ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಭಾರತ ಯಶಸ್ವಿ…

admin by admin
May 20, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಮೇ 20 : ಜಗತ್ತಿನಾದ್ಯಂತ ‌ಕೊರೊನಾ ಸೋಂಕು ವ್ಯಾಪಕವಾಗಿ ಪಸರಿಸಿದ್ದು, ವಿಶ್ವವನ್ನೇ ತಲ್ಲಣಗೊಳಿಸಿದೆ. ವಿ‌ಶ್ವದ ಬಲಿಷ್ಟ ದೇಶಗಳು ಕೊರೊನಾ ಸೋಂಕಿನ ಅರ್ಭಟ ತಡೆಯಲಾಗದೆ ಅದರ ಮುಂದೆ ಮಂಡಿಯೂರಿ ಕುಳಿತಿದೆ. ಜಾಗತಿಕವಾಗಿ ಕೋಟ್ಯಾಂತರ ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದರೆ, ಈಗಾಗಲೇ ಲಕ್ಷಾಂತರ ಮಂದಿಯನ್ನು ಕೊರೊನಾ ಬಲಿ ತೆಗೆದುಕೊಂಡಿದೆ.

ಜನವರಿ 30 ರಂದು ಭಾರತದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಎಂಬ ಮಹಾ ಮಾರಿ ಈಗ ಲಕ್ಷ ದಾಟಿದೆ. ಇತರ ರಾಷ್ಟ್ರಗಳೊಡನೆ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆಯ ವೇಗವನ್ನು ಗಮನಿಸಿದಾಗ ಭಾರತದಲ್ಲಿ ಜಾಗತಿಕವಾಗಿ ಶ್ರೀಮಂತ ರಾಷ್ಟ್ರಗಳಾದ ಅಮೆರಿಕ, ಯುರೋಪಿಯನ್ ರಾಷ್ಟ್ರಗಳಿಗಿಂತ ಕಡಿಮೆ ಇರುವುದು ಕಂಡು ಬರುತ್ತದೆ. ವರ್ಲ್ಡೊಮೀಟರ್ ಅಂಕಿಅಂಶದಲ್ಲಿ, 100 ರಿಂದ ಒಂದು ಲಕ್ಷ ಕೊರೊನಾ ಪ್ರಕರಣಗಳು ಭಾರತದಲ್ಲಿ 64 ದಿನಗಳ ಅವಧಿಯಲ್ಲಿ ದಾಖಲಾಗಿದೆ.‌ ಈ ಮೂಲಕ ಅಮೆರಿಕ, ಬ್ರಿಟನ್ ಹಾಗೂ ಸ್ಪೇನ್ ಮುಂತಾದ ಶ್ರೀಮಂತ ರಾಷ್ಟ್ರಗಳಿಗೆ ಹೋಲಿಸಿದಾಗ ಭಾರತ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಹೆಚ್ಚು ಯಶಸ್ಸು ಕಂಡಿದೆ ಎಂದು ಹೇಳಬಹುದು. ಇದುವರೆಗೆ ಕೊರೊನಾ ಸೋಂಕನ್ನು ‌ಪತ್ತೆ ಹಚ್ಚಲು 20 ಲಕ್ಷಕ್ಕಿಂತ ಅಧಿಕ ಪರೀಕ್ಷೆಗಳು ‌ನಡೆದಿದ್ದು, ಮೇ ಅಂತ್ಯದ ಒಳಗೆ ಇಷ್ಟು ಪರೀಕ್ಷೆಗಳನ್ನು ನಡೆಸಬೇಕು ಎಂದು ಭಾರತ ಗುರಿ ಹಾಕಿಕೊಂಡಿತ್ತು. ದೇಶದ ಸರಕಾರಿ, ಖಾಸಗಿ ಪ್ರಯೋಗಾಲಯಗಳ ಅವಿರತ‌ ಪ್ರಯತ್ನದಿಂದ ಅಂದುಕೊಂಡ ಸಮಯಕ್ಕಿಂತ ಬೇಗನೆ ಇಷ್ಟೊಂದು ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗಿದೆ.

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಅಮೆರಿಕ ಹಾಗೂ ಸ್ಪೇನ್‌ಗಳಂತಹ ರಾಷ್ಟ್ರಗಳಲ್ಲಿ 30 ದಿನಗಳ ಅವಧಿಗಿಂತಲೂ ಕಡಿಮೆ ಸಮಯದಲ್ಲಿ ಕೊರೊನಾ ಪ್ರಕರಣಗಳು 100 ರಿಂದ 1 ಲಕ್ಷ ದಾಖಲಾಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕ 100 ರಿಂದ ‌1 ಲಕ್ಷ ಪ್ರಕರಣ ದಾಖಲಾಗಲು 25 ದಿನಗಳನ್ನು ತೆಗೆದುಕೊಂಡಿದ್ದರೆ, ಸ್ಪೇನ್‌ನಲ್ಲಿ 30 ದಿನಗಳ ಅವಧಿಯಲ್ಲಿ 100ರಿಂದ ಒಂದು ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಜರ್ಮನಿಯಲ್ಲಿ 35 ದಿನಗಳ ಅವಧಿಯಲ್ಲಿ 100ರಿಂದ ಒಂದು ಲಕ್ಷ ಪ್ರಕರಣಗಳನ್ನು ದಾಖಲಾದರೆ, ಇಟಲಿ 36, ಫ್ರಾನ್ಸ್ 39 ಹಾಗೂ ಬ್ರಿಟನ್ 42 ದಿನಗಳ ಅವಧಿಯಲ್ಲಿ 100ರಿಂದ ಒಂದು ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ವಿಶ್ವದಲ್ಲೇ ಎರಡನೇ ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಭಾರತದಲ್ಲಿ 100ರಿಂದ ಒಂದು ಲಕ್ಷ ಕೊರೊನಾ ಸೋಂಕು ಪ್ರಕರಣಗಳು 64 ದಿನಗಳ ಅವಧಿಯಲ್ಲಿ ದಾಟಿರುವುದನ್ನು ಗಮನಿಸುವಾಗ ಭಾರತ ಕೊರೊನಾ ತಡೆಗಟ್ಟುವುದರಲ್ಲಿ ಹೆಚ್ಚಿನ ಯಶಸ್ಸು ‌ಕಂಡಿದೆ ಎಂದು ಹೇಳಬಹುದು.
ಆದರೆ ಇದೀಗ ದೇಶದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಬಹುತೇಕ ನಿರ್ಬಂಧಗಳು ಸಡಿಲಿಕೆಯಾಗುತ್ತಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಹೋರಾಟಕ್ಕೆ ಸಂಬಂಧಿಸಿದಂತೆ ಹೊಸ ಸವಾಲುಗಳು ಹುಟ್ಟಿಕೊಂಡಿವೆ. ದೇಶದಲ್ಲಿ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಅಲ್ಲಿಂದ ಇತರ ರಾಜ್ಯಗಳಿಗೆ ಕೊರೊನಾ ‌ಹರಡುತ್ತಿರುವುದು ಕಳವಳ ಹುಟ್ಟಿಸಿದೆ.

 

ಮಹಾರಾಷ್ಟ್ರದಲ್ಲಿ ದೇಶದ ಒಟ್ಟು ಜನಸಂಖ್ಯೆಯ ಮೂರನೇ ಒಂದರಷ್ಟು ಕೊರೋನಾ ಸೋಂಕು ‌ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 33 ಸಾವಿರ ದಾಟಿದ್ದರೆ ಸಾವಿನ ಸಂಖ್ಯೆ 2 ಸಾವಿರ ಮೀರಿದೆ. ಎರಡನೇ ಸ್ಥಾನದಲ್ಲಿರುವ ಗುಜರಾತ್ ನಲ್ಲಿ ಇಲ್ಲಿಯವರೆಗೆ 659 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರೆ, 12 ಸಾವಿರದಷ್ಟು ಮಂದಿಯಲ್ಲಿ ಕೊರೊನಾ ಸೋಂಕು ‌ಪತ್ತೆಯಾಗಿದೆ. ಮೂರನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ‌ಪ್ರಕರಣಗಳು ಏರಿಕೆಯಾಗುತ್ತಿದ್ದು, ಈಗಾಗಲೇ 13 ಸಾವಿರದ ಆಸುಪಾಸಿನಲ್ಲಿ ಇದೆ. ದೆಹಲಿಯಲ್ಲಿ, ರಾಜಸ್ಥಾನ ಮಧ್ಯಪ್ರದೇಶದಲ್ಲೂ ಕೊರೋನಾ ಸೋಂಕಿತರ‌ ಸಂಖ್ಯೆ ಏರಿಕೆಯಾಗುತ್ತಿದ್ದು, ಸವಾಲನ್ನು ‌ಒಡ್ಡಿದೆ.

Tags: coronavirus
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram