ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ – ಶ್ರೀಲಂಕಾ ಮೂರನೇ ಏಕದಿನ ಪಂದ್ಯ – ಟೀಮ್ ಇಂಡಿಯಾದ 11ರ ಬಳಗದಲ್ಲಿ ಹೊಸಬರಿಗೆ ಚಾನ್ಸ್.. ?

admin by admin
July 23, 2021
in Newsbeat, Sports, ಕ್ರೀಡೆ
team india saakshatv
Share on FacebookShare on TwitterShare on WhatsappShare on Telegram

ಭಾರತ – ಶ್ರೀಲಂಕಾ ಮೂರನೇ ಏಕದಿನ ಪಂದ್ಯ – ಟೀಮ್ ಇಂಡಿಯಾದ 11ರ ಬಳಗದಲ್ಲಿ ಹೊಸಬರಿಗೆ ಚಾನ್ಸ್.. ?

deepak chjahar team india bhuvaneshwar kumar saakshatvಟೀಮ್ ಇಂಡಿಯಾ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯ ಇಂದು (ಜುಲೈ 23ರಂದು) ನಡೆಯಲಿದೆ. ಕೊಲೊಂಬೊದ ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯ ಶಿಖರ್ ಧವನ್ ಬಳಗಕ್ಕೆ ಔಪಚಾರಿಕ ಪಂದ್ಯವಾದ್ರೆ, ಶ್ರೀಲಂಕಾಗೆ ತವರಿನಲ್ಲಿ ಮರ್ಯಾದೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಈಗಾಗಲೇ ಶ್ರೀಲಂಕಾ ಸತತ ಎರಡು ಪಂದ್ಯಗಳ ಸೋಲಿನಿಂದ ಹೊರಬಂದಿಲ್ಲ. ಅದರಲ್ಲೂ ಎರಡನೇ ಏಕದಿನ ಪಂದ್ಯದಲ್ಲಿ ಲಂಕಾ ತಂಡ ಆಘಾತವನ್ನೇ ಅನುಭವಿಸಿದೆ. ಯುವ ಆಟಗಾರರನ್ನೊಳಗೊಂಡಿರುವ ಲಂಕಾ ತಂಡದಲ್ಲಿ ಪ್ರತಿಭಾವಂತರೂ ಇದ್ರೂ ಕೂಡ ಅನುಭವದ ಕೊರತೆ ಕಾಡುತ್ತಿದೆ. ಹೀಗಾಗಿ ಸಿಂಹಳಿಯರು ಗೆಲುವಿನ ನಗೆ ಬೀರಲು ವಿಫಲರಾಗುತ್ತಿದ್ದಾರೆ.
ಇನ್ನೊಂದೆಡೆ ಟೀಮ್ ಇಂಡಿಯಾ ಈಗಾಗಲೇ ಏಕದಿನ ಸರಣಿಯಲ್ಲಿ 2-ಂಯಿಂದ ಮುನ್ನಡೆಯಲ್ಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದೊಳಗೆ ಹೊಸ ಮುಖಗಳಿಗೆ ಕೋಚ್ ರಾಹುಲ್ ದ್ರಾವಿಡ್ ಅವಕಾಶ ನೀಡ್ತಾರೋ ಅನ್ನೋದನ್ನು ಕಾದು ನೋಡಬೇಕಿದೆ.
ಶಿಖರ್ ಧವನ್, ಭುವನೇಶ್ವರ್ ಕುಮಾರ್ 11ರ ಬಳಗದಲ್ಲಿ ಫಿಕ್ಸ್. ಇನ್ನು ಪೃಥ್ವಿ ಶಾ ಗೆ ಅವಕಾಶ ಕೊಟ್ರೆ ದೇವದತ್ ಪಡಿಕ್ಕಲ್ ಮತ್ತು ರುತುರಾಜ್ ಗಾಯಕ್ವಾಡ್ ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾಗುತ್ತೆ.
team india saakshatv srilankaಇನ್ನು ಸಂಜು ಸಾಮ್ಸನ್ ಫಿಟ್ ಆಗಿದ್ರೆ ಇಶಾನ್ ಕಿಶಾನ್ ಸ್ಥಾನದಲ್ಲಿ ಆಡುವ ಸಾಧ್ಯತೆಗಳಿವೆ. ಇನ್ನೊಂದೆಡೆ ಮನೀಷ್ ಪಾಂಡೆ ಜಗದಲ್ಲಿ ನಿತೇಶ್ ರಾಣಾಗೆ ಅವಕಾಶ ಸಿಕ್ಕರೂ ಅಚ್ಚರಿ ಏನಿಲ್ಲ.
ಆರಂಭಿಕನಾಗಿ ಧವನ್ ಜೊತೆ ಪೃಥ್ವಿ ಶಾ ಕಣಕ್ಕಿಳಿದು, ಮೂರು, ನಾಲ್ಕು ಮತ್ತು ಐದನೇ ಕ್ರಮಾಂಕಗಳಲ್ಲಿ ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ನಿತೇಶ್ ರಾಣಾ ಗೆ ಅವಕಾಶ ಸಿಗುವ ಸಾಧ್ಯತೆಗಳೂ ಇವೆ.
ಇನ್ನು ಹಾರ್ದಿಕ್ ಪಾಂಡ್ಯ ಕಳೆದ ಎರಡು ಪಂದ್ಯಗಳಲ್ಲೂ ನಿರೀಕ್ಷಿತ ಆಟವನ್ನಾಡಲಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಅವಕಾಶ ಸಿಗಬಹುದು. ಆದ್ರೆ ಕೃನಾಲ್ ಪಾಂಡ್ಯ ಎರಡು ಪಂದ್ಯಗಳಲ್ಲೂ ಗಮನ ಸೆಳೆಯುವ ಪ್ರದರ್ಶನ ನೀಡಿದ್ದರು. ಹೀಗಾಗಿ ಕೃನಾಲ್ ಪಾಂಡ್ಯಗೆ ವಿಶ್ರಾಂತಿ ನೀಡಿ ಕೆ.ಗೌತಮ್ ಗೆ ಅವಕಾಶ ಸಿಕ್ರೂ ಸಿಗಬಹುದು.
ಹಾಗೇ ಕುಲದೀಪ್ ಯಾದವ್ ಮತ್ತು ಯುಜುವೇಂದ್ರ ಚಾಹಲ್ ಗೆ ವಿಶ್ರಾಂತಿ ನೀಡಿ ವರುಣ್ ಚಕ್ರವರ್ತಿ ಮತ್ತು ರಾಹುಲ್ ಚಾಹರ್ ಅವರನ್ನು ಹನ್ನೊಂದರ ಬಳಗದಲ್ಲಿ ನೋಡಿದ್ರೂ ಅಚ್ಚರಿ ಏನಿಲ್ಲ.
ಈ ನಡುವೆ, ಕಳೆದ ಪಂದ್ಯದ ಹೀರೋ ದೀಪಕ್ ಚಾಹರ್ ಬದಲು ನವದೀಪ್ ಸೈನಿ ಅಥವಾ ಚೇತನ್ ಸಕಾರಿಯಾಗೆ ಚಾನ್ಸ್ ಸಿಗುವ ಸಾಧ್ಯತೆಗಳೂ ಇವೆ.
ಒಟ್ಟಿನಲ್ಲಿ ಟೀಮ್ ಇಂಡಿಯಾದ ಮೂರನೇ ಏಕದಿನ ಪಂದ್ಯದ ಅಂತಿಮ 11ರ ಬಳಗದಲ್ಲಿ ಯಾರೆಲ್ಲಾ ಕಾಣಿಸಿಕೊಳ್ಳುತ್ತಾರೋ ಅನ್ನೋ ಕುತೂಹಲವಿದೆ, ಕೋಚ್ ರಾಹುಲ್ ದ್ರಾವಿಡ್ ನುಡಿದಂತೆ ನಡೆಯುತ್ತಾರೋ ಅಥವಾ ಪ್ರಯೋಗಕ್ಕೆ ಮುಂದಾಗದೇ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಚಿತ್ತವನ್ನಿಡುತ್ತಾರೋ.. ?

Related posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026
ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026
Tags: #Deepak Chahar#Devdutt Padikkal#Ishan Kishan#Prithvi Shaw#saakshatvbcciCricketHardik PandyaindiaRahul DravidruthurajShikhar DhawanSportssriankasurya kumar yadavteam india
ShareTweetSendShare
Join us on:

Related Posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram