ADVERTISEMENT
Wednesday, April 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ -ಇಂಗ್ಲೆಂಡ್ 2ನೇ ಟಿ-ಟ್ವೆಂಟಿ – ಧವನ್ ಬದಲು ರೋಹಿತ್ ? ಟೀಮ್ ಇಂಡಿಯಾದ ಹನ್ನೊಂದರ ಲೆಕ್ಕಚಾರ..!

admin by admin
March 14, 2021
in Newsbeat, Sports, ಕ್ರೀಡೆ
virat kohli team india t-20 cricket
Share on FacebookShare on TwitterShare on WhatsappShare on Telegram

ಭಾರತ -ಇಂಗ್ಲೆಂಡ್ 2ನೇ ಟಿ-ಟ್ವೆಂಟಿ – ಧವನ್ ಬದಲು ರೋಹಿತ್ ? ಟೀಮ್ ಇಂಡಿಯಾದ ಹನ್ನೊಂದರ ಲೆಕ್ಕಚಾರ..!

India vs England, 2nd T20 Preview

Related posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

April 21, 2026
ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026

team india saakshatvಭಾರತ ಮತ್ತು ಇಂಗ್ಲೆಂಡ್ ನಡುವಿ ಎರಡನೇ ಟಿ-ಟ್ವೆಂಟಿ ಪಂದ್ಯ ಮಾರ್ಚ್ 14 ಭಾನುವಾರ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈಗಾಗಲೇ ಮೊದಲ ಟಿ-ಟ್ವೆಂಟಿ ಪಂದ್ಯವನ್ನು ಸೋತಿರುವ ಟೀಮ್ ಇಂಡಿಯಾ ಕೊಂಚ ಮಟ್ಟಿನ ಒತ್ತಡದಲ್ಲಿದೆ. ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲಿಲ್ಲ. ಹಾಗೇ ಟೀಮ್ ಇಂಡಿಯಾದ ಬೌಲಿಂಗ್ ದಾಳಿಯನ್ನು ಇಂಗ್ಲೀಷ್ ಬ್ಯಾಟ್ಸ್ ಮೆನ್ ಗಳು ಕ್ಯಾರೇ ಮಾಡಿರಲಿಲ್ಲ. ಹೀಗಾಗಿ ಮೊದಲ ಪಂದ್ಯವನ್ನು ಗೆದ್ದಿರುವ ಇಂಗ್ಲೆಂಡ್ ತಂಡ ಸರಣಿ ಗೆಲ್ಲುವ ಉಮೇದಿನಲ್ಲಿದ್ರೆ, ಟೀಮ್ ಇಂಡಿಯಾ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.
ಇನ್ನು ಟೀಮ್ ಇಂಡಿಯಾದ ಹನ್ನೊಂದರ ಬಳಗದ ಆಯ್ಕೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಟೀಕೆಗಳನ್ನು ಎದುರಿಸಬೇಕಾಯ್ತು. ಇದ್ರಿಂದ ಎರಡನೇ ಪಂದ್ಯಕ್ಕೆ ಧವನ್ ಬದಲು ರೋಹಿತ್ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಎರಡು ಪಂದ್ಯಗಳಿಗೆ ವಿಶ್ರಾಂತಿ ಅಂತ ರೋಹಿತ್ ಗೆ ಹೇಳಿರುವುದರಿಂದ ಮತ್ತೆ ಧವನ್ ಗೆ ಅವಕಾಶವನ್ನು ಕಲ್ಪಿಸಲೂ ಬಹುದು.
ಇನ್ನೊಂದೆಡೆ ಕೆ.ಎಲ್. ರಾಹುಲ್ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ಒಂದು ವೇಳೆ ಅವಕಾಶವನ್ನು ಕಳೆದುಕೊಂಡ್ರೆ ರಾಹುಲ್ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟಕಷ್ಟ. ಹಾಗೇ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಲಯವನ್ನು ಕಳೆದುಕೊಂಡಿದ್ದಾರೆ. ಇದು ತಂಡದ ಮೇಲೆ ಭಾರಿ ಪರಿಣಾಮವನ್ನು ಬೀರುತ್ತಿದೆ.

India vs England 2nd T20
team india icc ranking saakshatvಮತ್ತೊಂದೆಡೆ ಟೀಮ್ ಇಂಡಿಯಾದ ಅಡ್ಡದಿಡ್ಡಿ ಬ್ಯಾಟ್ಸ್ ಮೆನ್ ರಿಷಬ್ ಪಂತ್ ಸ್ವಲ್ಪ ಮಟ್ಟಿನ ತಾಳ್ಮೆಯನ್ನು ಕಾಯ್ದುಕೊಂಡ್ರೆ, ಎದುರಾಳಿ ತಂಡಕ್ಕೆ ಅಪಾಯ ಕಟ್ಟಿಟ್ಟಬುತ್ತಿ. ಅಷ್ಟೇ ಅಲ್ಲ, ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ತನ್ನ ಜವಾಬ್ದಾರಿಯನ್ನು ಸರಿಯಾಗಿಯೇ ನಿಭಾಯಿಸುತ್ತಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಶಾರ್ದೂಲ್ ಥಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್ ಮತ್ತಷ್ಟು ಪರಿಣಾಮಕಾರಿಯಾಗಬೇಕಿದೆ. ಆಲ್ ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಸಮರ್ಥವಾಗಿ ನಿಭಾಯಿಸಬೇಕಿದೆ.
ಸದ್ಯ ಇಂಗ್ಲೆಂಡ್ ತಂಡದಲ್ಲಿ ಯಾವುದೇ ತೊಂದರೆ ಇಲ್ಲ. ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲಾನ್, ಜಾನಿ ಬೇರ್ ಸ್ಟೋವ್, ಬೆನ್ ಸ್ಟೋಕ್ಸ್, ಇಯಾನ್ ಮೊರ್ಗಾನ್ ಟೀಮ್ ಇಂಡಿಯಾ ಬೌಲರ್ ಗಳಿಗೆ ಸಿಂಹಸ್ವಪ್ನರಾಗಿ ಕಾಡುವ ಸಾಮಥ್ರ್ಯ ಹೊಂದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜೋಫ್ರಾ ಆರ್ಚೆರ್, ಮಾರ್ಕ್ ವುಡ್, ಕ್ರಿಸ್ ಜೋರ್ಡಾನ್ ವೇಗದ ಅಸ್ತ್ರಗಳಾದ್ರೆ, ಆದೀಲ್ ರಶೀದ್ ಸ್ಪಿನ್ ಮ್ಯಾಜಿಕ್ ಮಾಡಲಿದ್ದಾರೆ. ಇನ್ನು ಸ್ಯಾಮ್ ಕುರನ್ ಮತ್ತು ಮೋಯಿನ್ ಆಲಿ ನಡುವೆ ಹನ್ನೊಂದರ ಬಳಗವನ್ನು ಯಾರು ಸೇರಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.
ಒಟ್ಟಿನಲ್ಲಿ ಸೂಪರ್ ಸಂಡೇ ಸೂಪರ್ ಮ್ಯಾಚ್ ನಲ್ಲಿ ಯಾರು ಗೆಲ್ತಾರೆ, ಟಿ-ಟ್ವೆಂಟಿ ಪಂದ್ಯ ರೋಚಕತೆಯನ್ನು ಸವಿಯಲು ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
team india saakshatvಟೀಮ್ ಇಂಡಿಯಾ
ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ/ಶಿಖರ್ ಧವನ್, ಕೆ.ಎಲ್. ರಾಹುಲ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.

ಇಂಗ್ಲೆಂಡ್
ಇಯಾನ್ ಮೊರ್ಗಾನ್ (ನಾಯಕ), ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲಾನ್, ಜೋನಿ ಬೇರ್ ಸ್ಟೋವ್, ಬೆನ್ ಸ್ಟೋಕ್ಸ್, ಸ್ಯಾಮ್ ಕುರನ್/ ಮೊಯಿನ್ ಆಲಿ, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚೆರ್, ಮಾರ್ಕ್ ವುಡ್, ಆದಿಲ್ ರಶೀದ್.

#India vs England 2nd T20 #team india #viratkohli #rohithsharma #bcci #cricket

Tags: #rishab pant#saakshatv#shikhar dhavanCricketEnglandindiaIndia vs England 2nd T20kannadsportsKL RahuLrohith sharmaSportsvirat kohli
ShareTweetSendShare
Join us on:

Related Posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

by Shwetha
April 21, 2026
0

ರಾಜ್ಯದ ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 890 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕರ್ನಾಟಕ...

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

by Shwetha
April 21, 2026
0

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿರುವ ದಾಳಿ ರಾಜ್ಯ ರಾಜಕಾರಣದಲ್ಲಿ...

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

by Shwetha
April 21, 2026
0

ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram