ದೇಶದ ಇನ್ನೂ 4 ಸಾರ್ವಜನಿಕ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಿಂದ ಕೊವಿಡ್ ಲಸಿಕೆಯ ಉತ್ಪಾದನೆ
ನವದೆಹಲಿ : ದೇಶ ಹಾಗೂ ರಾಜ್ಯದಲ್ಲಿ ಅದ್ರಲ್ಲೂ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ದೇಶದಲ್ಲಿ ವಾಕ್ಸಿನ್ ಅಭಿಯಾನವೂ ಜಾರಿಯಲ್ಲಿದೆ.. ಸದ್ಯ ಕೊವಿಡ್ ಲಸಿಕೆ ಉತ್ಪಾದಿಸುತ್ತಿರುವ ಭಾರತ್ ಬಯೋಟೆಕ್ನ ಜತೆ ದೇಶದ 4 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ಕೊವಿಡ್ ಲಸಿಕೆಯ ಉತ್ಪಾದನೆ ಹೆಚ್ಚಿಸಲು ಕಾರ್ಯ ನಿರ್ವಹಿಸುತ್ತಿವೆ. ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ 4 ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ.
ಮುಂಬೈಯ ಹಾಫ್ಕಿನ್ ಫಾರ್ಮಾಸೂಟಿಕಲ್ಸ್ ಕಾರ್ಪೊರೇಶನ್ ಲಿಮಿಟೆಡ್ ಮಹಾರಾಷ್ಟ್ರ ಸರ್ಕಾರದ ಅಡಿಯ ಪ್ರಮುಖ ಸಾರ್ವಜನಿಕ ಸಂಸ್ಥೆ. ಕೊವಿಡ್ ಲಸಿಕೆ ಉತ್ಪಾದನೆಗೆ ಸರ್ವ ಸನ್ನದ್ಧವಾಗಿರುವಂತೆ ಸೂಚಿಸಿರುವ ಭಾರತ ಸರ್ಕಾರ, ಈ ಹಾಪ್ಕಿನ್ ಫಾರ್ಮಾಸೂಟಿಕಲ್ಸ್ಗೆ 65 ಕೋಟಿ ಧನ ಸಹಾಯ ಒದಗಿಸಿದೆ. ಸದ್ಯ ಲಸಿಕೆ ಉತ್ಪಾದನೆಯ ಕುರಿತು ಕೆಲವು ಪ್ರಕ್ರಿಯೆಯಗಳು ನಡೆಯುತ್ತಿದ್ದು, ಪ್ರತಿ ತಿಂಗಳು 20 ಕೋಟಿ ಕೊವಿಡ್ ಲಸಿಕೆ ಉತ್ಪಾದನೆ ಮಾಡಲು ಹಾಪ್ಕಿನ್ ಫಾರ್ಮಾಸೂಟಿಕಲ್ಸ್ ಸಂಸ್ಥೆ ಸಮರ್ಥವಾಗಿದೆ.
ಹೈದರಾಬಾದ್ ನ ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್ ಗೆ ಸರ್ಕಾರ 60 ಕೋಟಿ ಸಹಾಯ ಧನ ನೀಡಿದ್ದು, ಕೊವಿಡ್ ಲಸಿಕೆ ಉತ್ಪಾದನೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ನಿರ್ಮಿಸಲು ತಿಳಿಸಿದೆ. ಇವೆರೆಡು ಸಂಸ್ಥೆಗಳ ಜತೆಗೆ ಬುಲಶಂದರ್ನಲ್ಲಿರುವ ಭಾರತ್ ಇಮ್ಯನೊಲಾಜಿಕಲ್ ಆಯಂಡ್ ಬಯೋಲಾಜಿಕಲ್ ಲಿಮಿಟೆಡ್ಗೆ (BIBCOL) 30 ಕೋಟಿ ಸಹಾಯ ಧನ ನೀಡಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳಿಗೆ 1ರಿಂದ1.5 ಕೋಟಿ ಡೋಸ್ ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯವನ್ನು ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್ ಹೊಂದಿದೆ.
ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗವೂ ಸಹ ಭಾರತ್ ಬಯೋಟೆಕ್ನ ಜತೆ ನಿಕಟ ಸಂಪರ್ಕದಲ್ಲಿದೆ. ಭಾರತ್ ಬಯೋಟೆಕ್ನಿಂದ ಲಸಿಕೆ ಉತ್ಪಾದನೆಯ ಫಾರ್ಮುಲಾ ಹಂಚಿಕೊಳ್ಳುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು ಪ್ರತಿ ತಿಂಗಳೂ 2 ಕೋಟಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆಗೆ ಗುಜರಾತ್ನ ಈ ಸಂಸ್ಥೆ ಸಜ್ಜಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.