ಬೆಂಗಳೂರು: ಅಪರಾರ್ಟ್ ಮೆಂಟ್ ನ ಮಾಲೀಕರ ಮಗನೊಬ್ಬ ಕುಡಿದು ಬಂದು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ.
ನಗರದ ಸಂಜಯನಗರ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಯುವತಿ ದೂರು ದಾಖಲಿಸಿದ್ದಾರೆ. ಪ್ಲಾನೆಟ್ ವಿಸ್ತಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ಮಾಲೀಕನ ಮಗ ಮಂಜುನಾಥ್ ಗೌಡ ವಿರುದ್ಧ ಸಂಜಯ್ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೃತ್ಯ ಖಂಡಿಸಿ ಪಶ್ಚಿಮ ಬಂಗಾಳ ಮೂಲದ ಯುವತಿ ದೂರು ದಾಖಲಿಸಿದ್ದಾಳೆ.
ಸಂತ್ರಸ್ತ ಯುವತಿ ಫ್ಲಾಟ್ ನಲ್ಲಿ ಬಾಡಿಗೆಗೆ ಇದ್ದರು. ಪಾರ್ಸೆಲ್ ತೆಗೆದುಕೊಳ್ಳಲು ಗೇಟ್ ಬಳಿ ಬಂದವಳನ್ನ ಫ್ಲ್ಯಾಟ್ಗೆ ಎಳೆದೊಯ್ಯಲು ಆರೋಪಿ ಯತ್ನಿಸಿದ್ದ. ಅವಾಶ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿ ಫ್ಲಾಟ್ಗೆ ಎಳೆದೊಯ್ಯಲು ಯತ್ನಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ಆತ ಕುಡಿದಿದ್ದರಿಂದ ಏನೂ ಮಾತನಾಡದೇ ಯುವತಿ ಸುಮ್ಮನಾಗಿದ್ದಳು. ಮತ್ತೆ ಬೈಯುತ್ತಾ ಯುವತಿ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೇ ಬಿಗಿಯಾಗಿ ಕುತ್ತಿಗೆ ಹಿಡಿದಿದ್ದ, ತಪ್ಪಿಸಿಕೊಳ್ಳಲು ಹೋದಾಗ ಬೆರಳು ಕಚ್ಚಿ ಗಾಯಗೊಳಿಸಿದ್ದಾನೆ. ಆಗ ಆತನ ಮನೆಯೊಳಗೆ ಯುವತಿಯನ್ನ ಎಳೆದುಕೊಂಡು ಹೋಗಲು ಯತ್ನಿಸಿದ್ದಾನೆ. ತಪ್ಪಿಸಿಕೊಂಡು ಹೋಗುವಾದ ಮತ್ತೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.






