IND vs SL series : ಹಾರ್ದಿಕ್ ಪಾಂಡ್ಯಾಗೆ ನಾಯಕತ್ವದ ಜವಾಬ್ದಾರಿ..!!
ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಶ್ರೀಲಂಕಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನ ಪ್ರಕಟಿಸಲಾಗಿದ್ದು, ನ್ಯೂಜಿ಼ಲೆಂಡ್ ವಿರುದ್ಧದ T20 ಸರಣಿಯಲ್ಲಿ ಯಶಸ್ವಿಯಾಗಿ ತಂಡವನ್ನ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಟಿ20 ತಂಡದ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.
ಟೀಂ ಇಂಡಿಯಾದ ಅತ್ಯುತ್ತಮ ಟಿ20 ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಅವರಿಗೆ ತಂಡದ ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ. ಉಳಿದಂತೆ ಶಿವಂ ಮಾವಿ ಮತ್ತು ಮುಖೇಶ್ ಕುಮಾರ್ ಅವರುಗಳಿಗೆ ಇದೇ ಮೊದಲ ಬಾರಿಗೆ T20I ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಉಳಿದಂತೆ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ಗಳಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ರಿಷಬ್ ಪಂತ್ ಅವರುಗಳಿಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
2018ರ ಅಂಡರ್-19 ವಿಶ್ವಕಪ್ ವಿಜೇತ ತಂಡದ ಆಟಗಾರನಾಗಿದ್ದ, ಉತ್ತರ ಪ್ರದೇಶದ ಶಿವಂ ಮಾವಿ ಟೀಂ ಇಂಡಿಯಾದ ರಾಷ್ಟ್ರೀಯ ತಂಡದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
2022ನೇ ಸಾಲಿನ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಾವಿ, 7 ಪಂದ್ಯಗಳಿಂದ 10 ವಿಕೆಟ್ ಪಡೆದಿದ್ದರು. ಅಲ್ಲದೇ 2022ನೇ ಸಾಲಿನ ವಿಜಯ್ ಹಜಾ಼ರೆ ಪಂದ್ಯಾವಳಿಯಲ್ಲಿ ಸಹ ಶಿವಂ ಮಾವಿ 7 ಪಂದ್ಯಗಳಿಂದ 14 ವಿಕೆಟ್ ಪಡೆದು ಗಮನ ಸೆಳೆದಿದ್ದರು.
ಇನ್ನೂ ಬೆಂಗಾಲದ ಯುವ ವೇಗಿ ಮುಖೇಶ್ ಕುಮಾರ್ ಟೀಂ ಇಂಡಿಯಾ ಪರ ಆಡುವ ಅವಕಾಶ ಪಡೆದಿದ್ದಾರೆ. ಇತ್ತೀಚೆಗೆ ಭಾರತ ಎ ಹಾಗೂ ನ್ಯೂಜಿ಼ಲೆಂಡ್ ಎ ವಿರುದ್ಧದ ಪಂದ್ಯದಲ್ಲಿ ಆಡಿದ್ದ ಮುಖೇಶ್, ಇರಾನಿ ಟ್ರೋಫಿಯಲ್ಲಿ ರೆಸ್ಟ್ ಆಫ್ ಇಂಡಿಯಾ ತಂಡದಲ್ಲಿ ಆಡಿದ್ದರು. ಈ ಎರಡು ಪಂದ್ಯಾವಳಿಯಲ್ಲೂ ಸಹ ಮುಖೇಶ್ ಕುಮಾರ್, ಸ್ಥಿರ ಪ್ರದರ್ಶನದಿಂದ ಗಮನ ಸೆಳೆದಿದ್ದರು.
2022ರ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯದ ದಿನೇಶ್ ಕಾರ್ತಿಕ್ ಅವರನ್ನ ಶ್ರೀಲಂಕಾ ವಿರುದ್ಧದ ಸರಣಿಯಿಂದಲೂ ಕೈಬಿಡಲಾಗಿದೆ. ಉಳಿದಂತೆ ಮಹಾರಾಷ್ಟ್ರದ ರಾಹುಲ್ ತ್ರಿಪಾತಿ ಮತ್ತೆ ತಂಡದಲ್ಲಿ ಸ್ಥಾನ ಪಡೆದಿದ್ದು, ಪ್ಲೇಯಿಂಗ್ ಇಲವೆನ್ನಲ್ಲಿ ಆಡುವ ನಿರೀಕ್ಷೆ ಹೊಂದಿದ್ದಾರೆ.
ಭಾರತ T20I ತಂಡ:
ಹಾರ್ದಿಕ್ ಪಾಂಡ್ಯ(ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಾಹುಲ್ ತ್ರಿಪಾತಿ, ಸಂಜೂ ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಅಕ್ಸರ್ ಪಟೇಲ್, ಅರ್ಶದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲ್ಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.
IND vs SL series , hardik pandya captaincy