ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ ಪ್ರಕಟ: ರಣಜಿಯಲ್ಲಿ ಉತ್ತಮ ಪ್ರದರ್ಶನ ತೋರಿದವರಿಗೆ ಅವಕಾಶ

ಹೊಸ ಆಟಗಾರರಿಗೆ ಮಣೆ ಹಾಕಿದ ಬಿಸಿಸಿಐ

Author2 by Author2
June 24, 2023
in Sports, ಕ್ರಿಕೆಟ್
bcci-postpones another cricket match saaksha tv
Share on FacebookShare on TwitterShare on WhatsappShare on Telegram

ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ಭಾರತ ತಂಡವನ್ನ ಪ್ರಕಟಿಸಲಾಗಿದ್ದು, ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರಿಗಿಂತ ಐಪಿಎಲ್‌ನಲ್ಲಿ ಮಿಂಚಿದ ಆಟಗಾರರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಮುಖವಾಗಿ 2023ರ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದ ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್‌ ಹಾಗೂ ಮುಖೇಶ್‌ ಕುಮಾರ್‌ ಅವರುಗಳು ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಆ ಮೂಲಕ ರಣಜಿ ಟ್ರೋಫಿಗಿಂತಲೂ ಐಪಿಎಲ್‌ನಲ್ಲಿ ಮಿಂಚಿದವರಿಗೆ ಆಯ್ಕೆ ಸಮಿತಿ ಸದಸ್ಯರು ಮನ್ನಣೆ ನೀಡಿದ್ದು, ಆಯ್ಕೆ ಸಮಿತಿಯ ಈ ನಿರ್ಧಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Related posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026
saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

July 29, 2026

ಪ್ರಮುಖವಾಗಿ ವಿಂಡೀಸ್‌ ಪ್ರವಾಸಕ್ಕೆ ಆಯ್ಕೆ ಮಾಡಲಾಗಿರುವ ಭಾರತ ಟೆಸ್ಟ್‌ ತಂಡದಲ್ಲಿ ಕೆಲವು ಆಟಗಾರರ ಅನುಪಸ್ಥಿತಿ ಎದ್ದು ಕಾಣುತ್ತಿದ್ದು, ಪ್ರಮುಖವಾಗಿ ಸರ್ಫರಾಜ್‌ ಖಾನ್‌ ಹಾಗೂ ಮಯಂಕ್‌ ಅವರ್ಗಾಲ್‌ ಈ ಪಟ್ಟಿಯಲ್ಲಿದ್ದಾರೆ. ಪ್ರಸಕ್ತ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸರ್ಫರಾಜ್‌ ಖಾನ್‌, ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಇದು ವಿಂಡೀಸ್‌ ಪ್ರವಾಸಕ್ಕೆ ತಂಡದಲ್ಲಿ ಸ್ಥಾನ ಕೈತಪ್ಪಲು ಮುಖ್ಯ ಕಾರಣವಾದಂತಿದೆ.

ಇನ್ನೂ ಈ ಬಾರಿಯ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಮೂಲಕ ಅಬ್ಬರಿಸಿದ್ದ ಮಯಂಕ್‌ ಅಗರ್ವಾಲ್‌, 9 ಪಂದ್ಯಗಳಲ್ಲಿ 990 ರನ್‌ಗಳಿಸಿದ್ದರು. ಹೀಗಾಗಿ ಟೀಂ ಇಂಡಿಯಾದ ಟೆಸ್ಟ್‌ ತಂಡಕ್ಕೆ ಮರಳುವ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಲಾಗಿತ್ತು. ಆದರೆ ಈ ಎಲ್ಲಾ ನಿರೀಕ್ಷೆಗಳು ಇದೀಗ ಹುಸಿಯಾಗಿದ್ದು, ಕರ್ನಾಟಕದ ಆರಂಭಿಕ ಆಟಗಾರನಿಗೆ ಅವಕಾಶ ನೀಡುವ ಬಗ್ಗೆ ಆಯ್ಕೆದಾರರು ಆಸಕ್ತಿ ತೋರಿಲ್ಲ.
ಉಳಿದಂತೆ ಅಭಿಮನ್ಯು ಈಶ್ವರನ್‌, ಧ್ರುವ್‌ ಶೋರೆ ಅವರುಗಳು ಸಹ ರಣಜಿ ಟ್ರೋಫಿಯಲ್ಲಿ ಮಿಂಚಿದ್ದರು, ಟೀಂ ಇಂಡಿಯಾದ ಟೆಸ್ಟ್‌ ತಂಡದ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಆದರೆ 2023ಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮೂಲಕ ಪದಾರ್ಪಣೆ ಮಾಡಿರುವ ಬೆಂಗಾಲ್‌ ಮೂಲಕ ಯುವ ವೇಗದ ಬೌಲರ್‌ ಮುಖೇಶ್‌ ಕುಮಾರ್‌, ವಿಂಡೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಮುಖೇಶ್‌ ಕುಮಾರ್‌ ಟೆಸ್ಟ್‌ ಹಾಗೂ ಏಕದಿನ ತಂಡದಲ್ಲೂ ಸ್ಥಾನ ಪಡೆದಿದ್ದಾರೆ.

ಈ ಎಲ್ಲಾ ಅಂಶಗಳನ್ನ ಗಮನಿಸಿದರೆ ಬಿಸಿಸಿಐನ ಆಯ್ಕೆ ಮಂಡಳಿ, ರಣಜಿ ಟ್ರೋಫಿಗಿಂತ ಐಪಿಎಲ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಂತೆ ಕಾಣುತ್ತಿದೆ. ಆದರೆ ಐಪಿಎಲ್‌ ಟಿ20 ಪಂದ್ಯಾವಳಿಯಲ್ಲಿನ ಪ್ರದರ್ಶನದ ಆಧಾರದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತದ ಟೆಸ್ಟ್‌ ತಂಡಕ್ಕೆ ಆಟಗಾರರನ್ನ ಆಯ್ಕೆ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Tags: India Vs West Indies Team Announced: Chances for Ranji Performers
ShareTweetSendShare
Join us on:

Related Posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram