ನವದೆಹಲಿ, ಸೆ.26: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಬಳಿಕ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಭಾರತ (India), ಸ್ವದೇಶಿ ಅಸ್ತ್ರಗಳನ್ನು ಸೇನೆಗೆ ಸೇರ್ಪಡೆ ಮಾಡಿಕೊಳ್ಳುತ್ತಲೇ ಇದೆ. ಈ ಸಾಲಿಗೆ ಮತ್ತೊಂದು ಶಕ್ತಿಶಾಲಿ ಅಸ್ತ್ರ ಸೇರ್ಪಡೆಯಾಗಿದೆ. ಭಾರತವು ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಅಗ್ನಿ-ಪ್ರೈಮ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ಭಾರತವು ರಕ್ಷಣಾ ಸಾಮರ್ಥ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.
ಒಡಿಶಾದ (Odisha) ಬಾಲಾಸೋರ್ನಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಪರೀಕ್ಷೆ ನಡೆಸಲಾಗಿದೆ. ಅಗ್ನಿ-ಪ್ರೈಮ್ ಕ್ಷಿಪಣಿಯು ರೈಲು-ಆಧಾರಿತ ಮೊಬೈಲ್ ಲಾಂಚರ್ನಿಂದ (Mobile launcher) ಯಶಸ್ವಿಯಾಗಿ ಉಡಾವಣೆಗೊಂಡಿದ್ದು, ತನ್ನ ಗುರಿ ನಿಖರವಾಗಿ ತಲುಪಿದೆ. ಭವಿಷ್ಯದ ಪೀಳಿಗೆಯ ಕ್ಷಿಪಣಿಯನ್ನು 2,000 ಕಿಲೋಮೀಟರ್ಗಳ ವ್ಯಾಪ್ತಿಯನ್ನು ಒಳಗೊಳ್ಳಲು ವಿನ್ಯಾಸಗೊಳಿಸಲಾಗಿದೆ.
ಇದನ್ನೂ ಓದಿ: ಪಿಎಫ್ ಖಾತೆದಾರರಿಗೆ ಬಂಪರ್ ಸುದ್ದಿ: ಇನ್ಮುಂದೆ ಎಟಿಎಂನಿಂದಲೇ ಹಣ ವಿತ್ಡ್ರಾ ಸಾಧ್ಯ
ಈ ಕ್ಷಿಪಣಿಯು ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ. ವಿಶೇಷವಾಗಿ ವಿನ್ಯಾಸಗೊಳಿಸಲಾದ ರೈಲು ಆಧಾರಿತ ಮೊಬೈಲ್ ಲಾಂಚರ್ನಿಂದ ನಡೆಸಲಾದ ಈ ರೀತಿಯ ಮೊದಲ ಉಡಾವಣೆ ಇದಾಗಿದೆ.
Intermediate Range Agni-Prime Missile was successfully tested on 24 Sep 2025 from a Rail based Mobile launcher. This will be a force multiplier to strategic forces, with a game changer road cum rail missile system pic.twitter.com/bEmDQoHNUf
— DRDO (@DRDO_India) September 25, 2025
ಮೋದಿ ಅಭಿನಂದನೆ
ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ಮಧ್ಯಂತರ ಶ್ರೇಣಿಯ ʻಅಗ್ನಿ ಪ್ರೈಮ್ ಕ್ಷಿಪಣಿʼಯು 2,000 ಕಿಮೀ ವರೆಗೂ ನುಗ್ಗಿ ತನ್ನ ಗುರಿಯನ್ನ ಹೊಡೆಯುತ್ತೆ. ಈ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಯೊಂದು ಕ್ಷಣದಲ್ಲೂ ಆತ್ಮನಿರ್ಭರಕ್ಕಾಗಿ ಒತ್ತು ನೀಡುವ ಮೂಲಕ ರಕ್ಷಣಾ ಸಾಮರ್ಥ್ಯದಲ್ಲಿ ಸ್ವಾವಲಂಬನೆಯಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ







