ಅಮೆರಿಕಾ ಅಧ್ಯಕ್ಷ ಟ್ರಂಪ್ ಭೇಟಿಯಿಂದ ಭಾರತ ಸೂಪರ್ ಪವರ್ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕೆ ಮಾಡಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ. ಭಾರತ ಸೂಪರ್ ಪವರ್ ಆಗಲು ಬೇಕಿರುವುದು ಬಂಡವಾಳ ಹೂಡಿಕೆ ಮತ್ತು ಮಾನವ ಸಂಪನ್ಮೂಲ ಹೊರತು ವಿಶ್ವದ ದೊಡ್ಡಣ್ಣನ ಭೇಟಿ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇನ್ನು, ಅಮೆರಿಕಾ ಅಧ್ಯಕ್ಷರು ಎರಡು ದಿನಗಳ ಮಟ್ಟಿಗೆ ಭಾರತಕ್ಕೆ ಬರುತ್ತಾರೆ, ಹೋಗುತ್ತಾರೆ. ಅವರ ಈ ಭೇಟಿ ಭಾರತ ಮಹಾನ್ ಶಕ್ತಿಶಾಲಿ ದೇಶವಾಗಲು ಕಾರಣವಾಗುವುದಿಲ್ಲ. ನಮ್ಮಲ್ಲಿನ ಮಾನವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಂಡು ಎಲ್ಲಾ ಕ್ಷೇತ್ರಗಳಲ್ಲೂ ಅಗತ್ಯವಾಗಿರುವ ಬಂಡವಾಳ ಹೂಡಿಕೆಯತ್ತ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಸಲಹೆ ನೀಡಿದ್ರು.