ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿಮಗಿಷ್ಟವಾಗುವ ಸುದ್ದಿಗಳು : Interesting News

Namratha Rao by Namratha Rao
February 15, 2021
in Newsbeat, Saaksha Special, ಎಸ್ ಸ್ಪೆಷಲ್
intresting facts
Share on FacebookShare on TwitterShare on WhatsappShare on Telegram

ನಿಮಗಿಷ್ಟವಾಗುವ ಸುದ್ದಿಗಳು : Interesting News

500 ವರ್ಷಗಳಿಂದ ಕಬ್ಬಿಣದ ಸರಪಳಿಗಳಿಂದ ಬಂಧಿಯಾಗಿದ್ದಾನೆ ಸೃಷ್ಠಿಕರ್ತ..!

ಚಿಕ್ಕಮಗಳೂರು : ಭಾರತದಲ್ಲಿ ಪ್ರತಿವೊ0ದು ಆಚರಣೆಯ ಹಿಂದೆ ಒಂದು ಅರ್ಥ ಇರುತ್ತೆ. ಹಾಗೇ ಪ್ರತಿ ನಂಬಿಕೆ ಹಿಂದೆ ಹಲವಾರು ಕಥೆಗಳು ಇರುತ್ವೆ. ಹಳ್ಳಿ ಭಾಗಗಳಲ್ಲಿ ಪ್ರತಿ ದೇವಾಲಯದ ಹಿಂದೆ ಒಂದು ಜನಪದ ಕಥೆ ಇರುತ್ತೆ. ಆ ಕತೆಗಳನ್ನು ಕೇಳಿದ್ರೆ ಈ ಕಾಲದಲ್ಲೂ ಇದೇಲ್ಲಾ ನಡೆಯುತ್ತಾ..? ಹೀಗೆಲ್ಲಾ ಆಗುತ್ತಾ ಅಂತ ಅನಿಸುತ್ತೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಅದೇ ರೀತಿ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ದೇವಾಲಯದಲ್ಲಿ ನಡೆಯುತ್ತಿರುವ ಒಂದು ಪದ್ಧತಿ ಕೂಡ ಸಾಕಷ್ಟು ಆಶ್ಚರ್ಯವನ್ನುಂಟು ಮಾಡುತ್ತೆ.

ಇಲ್ಲಿ ಸುಮಾರು 500 ವರ್ಷಗಳಿಂದ ಸೃಷ್ಟಿಕರ್ತ ಕೆಂಚರಾಯಸ್ವಾಮಿಯನ್ನ ಕಬ್ಬಿಣದ ಸರಪಳಿಯಿಂದ ಬಂಧಿಸಲಾಗಿದೆ. ಇದಕ್ಕೆ ಕಾರಣ ಕೆಂಚರಾಯ ಸ್ವಾಮಿ 2036 ಎಕರೆ ನೀರನ್ನು ಮೂರೇ ಬೊಗಸೆಯಲ್ಲಿ ಕುಡಿದು ಮುಗಿಸುತ್ತಾನೆ ಅಂತಾ.. ಇದು ಅಚ್ಚರಿ ಎನಿಸಿದ್ರೂ ನೀವು ನಂಬಲೇಬೇಕು.

ಇಲ್ಲಿನ ಜನರಿಗೆ ಸಖರಾಯಪಟ್ಟಣದ ಸರಪಳಿ ಕೆಂಚರಾಯ ಸ್ವಾಮಿ ಅಂದ್ರೆ ಭಕ್ತಿ ಮತ್ತು ಭಯ ಒಟ್ಟಿಗೆ ಬರುತ್ತೆ. ಈ ಕೆಂಚರಾಯ ಸ್ವಾಮಿ ಅಯ್ಯನಕೆರೆ ನೀರನ್ನ ಮೂರೇ ಬೊಗಸೆಯಲ್ಲಿ ಕುಡಿದು ಖಾಲಿ ಮಾಡುತ್ತಾನೆ ಅನ್ನೋ ನಂಬಿಕೆ ಇಲ್ಲಿನವರಲ್ಲಿದ್ದು, ಇದಕ್ಕೆ ಹೆದರಿ ಕಳೆದ 500 ವರ್ಷಗಳಿಂದ ದೇವರ ಮೂರ್ತಿಯನ್ನ ಕಬ್ಬಿಣದ ಸರಪಳಿಯಿಂದ ಬಂಧಿಸಿದ್ದಾರೆ.

ವಾವ್ಹಾ…! ಆಸ್ಪತ್ರೆ ಮೆನುವಿನಲ್ಲಿ ಚಿಕನ್ ಸಾಂಬಾರ್ : ರೋಗಿಗಳಿಗೆ ಮಾತ್ರ..!

