ಕೆನಡಾ ಟೊರೊಂಟೊದಲ್ಲಿ ಗುಂಡಿಕ್ಕಿ ಭಾರತೀಯ ವಿದ್ಯಾರ್ಥಿಯನ್ನ ಹತ್ಯೆ….
ಕೆನಡಾ – ಟೊರೊಂಟೊ ನಗರದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬರು ಗುಂಡಿನ ದಾಳಿಯಿಂದ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಾಹಿತಿ ನೀಡಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾದ ಭಾರತೀಯ ಮೂಲದ ವಿದ್ಯಾರ್ಥಿ ಏಪ್ರಿಲ್ 7 ರ ಸಂಜೆ, ಸ್ಥಳೀಯ ಶೆರ್ಬೋರ್ನ್ ಮೆಟ್ರೋ ಸುರಂಗಮಾರ್ಗದ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಟೊರೊಂಟೊ ಪೊಲೀಸ್ ರು ತಿಳಿಸಿದ್ದಾರೆ.
ಟೊರೊಂಟೊದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಗುಂಡು ತಗುಲಿ ಸಾವನ್ನಪ್ಪಿದ ದಾರುಣ ಘಟನೆಯಿಂದ ದುಃಖಿತನಾಗಿದ್ದೇನೆ. ಕುಟುಂಬಕ್ಕೆ ತೀವ್ರ ಸಂತಾಪಗಳು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.
ಗುಂಡೇಟಿನಿಂದ ಬಳಲುತ್ತಿದ್ದ ವಾಸುದೇವ್ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು ಅಲ್ಲಿ ಅವರು ತೀವ್ರ ಗಾಯಗಳಿಂದ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ಟೊರೊಂಟೊ ಪೋಲೀಸ್ ತನಿಖಾಧಿಕಾರಿಗಳು ಆ ಸಮಯದಲ್ಲಿ ಘಟನಾ ಪ್ರದೇಶದಲ್ಲಿದ್ದ ಸಾಕ್ಷಿಗಳನ್ನು ಸಿಸಿಟಿವಿ ಸಾಕ್ಷ್ಯಗಳಿಂದ ಹುಡುಕುತ್ತಿದ್ದಾರೆ.
ಟೊರೊಂಟೊದಲ್ಲಿನ ಭಾರತೀಯ ಕಾನ್ಸುಲೇಟ್ ಜನರಲ್ ಟ್ವೀಟ್ ಮಾಡಿ ಗುರುವಾರ “ಟೊರೊಂಟೊದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಕಾರ್ತಿಕ್ ವಾಸುದೇವ್ ಅವರ ದುರದೃಷ್ಟಕರ ಹತ್ಯೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ದುಃಖಿತರಾಗಿದ್ದೇವೆ” ಎಂದು ಹೇಳಿದ್ದಾರೆ. “ನಾವು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ, ಕಾರ್ತೀಕ ಅವರ ಶರೀರದ ವಾಪಸಾತಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತೇವೆ.” ಎಂದು ಹೇಳಿದ್ದಾರೆ.