ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ – ಶ್ರೀಲಂಕಾ ಮೂರನೇ ಏಕದಿನ ಪಂದ್ಯ – ಟೀಮ್ ಇಂಡಿಯಾದ 11ರ ಬಳಗದಲ್ಲಿ ಹೊಸಬರಿಗೆ ಚಾನ್ಸ್.. ?

admin by admin
July 23, 2021
in Newsbeat, Sports, ಕ್ರೀಡೆ
team india saakshatv
Share on FacebookShare on TwitterShare on WhatsappShare on Telegram

ಭಾರತ – ಶ್ರೀಲಂಕಾ ಮೂರನೇ ಏಕದಿನ ಪಂದ್ಯ – ಟೀಮ್ ಇಂಡಿಯಾದ 11ರ ಬಳಗದಲ್ಲಿ ಹೊಸಬರಿಗೆ ಚಾನ್ಸ್.. ?

deepak chjahar team india bhuvaneshwar kumar saakshatvಟೀಮ್ ಇಂಡಿಯಾ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯ ಇಂದು (ಜುಲೈ 23ರಂದು) ನಡೆಯಲಿದೆ. ಕೊಲೊಂಬೊದ ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯ ಶಿಖರ್ ಧವನ್ ಬಳಗಕ್ಕೆ ಔಪಚಾರಿಕ ಪಂದ್ಯವಾದ್ರೆ, ಶ್ರೀಲಂಕಾಗೆ ತವರಿನಲ್ಲಿ ಮರ್ಯಾದೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಈಗಾಗಲೇ ಶ್ರೀಲಂಕಾ ಸತತ ಎರಡು ಪಂದ್ಯಗಳ ಸೋಲಿನಿಂದ ಹೊರಬಂದಿಲ್ಲ. ಅದರಲ್ಲೂ ಎರಡನೇ ಏಕದಿನ ಪಂದ್ಯದಲ್ಲಿ ಲಂಕಾ ತಂಡ ಆಘಾತವನ್ನೇ ಅನುಭವಿಸಿದೆ. ಯುವ ಆಟಗಾರರನ್ನೊಳಗೊಂಡಿರುವ ಲಂಕಾ ತಂಡದಲ್ಲಿ ಪ್ರತಿಭಾವಂತರೂ ಇದ್ರೂ ಕೂಡ ಅನುಭವದ ಕೊರತೆ ಕಾಡುತ್ತಿದೆ. ಹೀಗಾಗಿ ಸಿಂಹಳಿಯರು ಗೆಲುವಿನ ನಗೆ ಬೀರಲು ವಿಫಲರಾಗುತ್ತಿದ್ದಾರೆ.
ಇನ್ನೊಂದೆಡೆ ಟೀಮ್ ಇಂಡಿಯಾ ಈಗಾಗಲೇ ಏಕದಿನ ಸರಣಿಯಲ್ಲಿ 2-ಂಯಿಂದ ಮುನ್ನಡೆಯಲ್ಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದೊಳಗೆ ಹೊಸ ಮುಖಗಳಿಗೆ ಕೋಚ್ ರಾಹುಲ್ ದ್ರಾವಿಡ್ ಅವಕಾಶ ನೀಡ್ತಾರೋ ಅನ್ನೋದನ್ನು ಕಾದು ನೋಡಬೇಕಿದೆ.
ಶಿಖರ್ ಧವನ್, ಭುವನೇಶ್ವರ್ ಕುಮಾರ್ 11ರ ಬಳಗದಲ್ಲಿ ಫಿಕ್ಸ್. ಇನ್ನು ಪೃಥ್ವಿ ಶಾ ಗೆ ಅವಕಾಶ ಕೊಟ್ರೆ ದೇವದತ್ ಪಡಿಕ್ಕಲ್ ಮತ್ತು ರುತುರಾಜ್ ಗಾಯಕ್ವಾಡ್ ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾಗುತ್ತೆ.
team india saakshatv srilankaಇನ್ನು ಸಂಜು ಸಾಮ್ಸನ್ ಫಿಟ್ ಆಗಿದ್ರೆ ಇಶಾನ್ ಕಿಶಾನ್ ಸ್ಥಾನದಲ್ಲಿ ಆಡುವ ಸಾಧ್ಯತೆಗಳಿವೆ. ಇನ್ನೊಂದೆಡೆ ಮನೀಷ್ ಪಾಂಡೆ ಜಗದಲ್ಲಿ ನಿತೇಶ್ ರಾಣಾಗೆ ಅವಕಾಶ ಸಿಕ್ಕರೂ ಅಚ್ಚರಿ ಏನಿಲ್ಲ.
ಆರಂಭಿಕನಾಗಿ ಧವನ್ ಜೊತೆ ಪೃಥ್ವಿ ಶಾ ಕಣಕ್ಕಿಳಿದು, ಮೂರು, ನಾಲ್ಕು ಮತ್ತು ಐದನೇ ಕ್ರಮಾಂಕಗಳಲ್ಲಿ ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ನಿತೇಶ್ ರಾಣಾ ಗೆ ಅವಕಾಶ ಸಿಗುವ ಸಾಧ್ಯತೆಗಳೂ ಇವೆ.
ಇನ್ನು ಹಾರ್ದಿಕ್ ಪಾಂಡ್ಯ ಕಳೆದ ಎರಡು ಪಂದ್ಯಗಳಲ್ಲೂ ನಿರೀಕ್ಷಿತ ಆಟವನ್ನಾಡಲಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಅವಕಾಶ ಸಿಗಬಹುದು. ಆದ್ರೆ ಕೃನಾಲ್ ಪಾಂಡ್ಯ ಎರಡು ಪಂದ್ಯಗಳಲ್ಲೂ ಗಮನ ಸೆಳೆಯುವ ಪ್ರದರ್ಶನ ನೀಡಿದ್ದರು. ಹೀಗಾಗಿ ಕೃನಾಲ್ ಪಾಂಡ್ಯಗೆ ವಿಶ್ರಾಂತಿ ನೀಡಿ ಕೆ.ಗೌತಮ್ ಗೆ ಅವಕಾಶ ಸಿಕ್ರೂ ಸಿಗಬಹುದು.
ಹಾಗೇ ಕುಲದೀಪ್ ಯಾದವ್ ಮತ್ತು ಯುಜುವೇಂದ್ರ ಚಾಹಲ್ ಗೆ ವಿಶ್ರಾಂತಿ ನೀಡಿ ವರುಣ್ ಚಕ್ರವರ್ತಿ ಮತ್ತು ರಾಹುಲ್ ಚಾಹರ್ ಅವರನ್ನು ಹನ್ನೊಂದರ ಬಳಗದಲ್ಲಿ ನೋಡಿದ್ರೂ ಅಚ್ಚರಿ ಏನಿಲ್ಲ.
ಈ ನಡುವೆ, ಕಳೆದ ಪಂದ್ಯದ ಹೀರೋ ದೀಪಕ್ ಚಾಹರ್ ಬದಲು ನವದೀಪ್ ಸೈನಿ ಅಥವಾ ಚೇತನ್ ಸಕಾರಿಯಾಗೆ ಚಾನ್ಸ್ ಸಿಗುವ ಸಾಧ್ಯತೆಗಳೂ ಇವೆ.
ಒಟ್ಟಿನಲ್ಲಿ ಟೀಮ್ ಇಂಡಿಯಾದ ಮೂರನೇ ಏಕದಿನ ಪಂದ್ಯದ ಅಂತಿಮ 11ರ ಬಳಗದಲ್ಲಿ ಯಾರೆಲ್ಲಾ ಕಾಣಿಸಿಕೊಳ್ಳುತ್ತಾರೋ ಅನ್ನೋ ಕುತೂಹಲವಿದೆ, ಕೋಚ್ ರಾಹುಲ್ ದ್ರಾವಿಡ್ ನುಡಿದಂತೆ ನಡೆಯುತ್ತಾರೋ ಅಥವಾ ಪ್ರಯೋಗಕ್ಕೆ ಮುಂದಾಗದೇ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಚಿತ್ತವನ್ನಿಡುತ್ತಾರೋ.. ?

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
Tags: #Deepak Chahar#Devdutt Padikkal#Ishan Kishan#Prithvi Shaw#saakshatvbcciCricketHardik PandyaindiaRahul DravidruthurajShikhar DhawanSportssriankasurya kumar yadavteam india
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram