ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Indian culture : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ….

ನಮ್ಮ ದಾಂಪತ್ಯದಲ್ಲಿ ಗೊಂದಲವಾದಾಗ ಮೊದಲು ಪಾರ್ವತಿ ದೇವಿ ಸಹಿತ ರುದ್ರದೇವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ವೃತರೂಪದಲ್ಲಿ ಕೆಲವು ದಿನ ಪೂಜೆ, ಪ್ರದಕ್ಷಿಣೆ, ನಮಸ್ಕಾರ ಮಾಡಿ ಅನುಗ್ರಹ ಪಡೆದರೆ, ನಿಶ್ಚಿತವಾಗಿ ಸಂಸಾರ ಸುಭದ್ರವಾಗಿರಲು ಬೇಕಾದ ಸೌಭಾಗ್ಯ ಪಾರ್ವತಿ ದೇವಿ ಮನೋಭಿಮಾನಿಗಳಾದ ಮಂಗಲಮಯ ರುದ್ರದೇವರು ತೋರಿಸಿಕೊಡುತ್ತಾರೆ. ಸಂಯಮದಿಂದ ಇದ್ದರೆ ನಮ್ಮ ದಾಂಪತ್ಯ ಇತರರಿಗೂ ದಾರಿದೀಪವಾಗುದರಲ್ಲಿ ಸಂಶಯವೇ ಇಲ್ಲ.

Naveen Kumar B C by Naveen Kumar B C
February 6, 2023
in Newsbeat, Life Style, ಜೀವನಶೈಲಿ
Rama Sitha
Share on FacebookShare on TwitterShare on WhatsappShare on Telegram

ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ….

ಭಾರತೀಯ ಸಂಸ್ಕೃತಿಯ ಉಳಿವಿಗೆ ಗೃಹಸ್ಥಜೀವನ ಸುಭದ್ರವಾದ ಅಡಿಪಾಯ ಒದಗಿಸುವಂಥದ್ದು. ಆದರೆ ಈಗೀಗ ಆ ಗೃಹಸ್ಥ ಜೀವನದಲ್ಲಿ ದಾಂಪತ್ಯಜೀವನದಲ್ಲಿ ಹೆಚ್ಚಾಗಿ ಬಿರುಕು ಕಾಣಿಸಿ ಕೊಳ್ಳುತ್ತಿದೆ. ಗಂಡ ಹೆಂಡತಿ ಬೇರೆ ಬೇರೆಯಾಗುತ್ತಿದ್ದಾರೆ. ಡಿವೋರ್ಸ ತೆಗೆದುಕೊಳ್ಳುತ್ತಿದ್ದಾರೆ. ತಮಗಾದ ಮಕ್ಕಳ ಮೇಲೆ, ಕುಟುಂಬಗಳ ಮೇಲೆ, ಸಮಾಜದ ಮೇಲೆ ಯಾವ ಪ್ರಭಾವ ಬೀರುತ್ತದೆ ಎನ್ನುವ ವಿಚಾರ ಯಾರಿಗೂ ಇಲ್ಲ. ಕೇವಲ ಸ್ವಾರ್ಥಕ್ಕಾಗಿ, ಕೇವಲ ತನ್ನ ಸುಖದ ಹಪಾಹಪಿಗಾಗಿ ಶಾಸ್ತ್ರಕ್ಕೆ ವಿರುದ್ಧವಾಗಿ ಹೋಗುತ್ತಿದ್ದಾನೆ.

ಡಿವೋರ್ಸ ತೆಗೆದುಕೊಳ್ಳುವ ವ್ಯಕ್ತಿ ಬೇರೆಯಾಗುವದಕ್ಕೆ ಕಾರಣಗಳನ್ನು ಕೊಟ್ಟು ಪ್ರಬಲವಾಗಿ ಪ್ರತಿಪಾದಿಸುತ್ತಾನೆ. ಅವನು(ಳು) ಹಾಗಿದ್ದಾನೆ(ಳೆ) ಹೀಗಿದ್ದಾನೆ(ಳೆ) ಇಂತಹ ದೋಷಗಳು ಇವೆ. ಹೊಂದಾಣಿಕೆಯ ಸ್ವಭಾವ ಅವನ(ಳ)ದು ಅಲ್ಲ. ಇತ್ಯಾದಿ. ನಮ್ಮ ಹಿಂದಿನ ತಲೆಮಾರಿನಲ್ಲಿ ಯಾರೂ ಪರಿಪೂರ್ಣರು ಆಗಿದ್ದಿಲ್ಲ. ಹಿಂದಕ್ಕೂ ಜಗಳವಾಗುತ್ತಿದ್ದವು. ಆದರೂ ಅನ್ಯೋನ್ಯವಾಗಿಯೇ ಇರುತ್ತಿದ್ದರು. ನಾವು ಎಷ್ಟೇ ಮದುವೆಗಳಾಗೋಣ. ಆದರೆ ಸ್ವಲ್ಪವಾದರೂ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜೊತೆಯಾಗಿ ಇರಲು ಸಾಧ್ಯವೇ ಇಲ್ಲ. ಹೊಂದಿಕೊಳ್ಳುವ ಸ್ವಭಾವವಿಲ್ಲ ಎಂದು ಕಾರಣ ಕೊಟ್ಟು ಮೂರು ಜನರನ್ನು ಬಿಟ್ಟು, ನಾಲ್ಕನೇ ಮದುವೆಯಾಗಿ ಅವನ ಜೊತೆಗಾದರೂ ಹೊಂದಾಣಿಕೆ ಮಾಡಿಕೊಂಡೇ ಬದುಕುವದಾದರೆ ಆ ಕೆಲಸ ಮೊದಲಿಗೆ ಮದುವೆಯಾದ ಗಂಡನ ಜೊತೆಗೇ ಮಾಡಬಹುದಲ್ಲವೇ ?

ನಮ್ಮ ದೇವತೆಗಳನ್ನು ನೋಡಿ. ವಿಷ್ಣು ಲಕ್ಷ್ಮೀದೇವಿಯ ಜೊತೆಗೆ ಅನಾದಿ ಕಾಲದಿಂದ ಇದ್ದಾನೆ. ಬ್ರಹ್ಮದೇವರು ಸರಸ್ವತೀಯ ಜೊತೆಗೆ ಅನಾದಿಕಾಲದಿಂದ ಇದ್ದಾರೆ. ರುದ್ರದೇವರು ಪಾರ್ವತೀದೇವಿಯ ಜೊತೆಗೆ ಬಹು ಪ್ರೀತಿಯಿಂದ ಕೈಲಾಸದಲ್ಲಿ ಇದ್ದದ್ದು ಕೇಳುತ್ತೇವೆ. ಇಂದ್ರ ಶಚಿ, ಯಮ ಶ್ಯಾಮಲಾ, ವರುಣ ಗಂಗಾ ಮೊದಲಾದ ದೇವತೆಗಳು ಅವತಾರದಲ್ಲೂ ಪ್ರಾಯಃ ತಮ್ಮ ಸಂಗಾತಿಯನ್ನು ಬಿಡುವದಿಲ್ಲ.

ಸಂಗಾತಿಯ ಜೊತೆಗೆ ಸುಖದ ಸಹಬಾಳ್ವೆಗೆ ಸಮನ್ವಯವೇ ಸಹಕಾರಿ. ಪರಸ್ಪರ ವಿಚಾರ ಹಂಚಿಕೊಂಡು, ವಿಚಾರ ಮಾಡಿ ಅಹಂಕಾರವನ್ನು ತೊರೆದು ನಿರ್ಣಯ ಕೈಗೊಳ್ಳುತ್ತ ಹೋದರೆ ಯಾವ ವಿರೋಧವೂ ಇರುವದಿಲ್ಲ. ಮನೆ ಮಕ್ಕಳ ಪಾಲನೆ ವಿಚಾರದಲ್ಲಿ ಹೆಂಡತಿಯ ನಿರ್ಣಯ, ಲೌಕಿಕ ವ್ಯವಹಾರದಲ್ಲಿ ಗಂಡನ ನಿರ್ಣಯ ಹೀಗೆ ಯಾವುದರಲ್ಲಿ ಯಾರಿಗೆ ನೈಪುಣ್ಯವಿದೆಯೋ ಅವರಿಗೆ ಆಗ ಪ್ರಾಮುಖ್ಯತೆ ಕೊಡುತ್ತಿದ್ದರೆ ಪ್ರಾಯ ಜಗಳ ಉದ್ಭವಿಸುವದಿಲ್ಲ. ವಿರಸವಾಗುವದಿಲ್ಲ. ಎಲ್ಲದರಲ್ಲಿ ಸರಸವೇ ಇರುತ್ತದೆ. ಶ್ರೀಮದಾಚಾರ್ಯರು ನಮ್ಮ ದಾಂಪತ್ಯಜೀವನದಲ್ಲಿ ಬಿರುಕು ಬಂದಾಗ ಉಮಾಹರ ಚಿಂತನೆಯನ್ನು ಹೇಳಿದ್ದಾರೆ. ಮದುವೆ ಮಾಡುಕೊಳ್ಳುವ ಕನ್ಯೆ ಪಾರ್ವತಿಸಹಿತರಾದ ರುದ್ರದೇವರ ಪೂಜೆಯನ್ನು ಮಾಡಿಯೇ ಅಕ್ಷತೆಯ ಮಂಟಪಕ್ಕೆ ಬರುತ್ತಾಳೆ

ಉಮಾ ವೈ ವಾಕ್‌ ಸಮುದ್ದಿಷ್ಟಾ ಮನೋ ರುದ್ರ ಉದಾಹೃತಃ । ತದೇತನ್ಮಿಥುನಂ ಜ್ಞಾತ್ವಾ ನ ದಾಂಪತ್ಯಾದ್ವಿಹೀಯತೆ ॥

ನಮ್ಮ ದಾಂಪತ್ಯದಲ್ಲಿ ಗೊಂದಲವಾದಾಗ ಮೊದಲು ಪಾರ್ವತಿ ದೇವಿ ಸಹಿತ ರುದ್ರದೇವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ವೃತರೂಪದಲ್ಲಿ ಕೆಲವು ದಿನ ಪೂಜೆ, ಪ್ರದಕ್ಷಿಣೆ, ನಮಸ್ಕಾರ ಮಾಡಿ ಅನುಗ್ರಹ ಪಡೆದರೆ, ನಿಶ್ಚಿತವಾಗಿ ಸಂಸಾರ ಸುಭದ್ರವಾಗಿರಲು ಬೇಕಾದ ಸೌಭಾಗ್ಯ ಪಾರ್ವತಿ ದೇವಿ ಮನೋಭಿಮಾನಿಗಳಾದ ಮಂಗಲಮಯ ರುದ್ರದೇವರು ತೋರಿಸಿಕೊಡುತ್ತಾರೆ. ಸಂಯಮದಿಂದ ಇದ್ದರೆ ನಮ್ಮ ದಾಂಪತ್ಯ ಇತರರಿಗೂ ದಾರಿದೀಪವಾಗುದರಲ್ಲಿ ಸಂಶಯವೇ ಇಲ್ಲ.

Indian culture: The best idea in Indian culture is to keep marriage strong.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
Tags: indian culture
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram