ಇಂಡಿ : ಭೀಕರ ರಸ್ತೆ ಅಪಘಾತ, ಇಬ್ಬರು ಸಾವು | road accident
ಇಂಡಿ : ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿದ ಗ್ರಾಮದ ನಡೆದಿದೆ.
ಮೃತರನ್ನು ಬಸವನಬಾಗೇವಾಡಿಯ ಎಂಬತ್ನಾಳ ಗ್ರಾಮದ ಡಿ ಎಸ್ ಬಿರಾದಾರ, ಆಂಧ್ರ ಮೂಲದ ಚೈತನ್ಯಕುಮಾರ ಎಂದು ಗುರುತಿಸಲಾಗಿದೆ.
ಇವರು ಖೇಡಗಿ ಗ್ರಾಮದಲ್ಲಿನ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಇಂಡಿಯಿಂದ ಖೇಡಗಿಗೆ ಬೈಕ್ ನಲ್ಲಿ ಹೋಗುವಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.