ಬಿಸಿಸಿಐ ಆಯ್ಕೆ ಸಮಿತಿಯು ಏಷ್ಯಾ ಕಪ್ 2023ಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ.
ವೇಗಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಮತ್ತೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20ಯಲ್ಲಿ ವೀರೋಚಿತ ಪ್ರದರ್ಶನ ನೀಡಿದ ನಂತರ ಮುಂಬಯಿ ಇಂಡಿಯನ್ಸ್ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಸ್ಪಿನ್ನರ್ ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದು, ಯುಜುವೇಂದ್ರ ಚಹಾಲ್ ತಂಡದಿಂದ ಹೊರಗೆ ಉಳಿದಿದ್ದಾರೆ. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಎಂಡಿ ಶಮಿ, ಎಂಡಿ ಸಿರಾಜ್, ಪಿ ಕೃಷ್ಣ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡದೊಂದಿಗೆ ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ತಂಡಗಳು ಕಪ್ ಗಾಗಿ ಸೆಣಸಾಟ ನಡೆಸಲಿವೆ.