ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಲ್‌ಒಸಿ ಕದನ ವಿರಾಮ ಕುರಿತು ಭಾರತ ಪಾಕಿಸ್ತಾನ ಜಂಟಿ ಹೇಳಿಕೆ ಏಕೆ ಮುಖ್ಯವಾಗಿದೆ ?

Shwetha by Shwetha
February 27, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಎಲ್‌ಒಸಿ ಕದನ ವಿರಾಮ ಕುರಿತು ಭಾರತ ಪಾಕಿಸ್ತಾನ ಜಂಟಿ ಹೇಳಿಕೆ ಏಕೆ ಮುಖ್ಯವಾಗಿದೆ ?

ಹೊಸದಿಲ್ಲಿ, ಫೆಬ್ರವರಿ27: ಫೆಬ್ರವರಿ 24 ರ ಮಧ್ಯರಾತ್ರಿಯಿಂದ (ಬುಧವಾರ) ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಪ್ರಾರಂಭಿಸಿದ್ದಾಗಿ ಭಾರತ ಮತ್ತು ಪಾಕಿಸ್ತಾನದ ಸೇನೆಗಳು ಫೆಬ್ರವರಿ 25 ರಂದು ಪ್ರಕಟಿಸಿವೆ.
India-Pakistan ceasefire
ಫೆಬ್ರವರಿ 22 ರಂದು ತಮ್ಮ ದೂರವಾಣಿ ಹಾಟ್‌ಲೈನ್‌ನಲ್ಲಿ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ಪರಮ್‌ಜಿತ್ ಸಿಂಗ್ ಸಂಘ ಮತ್ತು ಪಾಕಿಸ್ತಾನದ ಲೆಫ್ಟಿನೆಂಟ್ ಮೇಜ್ ಜನರಲ್ ನೌಮನ್ ಜಕಾರಿಯಾ ಅವರ ನಡುವಿನ ಚರ್ಚೆಯ ನಂತರ ಸೈನ್ಯವು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

ಆಡಿಯೋ ಹೇಳಿಕೆಯಲ್ಲಿ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಭದ್ರತಾ ವ್ಯವಹಾರಗಳ ಸಲಹೆಗಾರ ಮೊಯೀದ್ ಯೂಸುಫ್ ಕದನ ವಿರಾಮವು ತೆರೆಮರೆಯಲ್ಲಿ ನಡೆದ ಮಾತುಕತೆಗಳ ಫಲಿತಾಂಶವಾಗಿದೆ. ಭವಿಷ್ಯದಲ್ಲಿ ಹಿಂಸಾಚಾರಗಳು ಮತ್ತು ‌ಉದ್ವಿಗ್ನತೆಗಳು ಕಡಿಮೆಯಾಗುತ್ತದೆ ಎಂದು ನಿರೀಕ್ಷೆ ಹೊಂದಿರುವುದಾಗಿ ಹೇಳಿದರು.

ಒಪ್ಪಂದದಡಿಯಲ್ಲಿ, ಎರಡೂ ದೇಶಗಳ ಡಿಜಿಎಂಒಗಳು ಗಡಿಗಳಲ್ಲಿ ಪರಸ್ಪರ ಲಾಭದಾಯಕ ಮತ್ತು ಸುಸ್ಥಿರ ಶಾಂತಿಯನ್ನು ಸಾಧಿಸುವ ಹಿತದೃಷ್ಟಿಯಿಂದ ಶಾಂತಿಯನ್ನು ಭಂಗಗೊಳಿಸುವ ಮತ್ತು ಹಿಂಸಾಚಾರಕ್ಕೆ ಕಾರಣವಾಗುವ ಪ್ರವೃತ್ತಿಯನ್ನು ಹೊಂದಿರುವ ಪರಸ್ಪರರ ಪ್ರಮುಖ ಸಮಸ್ಯೆಗಳು ಮತ್ತು ಕಳವಳಗಳನ್ನು ಪರಿಹರಿಸಲು ಒಪ್ಪಿಕೊಂಡರು.

ಕಳೆದ ಮೂರು ತಿಂಗಳಿಂದ ಭಾರತ ಮತ್ತು ಪಾಕಿಸ್ತಾನ ಬ್ಯಾಕ್‌ಚಾನಲ್ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿದೆ.
ವರದಿಯ ಪ್ರಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಯೂಸುಫ್‌ರನ್ನು ಮೂರನೇ ದೇಶದಲ್ಲಿ ಭೇಟಿಯಾದರು ಮತ್ತು ಪಾಕಿಸ್ತಾನ ಸೇನೆಯ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಅವರೊಂದಿಗೆ ಸಂವಹನ ಮಾರ್ಗಗಳನ್ನು ತೆರೆದಿಟ್ಟಿದ್ದರು.

2003 ರಿಂದ ಉಭಯ ದೇಶಗಳು ಕದನ ವಿರಾಮ ಒಪ್ಪಂದವನ್ನು ಹೊಂದಿದ್ದರೂ, ಉಲ್ಲಂಘನೆಗಳು ಸಾಮಾನ್ಯವಾಗಿದ್ದವು.

ಗಡಿಯಾಚೆಗಿನ ಭಯೋತ್ಪಾದಕರಿಗೆ ಭಾರತೀಯ ಭೂಪ್ರದೇಶಕ್ಕೆ ಪ್ರವೇಶಿಸಲು ಪಾಕಿಸ್ತಾನ ಸೇನೆಯು ಕವರ್-ಫೈರ್ ನೀಡುತ್ತಿದೆ ಎಂದು ಭಾರತ ಆರೋಪಿಸಿತ್ತು.

2019 ರ ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿ, ಬಾಲಕೋಟ್ ಸರ್ಜಿಕಲ್ ಸ್ಟ್ರೈಕ್ ಮತ್ತು ಅದೇ ವರ್ಷದ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವ ಭಾರತದ ನಿರ್ಧಾರದ ನಂತರ ದೇಶಗಳ ನಡುವಿನ ಸಂಬಂಧಗಳು ಇನ್ನಷ್ಟು ಬಿಗಡಾಯಿಸಿದ ನಂತರ ಗಡಿಯಾಚೆಗಿನ ಗುಂಡಿನ ದಾಳಿ ಹೆಚ್ಚು ಗಂಭೀರವಾಯಿತು.

ಫೆಬ್ರವರಿ 2 ರಂದು, ಜನರಲ್ ಬಜ್ವಾ, ಪಾಕಿಸ್ತಾನದ ವಾಯುಪಡೆಯ ಅಕಾಡೆಮಿಗೆ ಭೇಟಿ ನೀಡಿದಾಗ, ನಾವು ಪರಸ್ಪರ ಗೌರವ ಮತ್ತು ಶಾಂತಿಯುತ ಸಹಬಾಳ್ವೆಯ ಆದರ್ಶಕ್ಕೆ ದೃಢವಾಗಿ ಬದ್ಧರಾಗಿದ್ದೇವೆ. ಎಲ್ಲಾ ರೀತಿಯಿಂದಲೂ ಶಾಂತಿಯನ್ನು ವಿಸ್ತರಿಸುವ ಸಮಯ ಇದು. ಜಮ್ಮು ಮತ್ತು ಕಾಶ್ಮೀರದ ದೀರ್ಘಕಾಲದ ಸಮಸ್ಯೆಯನ್ನು ಜಮ್ಮು ಕಾಶ್ಮೀರ ಜನರ ಆಕಾಂಕ್ಷೆಗಳಿಗೆ ಅನುಗುಣವಾಗಿ ಗೌರವಾನ್ವಿತ ಮತ್ತು ಶಾಂತಿಯುತವಾಗಿ ಪಾಕಿಸ್ತಾನ ಮತ್ತು ಭಾರತ ಬಗೆಹರಿಸಬೇಕು ಎಂದು ಹೇಳಿದರು.
India-Pakistan ceasefire

ಅಫ್ಘಾನಿಸ್ತಾನದಲ್ಲಿ ಯುದ್ಧ ಮುಗಿಯುತ್ತಿದ್ದಂತೆ ಅಮೆರಿಕದ ನೆರವು ಸಿಗದು ಎಂದು ಅರ್ಥಮಾಡಿಕೊಂಡ ಮತ್ತು ಕಾಶ್ಮೀರ ವಿಷಯದಲ್ಲಿ ಗಲ್ಫ್ ರಾಷ್ಟ್ರಗಳು ನಮ್ಮ ಪರವಾಗಿಲ್ಲ ಎಂಬ ಕಹಿ ಅನುಭವವು ಇಸ್ಲಾಮಿಕ್ ರಾಷ್ಟ್ರವನ್ನು ಭಾರತದೊಂದಿಗೆ ರಾಜಿಯಾಗುವ ನಿರ್ಧಾರ ಕೈಗೊಳ್ಳಲು ‌ಕಾರಣವಾಯಿತು.

ಯುನೈಟೆಡ್ ಸ್ಟೇಟ್ಸ್ ಶ್ವೇತಭವನದ ವಕ್ತಾರ ಜೆನ್ ಸಾಕಿ ಅವರು ಭಾರತ-ಪಾಕ್ ಒಪ್ಪಂದವನ್ನು ಸ್ವಾಗತಿಸಿದ್ದಾರೆ. ಇದು ದಕ್ಷಿಣ ಏಷ್ಯಾದಲ್ಲಿ ಹೆಚ್ಚಿನ ಶಾಂತಿ ಮತ್ತು ಸ್ಥಿರತೆಯತ್ತ ಸಕಾರಾತ್ಮಕ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿದಿನ ಬೆಳಿಗ್ಗೆ ಬೆಳ್ಳುಳ್ಳಿ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು https://t.co/oWAdASicQQ

— Saaksha TV (@SaakshaTv) February 23, 2021

ಎಲ್‌ಐಸಿ(LIC)ಯಿಂದ ತನ್ನ ಗ್ರಾಹಕರಿಗಾಗಿ ಮಾರ್ಚ್ 6 ರವರೆಗೆ ವಿಶೇಷ ಸೌಲಭ್ಯ https://t.co/H6UI5Ixv2K

— Saaksha TV (@SaakshaTv) February 23, 2021

ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ https://t.co/4XKj4biGrS

— Saaksha TV (@SaakshaTv) February 22, 2021

 

Tags: ceasefireindia-pakistan
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram