ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಡಗಿಗೆ ಹುಲಿ ಸಂಖ್ಯೆ ಹೆಚ್ಚಳವೇ ಮುಳುವಾಯಿತೇ..?

Kariyappa N by Kariyappa N
October 23, 2020
in Newsbeat, Saaksha Special, ಎಸ್ ಸ್ಪೆಷಲ್, ರಾಜ್ಯ
kodagu forest
Share on FacebookShare on TwitterShare on WhatsappShare on Telegram

ಮಡಿಕೇರಿ: ದೇಶದೆಲ್ಲೆಡೆ ರಾಯಲ್ ಬಂಗಾಲಿ ಹುಲಿಯ ಸಂತತಿ ಹೆಚ್ಚಾಗಿದೆ. ಈಗಾಗಲೇ ನಶಿಸುತ್ತಿರುವ ಹುಲಿಗಳ ರಕ್ಷಣೆಯಲ್ಲಿ ಸಾಧನೆ ಮಾಡಿರುವುದಕ್ಕೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರಿ ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿರುವುದಂತೂ ನಿಜ.

ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯ ಪರಿಣಾಮ ಕೊಡಗಿನ ಅರಣ್ಯದಂಚಿನ ಗ್ರಾಮ ಸೇರಿದಂತೆ ಜಲ ಮೂಲಗಳಿರುವ ಕಾಫಿ ತೋಟಗಳಲ್ಲಿ ಹುಲಿಗಳು ಪ್ರತ್ಯಕ್ಷವಾಗುತ್ತಿವೆ. ಭತ್ತದ ಗದ್ದೆಗಳ ಏರಿ, ತೋಟದ ನಡುವೆ ಹುಲಿ ಹೆಜ್ಜೆ ಪತ್ತೆ, ಮೇಯಲು ಬಿಟ್ಟ ಜಾನುವಾರುಗಳ ಮೇಲೆ ದಾಳಿ ಮಾಡಿ ಅವುಗಳ ಸಾವಿಗೆ ಕಾರಣವಾಗುತ್ತಿರುವುದು ಆತಂಕ ಮೂಡಿಸಿದೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026
5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

June 18, 2026

30ಕ್ಕೂ ಹೆಚ್ಚು ಹಸುಗಳ ಬಲಿ
ಇದು ಅಚ್ಚರಿಯಾದರೂ ಸತ್ಯ. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ ನಾಗರಹೊಳೆಗೆ ಹೊಂದಿಕೊಂಡಂತೆ ಇರುವ ವಿರಾಜಪೇಟೆ ತಾಲ್ಲೂಕಿನ ಬಹುತೇಕ ಗ್ರಾಮಗಳು ಈ ಸಮಸ್ಯೆ ಎದುರಿಸುತ್ತಿದೆ. ಅರಣ್ಯ ಇಲಾಖೆ ಬಳಿಯಿರುವ ಮಾಹಿತಿ ಪ್ರಕಾರ ಕಳೆದ 11 ತಿಂಗಳಿನಲ್ಲಿ 33 ಜಾನುವಾರುಗಳು ಹುಲಿಗಳ ದಾಳಿಗೆ ಬಲಿಯಾಗಿವೆ.

tiger attack death

ಹೆಚ್ಚು ಹುಲಿ ಓಡಾಟದ ಪ್ರದೇಶಗಳು..
ನಾಗರಹೊಳೆ ಅಂಚಿನಲ್ಲಿರುವ ಕಾರಣ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು, ಕಿರುಮಕ್ಕಿ, ಕಲ್ಲುಬಾಣೆ, ಬಾಳೆಲೆ, ನಿಟ್ಟೂರು, ಶ್ರೀಮಂಗಲ, ಬಿಟ್ಟಂಗಾಲ, ಕೆದಮಯಳ್ಳೂರು, ತೋರ, ಬಿರುನಾಣಿ, ಆರ್ಜಿ ಗ್ರಾಮದಲ್ಲಿ ಹೆಚ್ಚಾಗಿ ಜಾನುವಾರು ಬಲಿಯಾಗಿದ್ದು, ಮಡಿಕೇರಿ ತಾಲ್ಲೂಕಿನ ಕರಿಕೆ, ಬೆಟ್ಟತ್ತೂರು ವ್ಯಾಪ್ತಿಯಲ್ಲಿ ಅಡ್ಡಾಡಿದಕ್ಕೆ ಕೆಲವು ಪುರಾವೆ ಸಿಕ್ಕಿದೆ ಜೊತೆಗೆ ಸೋಮವಾರಪೇಟೆ ತಾಲ್ಲೂಕಿನ ಕೆಲವೆಡೆ ಕಂಡು ಬಂದಿದೆ ಎನ್ನಲಾಗಿದ್ದು ಈ ಪ್ರದೇಶದಲ್ಲಿ ಹೆಚ್ಚಾಗಿರುವ ಕಾಫಿ ತೋಟಗಳಿಗೆ ತೆರಳಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.

tiger steps

ಕ್ರಮ ಏನು..?
ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಸಹಾ ಮಿತಿ ಮೀರಿದೆ. ಅವುಗಳ ನಿಯಂತ್ರಣ ಕಾಡಿಗೆ ಅಟ್ಟುವ ಕೆಲಸ ಅರಣ್ಯ ಇಲಾಖೆಗೆ ದೊಡ್ಡ ಸವಾಲೇ ಸರಿ. ಈ ನಡುವೆ ವ್ಯಾಘ್ರಗಳು ನಡೆಸುತ್ತಿರುವ ದಾಳಿಗಳ ನಿಯಂತ್ರಣಕ್ಕೆ ವಿಳಂಬವಾಗುತ್ತಿದೆ. ಹುಲಿ ದಾಳಿ ಮಾಡುವ ಪ್ರದೇಶದಲ್ಲಿ ಸತ್ತ ಜಾನುವಾರುವಿನ ಕಳೇಬರ ಇಟ್ಟು ಬೋನ್ ನಲ್ಲಿ ಹಿಡಿಯುವುದು ಕಷ್ಟ ಸಾಧ್ಯ.
ಕಾರಣ ಹೀಗೆ ಮಾಂಸ ಅರಸಿ ಹುಲಿಗಳು ಅದೇ ಸ್ಥಳದಲ್ಲೇ ಅಡ್ಡಾಡುತ್ತವೆ ಅಂದರೆ ಅದು ವಯಸ್ಸಾಗಿರಬೇಕು, ಇಲ್ಲವೇ ಗಾಯವಾಗಿ ಬೇಟೆಯಾಡಲು ಶಕ್ತಿ ಇಲ್ಲದೆಯೂ ಇರಬಹುದು ಅಥವಾ ತಾಯಿಯಿಂದ ಬೇರ್ಪಟ್ಟು ತನ್ನದೇ ಆವಾಸ ತಾಣ ಮಾಡಿಕೊಂಡಿರುವ ಬಾಳುಗೋಡು, ಕಿರುಮಕ್ಕಿ, ಕಲ್ಲುಬಾಣೆಯಲ್ಲಿ ಕಂಡು ಬಂದಿರುವ ವ್ಯಾಘ್ರನ ಮನಸ್ಥಿತಿಯೂ ಕಾರಣವಿರುತ್ತದೆ.

forest kodagu
ಈಗಾಗಲೇ ಇವುಗಳ ಪತ್ತೆಗೆ ಟೈಗರ್ ಟ್ರಾಪ್ ಕ್ಯಾಮರಾಗಳನ್ನು ಅಳವಡಿಸುವ ಕೆಲಸ ಆಗಿದ್ದರೂ ಅವುಗಳ ಸ್ಥಳ(ಲೊಕೇಷನ್) ಪತ್ತೆಗೆ ಕಾಲರ್ ಐಡಿ ಅಳವಡಿಸಿ ಬಳಿಕ ಸೆರೆ ಕಾರ್ಯಾಚರಣೆ ಸೂಕ್ತ. ಇನ್ನು ಅರಣ್ಯದಲ್ಲಿ ಹುಲಿಗಳಿಗೂ ಬೇಟೆಯಾಡಲು ಸೂಕ್ತ ಪ್ರಾಣಿಗಳು ಸಿಗದಿರುವುದು ಮತ್ತು ಅರಣ್ಯದಂಚಿನಲ್ಲಿ ಸುಲಭವಾಗಿ ಸಿಗುವ ಜಾನುವಾರುಗಳು ಆಹಾರ ವಾಗುತ್ತಿವೆ. ಅರಣ್ಯ ಇಲಾಖೆ ಕಾಡಿನಲ್ಲೇ ಹುಲಿಗಳಿಗೆ ಪೂರಕ ವಾತಾವರಣ ನಿರ್ಮಾಣ ಮಾಡುವುದು, ಇದಕ್ಕಾಗಿಯೆ ಅರಣ್ಯ ಇಲಾಖೆಯಲ್ಲಿರುವ ಸಿಬ್ಬಂದಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದು ಸೂಕ್ತ. ಇದೀಗ ದಸರಾ ಸಂಬಂಧ ಹುಲಿ ಕಾರ್ಯಾಚರಣೆಯಲ್ಲಿ ಎಕ್ಸ್‍ಪರ್ಟ್ ಅಭಿಮನ್ಯು ಮೈಸೂರಿನಲ್ಲಿದ್ದಾನೆ. ನಿರಂತರ ಮಳೆಯೂ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿರುವುದು ಗಮನಿಸಬೇಕಾದ ವಿಚಾರ.

ಜಾನುವಾರು ರಕ್ಷಣೆಗೆ ಕೊಟ್ಟಿಗೆ ನಿರ್ಮಿಸಿಕೊಳ್ಳಿ..
ಜಾನುವಾರುಗಳನ್ನು ಸಾಕುವ ಮಾಲೀಕರಿಗೆ ಒಂದು ಜಾನುವಾರು ಬಲಿಯಾದರೆ ಅರಣ್ಯ ಇಲಾಖೆಯಿಂದ ದೊರೆಯುವುದು ಕೇವಲ ಹತ್ತು ಸಾವಿರ ಪರಿಹಾರ. ಇದಲ್ಲದೆ ದಾಳಿ ನಡೆದು ಅದೆಷ್ಟೋ ಹೊತ್ತಿನ ಬಳಿಕ ಅರಣ್ಯ ಇಲಾಖೆ ಭೇಟಿ ನೀಡುವುದು ಹಲವು ರೈತ ಸಂಘಟನೆಗಳ ಅಸಮಧಾನ ಇರುವುದು ಸತ್ಯ. ಇದಕ್ಕೆ ರೈತರಿಗೊಂದು ಸಲಹೆ ಅಂದರೆ ತಮ್ಮ ಜಾನುವಾರುಗಳನ್ನು ಸುಭದ್ರಗೊಳಿಸಿರುವ ಕೊಟ್ಟಿಗೆಯಲ್ಲಿ ಇರಿಸುವುದು. ಹುಲ್ಲು ಹೆಚ್ಚಿದೆ ಎಂದು ಬರಡು ಗದ್ದೆ, ಬಾಣೆಗಳಿಗೆ ಬಿಡುವ ಮುನ್ನ ಅರಣ್ಯ ಇಲಾಖೆಯಲ್ಲಿ ಮಾಹಿತಿ ಪಡೆಯುವುದು ಒಳಿತು. ಜನಸಂದಣಿ ಇಲ್ಲದಿರುವ ಜಾಗದಲ್ಲೇ ಹುಲಿಗಳು ಕಂಡು ಬರುವುದರಿಂದ ಕೊಟ್ಟಿಗೆಯಲ್ಲಿ ಸಾಕುವುದು ಸೂಕ್ತ ಎನ್ನುವುದು ಅರಣ್ಯ ಇಲಾಖೆಯ ಸಲಹೆ. ಆದರೆ ಒಂದು ಹಂತದಲ್ಲಿ ಪ್ರಾಯೋಗಿಕವಾಗಿ ಇದು ಕಷ್ಟ ಸಾಧ್ಯ, ಅನಿವಾರ್ಯವಾಗಿ ಜಾನುವಾರುಗಳನ್ನು ಬಿಡುವ ಮುನ್ನ ಹುಲಿಗಳ ಚಲನವಲನ ಬಗ್ಗೆ ಮಾಹಿತಿ ಪಡೆಯುದು ಸೂಕ್ತ ಎನ್ನಿಸುತ್ತದೆ.

ವರದಿ/ಫೋಟೋ: ಗಿರಿಧರ್ ಕೊಂಪುಳೀರಾ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cofeee plantationIncreasedKODAGUthreaten to lifetiger population
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

by Shwetha
June 18, 2026
0

ನೀಟ್ ಮರು-ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಕ್ರಮದಿಂದ ತಮ್ಮ ಸೇವೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram