜನಸಂದಣಿ ಇಲ್ಲದಿರುವ ಜಾಗದಲ್ಲೇ ಹುಲಿಗಳು ಕಂಡು ಬರುವುದರಿಂದ ಕೊಟ್ಟಿಗೆಯಲ್ಲಿ ಸಾಕುವುದು ಸೂಕ್ತ ಎನ್ನುವುದು ಅರಣ್ಯ ಇಲಾಖೆಯ ಸಲಹೆ. ಆದರೆ ಒಂದು ಹಂತದಲ್ಲಿ ಪ್ರಾಯೋಗಿಕವಾಗಿ ಇದು ಕಷ್ಟ ಸಾಧ್ಯ, ಅನಿವಾರ್ಯವಾಗಿ ಜಾನುವಾರುಗಳನ್ನು ಬಿಡುವ ಮುನ್ನ ಹುಲಿಗಳ ಚಲನವಲನ ಬಗ್ಗೆ ಮಾಹಿತಿ ಪಡೆಯುದು ಸೂಕ್ತ ಎನ್ನಿಸುತ್ತದೆ.

ವರದಿ/ಫೋಟೋ: ಗಿರಿಧರ್ ಕೊಂಪುಳೀರಾ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cofeee plantationIncreasedKODAGUthreaten to lifetiger population
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram