ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v PAK: ಇಂಡೋ v ಪಾಕ್‌ ಹೈವೋಲ್ಟೇಜ್‌ ಫೈಟ್‌: ಅಹ್ಮದಾಬಾದ್‌ನಲ್ಲಿ ವೇದಿಕೆ ಸಜ್ಜು

ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

C Dinesh by C Dinesh
October 14, 2023
in Sports, ಕ್ರಿಕೆಟ್ ವಿಶ್ವಕಪ್ 2023
Share on FacebookShare on TwitterShare on WhatsappShare on Telegram

ಕೋಟ್ಯಾಂತರ ಕ್ರಿಕೆಟ್‌ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದ ಏಕದಿನ ವಿಶ್ವಕಪ್‌ನ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯಲಿದ್ದು, ಉಭಯ ತಂಡಗಳ ನಡುವಿನ ಹೈವೋಲ್ಟೇಜ್‌ ಕದನಕ್ಕೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ.

ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಎರಡು ತಂಡಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ ಪ್ರಾಬಲ್ಯ ಮೆರೆದಿವೆ. ಟೂರ್ನಿಯ ಆಡಿರುವ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಈ ತಂಡಗಳು ಇದೀಗ ಹ್ಯಾಟ್ರಿಕ್‌ ಜಯದ ಲೆಕ್ಕಾಚಾರದೊಂದಿಗೆ ಮಹತ್ವದ ಹಣಾಹಣಿಗೆ ಸಜ್ಜಾಗಿವೆ. ಈ ಎರಡು ಬಲಿಷ್ಠ ತಂಡಗಳ ನಡುವಿನ ರೋಚಕ ಕಾದಾಟ ವೀಕ್ಷಿಸಲು ಕೇವಲ ಭಾರತ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಇರುವ ಅಸಂಖ್ಯಾತ ಕ್ರಿಕೆಟ್‌ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026

ಟೀಂ ಇಂಡಿಯಾ ಪ್ರಾಬಲ್ಯ:
ಪ್ರಸಕ್ತ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಶುಭಾರಂಭ ಮಾಡಿದ್ದ ಭಾರತ, 2ನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನ ಸೋಲಿಸಿ ತನ್ನ ಪ್ರಾಬಲ್ಯ ಮರೆದಿದೆ. ಇದೀಗ 3ನೇ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನ ಎದುರಿಸುತ್ತಿರುವ ರೋಹಿತ್‌ ಶರ್ಮ ಸಾರಥ್ಯದ ಟೀಂ ಇಂಡಿಯಾ, ಮತ್ತೊಂದು ಜಯದ ಲೆಕ್ಕಾಚಾರದಲ್ಲಿದೆ. ಈ ಹಿಂದಿನ ಅಂಕಿಅಂಶಗಳನ್ನ ಗಮನಿಸಿದರೆ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲುವ ಫೇವರೆಟ್‌ ತಂಡವಾಗಿದ್ದರು, ಪಾಕ್‌ ಪಡೆಯನ್ನ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ.

ಭಾರತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ಉತ್ತಮ ಲಯದೊಂದಿಗೆ ಬೌಲಿಂಗ್‌ ಪ್ರದರ್ಶಿಸಿದ್ದಾರೆ. ಇನ್ನೂ ಬ್ಯಾಟಿಂಗ್‌ ವಿಭಾಗದಲ್ಲಿ ನಾಯಕ ರೋಹಿತ್‌ ಶರ್ಮ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಫಾರ್ಮ್‌ ಕಂಡುಕೊಂಡಿದ್ದರೆ. ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ ಅವರುಗಳು ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ. ಆದರೆ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್‌ ಆಗಿ ಇಂದು ಯಾರು ಕಣಕ್ಕಿಳಿಯುತ್ತಾರೆ? ಎಂಬ ಪ್ರಶ್ನೆ ಮೂಡಿದೆ.

ಡೆಂಘೀ ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಶುಭ್ಮನ್‌ ಗಿಲ್‌, ಇಂದಿನ ಪಂದ್ಯಕ್ಕೆ ಕಣಕ್ಕಿಳಿಯುವ ನಿರೀಕ್ಷೆ ಹೆಚ್ಚಾಗಿದೆ. ಒಂದೊಮ್ಮೆ ಗಿಲ್‌ ಆಡುವ ಸಾಧ್ಯತೆ ಇಲ್ಲವಾದಲ್ಲಿ ಮತ್ತೊಮ್ಮೆ ಇಶಾನ್‌ ಕಿಶನ್‌ಗೆ ಅವಕಾಶ ಲಭಿಸಲಿದೆ. ಮತ್ತೊಂದೆಡೆ ಆಡಿರುವ ಎರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ವೇಗಿ ಮೊಹಮ್ಮದ್‌ ಸಿರಾಜ್‌, ಇಂದಿನ ಪಂದ್ಯಕ್ಕೆ ಸ್ಥಾನ ಪಡೆಯುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಇವರ ಬದಲಿಗೆ ವೇಗಿ ಮೊಹಮ್ಮದ್‌ ಶಮಿ ಅವರಿಗೆ ತಂಡದಲ್ಲಿ ಸ್ಥಾನ ಸಿಗುವ ಬಗ್ಗೆಯೂ ನಿರೀಕ್ಷೆ ಇದೆ.

ಜಯದ ಲಯದಲ್ಲಿ ಪಾಕ್‌:
ಈ ಬಾರಿಯ ವಿಶ್ವಕಪ್‌ನಲ್ಲಿ ಆಡಿರುವ ಎರಡು ಪಂದ್ಯಗಳನ್ನ ಗೆಲುವು ಸಾಧಿಸಿರುವ ಪಾಕಿಸ್ತಾನ ಕೂಡ ಆತ್ಮವಿಶ್ವಾಸದ ಅಲೆಯಲ್ಲಿದೆ. ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಗೆದ್ದುಬೀಗಿದ್ದ ಪಾಕ್‌ ಆಟಗಾರರು, ಕಳೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಲಭಿಸಿದ ದಾಖಲೆಯ ಗೆಲುವು ಪಾಕ್‌ ಆಟಗಾರರ ಆತ್ಮವಿಶ್ವಾಸ ಹೆಚ್ಚಿಸಿದೆ. ಹೀಗಾಗಿ ಟೀಂ ಇಂಡಿಯಾ ವಿರುದ್ಧದ ಇಂದಿನ ಪಂದ್ಯದಲ್ಲೂ ಪಾಕಿಸ್ತಾನದ ಆಟಗಾರರು ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. ಆದರೆ ವಿಶ್ವಕಪ್‌ ಪಂದ್ಯಗಳಲ್ಲಿ ಭಾರತದ ವಿರುದ್ಧ ಈವರೆಗೂ ಗೆಲುವನ್ನೇ ಕಾಣದ ಪಾಕ್‌ ಪಡೆ, ಇದನ್ನ ಬದಲಿಸುವ ತವಕದಲ್ಲಿದ್ದಾರೆ.

ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಪಾಕಿಸ್ತಾನ ತಂಡ:
ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಫ್ರಿದಿ ವಾಸಿಂ.

IND v PAK, Team India, Pakistan, World Cup, Sports Karnataka

Tags: IND v PAKPakistansports karnatakateam indiaWorld Cup
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram