ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೋಹಿತ್ ಶತಕದ ರಂಗು… ಇಂಗ್ಲೆಂಡ್ ಗೆ ಕಂಟಕವಾದ ಹಿಟ್ ಮ್ಯಾನ್… ಉತ್ತಮ ಸ್ಥಿತಿಯಲ್ಲಿ ಟೀಮ್ ಇಂಡಿಯಾ..!

admin by admin
February 13, 2021
in Newsbeat, Sports, ಕ್ರೀಡೆ
rohith sharma team india saakshatv
Share on FacebookShare on TwitterShare on WhatsappShare on Telegram

ರೋಹಿತ್ ಶತಕದ ರಂಗು… ಇಂಗ್ಲೆಂಡ್ ಗೆ ಕಂಟಕವಾದ ಹಿಟ್ ಮ್ಯಾನ್… ಉತ್ತಮ ಸ್ಥಿತಿಯಲ್ಲಿ ಟೀಮ್ ಇಂಡಿಯಾ..!

rohith sharma ajinkya rahane team india saakshatvಚೆನ್ನೈ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದ ಗೌರವವನ್ನು ಟೀಮ್ ಇಂಡಿಯಾ ಪಡೆದುಕೊಂಡಿದೆ. ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಆಕರ್ಷಕ ಶತಕ ಹಾಗೂ ಉಪ ನಾಯಕ ಅಜಿಂಕ್ಯಾ ರಹಾನೆ ಅವರ ಅರ್ಧಶತಕ ಮೊದಲ ದಿನದ ಹೈಲೈಟ್ಸ್. ಮೊದಲ ದಿನದ ಅಂತ್ಯಕ್ಕೆ ಟೀಮ್ ಇಂಡಿಯಾ ಆರು ವಿಕೆಟ್ ಕಳೆದುಕೊಂಡು 300 ರನ್ ದಾಖಲಿಸಿದೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಟಾಸ್ ಗೆದ್ದ ಟೀಮ್ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಭರವಸೆಯ ಯುವ ಆಟಗಾರ ಶುಬ್ಮನ್ ಗಿಲ್ ಶೂನ್ಯಕ್ಕೆ ಔಟಾದ್ರು. ಒಲಿಯ್ ಸ್ಟೋನ್ ಅವರ ಮಾರಕ ಎಸೆತವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದ ಶುಬ್ಮನ್ ಗಿಲ್ ಅವರು ಎಲ್ ಬಿ ಬಲೆಗೆ ಬಿದ್ರು.
ನಂತರ ರೋಹಿತ್ ಶರ್ಮಾ ಮತ್ತು ಚೇತೇಶ್ವರ ಪೂಜಾರ ತಂಡಕ್ಕೆ ಆಧಾರವಾಗಿ ನಿಂತ್ರು. ರೋಹಿತ್ ಶರ್ಮಾ ಬಿರುಸಿನ ಬ್ಯಾಟಿಂಗ್ ನಡೆಸಿದ್ರು. ಇನ್ನೊಂದೆಡೆ ಪೂಜಾರ ಎಂದಿನಂತೆ ನಿಧಾನಗತಿಯ ಆಟಕ್ಕೆ ಅಂಟಿಕೊಂಡು ತಂಡದ ರನ್ ಗತಿಯನ್ನು ಏರಿಸಲು ನೆರವಾದ್ರು.
ರೋಹಿತ್ ಮತ್ತು ಪೂಜಾರ ಎರಡನೇ ವಿಕೆಟ್ ಗೆ 84 ರನ್ ಪೇರಿಸಿದ್ರು. ಅಲ್ಲದೆ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕವನ್ನು ದಾಖಲಿಸಿದ್ರು.
ಈ ಹಂತದಲ್ಲಿ ಟೀಮ್ ಇಂಡಿಯಾ ಮತ್ತೆ ಆಘಾತ ಅನುಭವಿಸಿತ್ತು. ಚೇತೇಶ್ವರ ಪೂಜಾರ 21 ರನ್ ಗಳಿಸಿ ಔಟಾದ್ರು. ಹಾಗೇ ನಾಯಕ ವಿರಾಟ್ ಕೊಹ್ಲಿ ಖಾತೆ ತೆರೆಯುವ ಮುನ್ನವೇ ಮೋಯಿನ್ ಆಲಿ ಅವರ ಮ್ಯಾಜಿಕ್ ಎಸೆತಕ್ಕೆ ಕ್ಲೀನ್ ಬೌಲ್ಡಾದ್ರು.
ಬಳಿಕ ರೋಹಿತ್ ಜೊತೆಗೂಡಿದ ಅಜಿಂಕ್ಯಾ ರಹಾನೆ ತಂಡಕ್ಕೆ ಬೆನ್ನಲುಬಾಗಿ ನಿಂತ್ರು. ಶರ್ಮಾ ಮತ್ತು ರಹಾನೆ ನಾಲ್ಕನೇ ವಿಕೆಟ್‍ಗೆ 162 ರನ್ ಗಳನ್ನು ಕಲೆ ಹಾಕಿದ್ರು.
virat kohli team india saakshatvಈ ನಡುವೆ ರೋಹಿತ್ ಶರ್ಮಾ ಆಕರ್ಷಕ ಶತಕವನ್ನು ದಾಖಲಿಸಿದ್ರು. ಹಾಗೇ ರಹಾನೆ ಅರ್ಧಶತಕ ಬಾರಿಸಿದ್ರು.
ದ್ವಿಶತಕದತ್ತ ಮುನ್ನುಗ್ಗುತ್ತಿದ್ದ ರೋಹಿತ್ ಶರ್ಮಾ 161 ರನ್ ಗಳಿಸಿ ತನ್ನ ಹೋರಾಟವನ್ನು ಮುಗಿಸಿದ್ರು. ರೋಹಿತ್ ಶರ್ಮಾ 231 ಎಸೆತಗಳಲ್ಲಿ 18 ಬೌಂಡರಿ ಮತ್ತು ಎರಡು ಸಿಕ್ಸರ್ ಗಳನ್ನು ಸಿಡಿಸಿ ಇಂಗ್ಲೀಷ್ ಬೌಲರ್ ಗಳಿಗೆ ಸುಸ್ತಾಗುವಂತೆ ಮಾಡಿದ್ರು.
ಇನ್ನೊಂದೆಡೆ ರೋಹಿತ್ ಶರ್ಮಾ ಔಟಾಗುತ್ತಿದ್ದಂತೆ ಅಜಿಂಕ್ಯಾ ರಹಾನೆ ಕೂಡ 67 ರನ್ ಗಳಿಸಿ ಮೋಯಿನ್ ಆಲಿಗೆ ವಿಕೆಟ್ ಒಪ್ಪಿಸಿದ್ರು. ಬಳಿಕ ರಿಷಬ್ ಪಂತ್ ಜೊತೆ ಸೇರಿದ ಅಶ್ವಿನ್ ಕೂಡ ಹೆಚ್ಚು ಸಮಯ ಕ್ರೀಸ್ ನಲ್ಲಿ ಉಳಿಯಲಿಲ್ಲ. ಅಶ್ವಿನ್ 13 ರನ್ ಗೆ ಸುಸ್ತಾದ್ರು.
ನೈಜ ಆಟದಿಂದಲೇ ಗಮನ ಸೆಳೆದಿರುವ ರಿಷಬ್ ಪಂತ್ ಅಜೇಯ 33 ರನ್ ಹಾಗೂ ಅಕ್ಸರ್ ಪಟೇಲ್ 5 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಇಂಗ್ಲೆಂಡ್ ಪರ ಜಾಕ್ ಲೀಚ್ ಮತ್ತು ಮೋಯಿನ್ ಆಲಿ ತಲಾ ಎರಡು ವಿಕೆಟ್ ಪಡೆದ್ರೆ, ಒಲಿಯ್ ಸ್ಟೋನ್ ಮತ್ತು ಜಾಯ್ ರೂಟ್ ತಲಾ ಒಂದು ವಿಕೆಟ್ ಉರುಳಿಸಿದ್ರು.

Tags: #saakshatvAjinkya RahanebcciChennai testchetheshwar pujaraecbEnglandicc testindia england 2nd testjoy rootrohith sharmaShubman Gillteam indiavirat kohli
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram