ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕರ್ನಾಟಕವನ್ನು ಲಾಕ್ ಡೌನ್ ಮಾಡಿದೆ. ಕೊರೊನಾ ಭೀಕರತೆಗೆ ರಾಜ್ಯವೇ ಸ್ತಬ್ಧವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೋಟೆಲ್, ಮಾಲ್, ಕೆಫೆಗಳು ಮಾರ್ಚ್ 31ರವರೆಗೂ ಬಂದ್ ಆಗಿದ್ದು, ಯಾವುದೇ ಆಹಾರ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಬಡವರಿಗಾಗಿ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ತಿಂಡಿ, ಊಟದ ವ್ಯವಸ್ಥೆ ಮಾಡಿದೆ. ಹಾಗಾಗಿ, ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನ ಇಂದಿರಾ ಕ್ಯಾಂಟೀನುಗಳಿಗೆ ಬಂದವರಿಗೆ ಆಹಾರ ವಿತರಣೆ ಮಾಡಲಾಗ್ತಿದೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ
ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...