ಹೈದರಾಬಾದ್ : ಆಸ್ಪತ್ರೆ ಊಟ , ರೋಗಿಗಳಿಗೆ ನೀಡುವ ಊಟ ಅಂದ್ರೆ ಹೇಳಿ ಕೇಳಿ ಹೇಗಿರುತ್ತೆ ಎಲ್ರಿಗೂ ಅನುಭವ ಆಗೇ ಆಗಿರುತ್ತೆ. ರುಚಿಯಾದ ಮಸಾಲೆದಾರ್ ಊಟ ಸಿಗೋದು ದೂರದ ಮಾತು, ಸರರಿಯಾಗಿ ಉಪ್ಪು, ಖಾರ , ಹುಳಿ ಇರೋ ಊಟವೂ ರೋಗಿಗಳಿಗೆ ಸಿಗೋದಿಲ್ಲ. ಅಂತ್ರದಲ್ಲಿ ರೋಗಿಗಳಿಗೆ ಆಹಾರದ ಮೆನುನಲ್ಲಿ ಚಿಕನ್ ಸೇರಿಸಿದ್ದಾರೆ ಎಂದರೆ ಆಶ್ಚರ್ಯ ಆಗದೇ ಇರುತ್ತಾ.

ಎಸ್ ಕ್ಷಯ ರೋಗಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ತೆಲಂಗಾಣ ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಕ್ಷಯ ರೋಗಿಗಳಿಗೆ ಚಿಕನ್ ಸಾಂಬಾರ್ ಅನ್ನು ಒದಗಿಸುತ್ತಿದೆ. ಕ್ಷಯ ರೋಗದಿಂದ ಬಹುಬೇಗನೇ ಗುಣಮುಖರಾಗಲು ಆಸ್ಪತ್ರೆಯ ಮೆನುವಿನಲ್ಲಿ ಚಿಕನ್ ಸಾಂಬರ್ ಸೇರಿಸಿರುವ ಸರ್ಕಾರ, ಅಗತ್ಯವಿರುವ ಪೋಷಕಾಂಶಗಳನ್ನು ರೋಗಿಗಳಿಗೆ ನೀಡಲು ಈ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ.

ಹೀಗಾಗಿ ವಾರಕ್ಕೆ (ಬುಧವಾರ) ಒಂದು ಬಾರಿ ಚಿಕನ್ ಸಾಂಬಾರ್ ನೀಡಲಾಗುವುದು. ಉಳಿದಂತೆ ಪ್ರತಿ ದಿನ ಎರಡು ಮೊಟ್ಟೆಗಳನ್ನು ನೀಡಲಾಗುವುದು. ರಾಜ್ಯದಲ್ಲೇ ಮೊದಲ ಬಾರಿಗೆ ಖಮ್ಮಮ್ ಜಿಲ್ಲೆಯಲ್ಲಿರುವ ಕ್ಷಯ ರೋಗ ವಿಭಾಗದಲ್ಲಿ ಈ ಯೋಜನೆಯನ್ನು ಬುಧವಾರ ಆರಂಭಿಸಲಾಗಿದೆ.

ಮಹಾರಾಷ್ಟ್ರ : ಹೆತ್ತವರನ್ನು ನಿರ್ಲಕ್ಷ್ಯ ಮಾಡಿದ 7 ಉದ್ಯೋಗಿಗಳ ಸ್ಯಾಲರಿ ಕಟ್..!

ಉತ್ತರಪ್ರದೇಶ: ಮಕ್ಕಳನ್ನ ಕಷ್ಟ ಪಟ್ಟು ಅವರಿಗೆ ಜೀವನಕ್ಕೆ ಬೇಕಾದ ದಾರಿ ಮಾಡಿಕೊಟ್ಟು , ಅವರು ತಮ್ಮ ಕಾಲಿನ ಮೇಲೆ ನಿಲ್ಲುವುದಕ್ಕೆ ನೆರವಾಗುವ ತಂದೆ ತಾಯಿಯನ್ನ ವಯಸ್ಸಾದ ಮೇಲೆ ಮಕ್ಕಳು ನಿರ್ಲಕ್ಷ್ಯ ಮಾಡಿ ಬೀದಿಗೆ ತಳ್ಳಿರುವುದನ್ನ ನಾವು ನೋಡುತ್ತಲೇ ಇರುತ್ತೇವೆ.

ಆದ್ರೆ ಇಂತಹದ್ದೇ ತಪ್ಪು ಮಾಡಿದ ಮಕ್ಕಳಿಗೆ ಮಹಾರಾಷ್ಟ್ರದಲ್ಲಿ ವಿಧಿಸಲಾದ ಶಿಕ್ಷೆ ನೊಡಿದ್ರೆ ಎಲ್ಲೆಡೆ ಈ ರೀತಿ ನಿಯಮ ಜಾರಿ ಮಾಡಿದ್ರೆ ಚೆನ್ನಾಗಿರುತ್ತೆ. ಆಗಲಾದ್ರೂ ತಂದೆ ತಾಯಿಯನ್ನ ಮಕ್ಕಳು ಅಲಕ್ಷ್ಯ ಮಾಡುವುದಿಲ್ಲ ಎನ್ನಿಸುತ್ತೆ.

ಹೌದು ವಯಸ್ಸಾದ ಹೆತ್ತವರನ್ನು ನಿರ್ಲಕ್ಷಿಸಿದವರಿಗೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯೊಂದು ತಕ್ಕ ಶಿಕ್ಷೆಯನ್ನೇ ನೀಡಿದೆ. ಅಪ್ಪ-ಅಮ್ಮನನ್ನು ನೋಡಿಕೊಳ್ಳದ 7 ಮಂದಿ ಉದ್ಯೋಗಿಗಳ ವೇತನದಲ್ಲಿ ಶೇ.30ರಷ್ಟು ಕಡಿತಗೊಳಿಸಲಾಗಿದೆ ಎಂದು ಇಲ್ಲಿನ ಲಾತೂರು ಜಿಲ್ಲಾ ಪರಿಷತ್ ಅಧ್ಯಕ್ಷ ರಾಹುಲ್ ಬೋಂದ್ರೆ ತಿಳಿಸಿದ್ದಾರೆ.
ವೇತನದಿಂದ ಕಡಿತವಾದ ಮೊತ್ತವನ್ನು ಆಯಾ ಉದ್ಯೋಗಿಯ ಹೆತ್ತವರ ಖಾತೆಗೆ ಜಮೆ ಮಾಡಲಾಗುತ್ತದೆ. ಕಳೆದ ನವೆಂಬರ್ ನಲ್ಲಿ ಜಿಲ್ಲಾ ಪರಿಷತ್ ಇಂಥದ್ದೊಂದು ತೀರ್ಮಾನ ಕೈಗೊಂಡಿತ್ತು. ಹೆತ್ತವರ ನಿರ್ಲಕ್ಷ್ಯಕ್ಕೆ ಸಂಬಂಧಿಸಿ 12 ದೂರುಗಳು ಬಂದಿದ್ದು, ಈ ಪೈಕಿ 7 ಮಂದಿಯ ವೇತನ ಕಡಿತಗೊಳಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಬ್ರೆಡ್ ಗುಲಾಬ್ ಜಾಮೂನ್

ಬ್ರೆಡ್ ಗುಲಾಬ್ ಜಾಮೂನ್ Saakshatv cooking recipes Gulabjamun

ಪದಾರ್ಥಗಳು

1 ಕಪ್ ಸಕ್ಕರೆ
1/2 ಕಪ್ ನೀರು
1 1/2 ಟೀಸ್ಪೂನ್ ಏಲಕ್ಕಿ ಪುಡಿ
3 ಟೀಸ್ಪೂನ್ ನಟ್ಸ್( ಗೋಡಂಬಿ ಬೀಜಗಳು, ಬಾದಾಮಿ, ಪಿಸ್ತಾ)
1 ಟೀಸ್ಪೂನ್ ಗುಲ್ಕಂಡ್ / ರೋಸ್ ಪೆಟಲ್ ಜಾಮ್
6 ಬ್ರೆಡ್ ಚೂರುಗಳು
ಒಂದು ಪಿಂಚ್ ಅಡಿಗೆ ಸೋಡಾ
ಅಗತ್ಯವಿರುವಷ್ಟು ಹಾಲು Saakshatv cooking recipes Gulabjamun

ಪ್ಯಾನ್ ಅನ್ನು ಹೆಚ್ಚಿನ ಶಾಖದಲ್ಲಿ ಬಿಸಿ ಮಾಡಿ.ಸಕ್ಕರೆ ಮತ್ತು ನೀರು ಸೇರಿಸಿ. ಚೆನ್ನಾಗಿ ಬೆರೆಸಿ.
ಸಕ್ಕರೆ ಕರಗಿದಾಗ ಮತ್ತು ಸಿರಪ್ ಕುದಿ ಬರಲು ಪ್ರಾರಂಭವಾದಾಗ ತಾಪಮಾನವನ್ನು ಕಡಿಮೆ ಮಾಡಿ.

ಸಿರಪ್ ಅನ್ನು 7-8 ನಿಮಿಷಗಳ ಕಾಲ ಕುದಿಯಲು ಬಿಡಿ. ನಂತರ ಕೆಳಗಿಳಿಸಿ.
ಏಲಕ್ಕಿ ಪುಡಿ ಸೇರಿಸಿ. ಚೆನ್ನಾಗಿ ಬೆರೆಸಿ. ಸಕ್ಕರೆ ಪಾಕ ರೆಡಿಯಾಗಿದೆ.‌

ಒಂದು ಪಾತ್ರೆಯಲ್ಲಿ ಗುಲ್ಕಂಡ್ (ಗುಲಾಬಿ ದಳಗಳ ಜಾಮ್) ತೆಗೆದುಕೊಳ್ಳಿ. ಅದಕ್ಕೆ ನಟ್ಸ್ ಗಳನ್ನು ( ಗೋಡಂಬಿ ಬೀಜಗಳು, ಬಾದಾಮಿ, ಪಿಸ್ತಾ) ಸೇರಿಸಿ.

ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಅದರ ಸಣ್ಣ ಉಂಡೆಗಳನ್ನಾಗಿ ಮಾಡಿ. ಇದನ್ನು ಸ್ವಲ್ಪ ಸಮಯದವರೆಗೆ ರೆಫ್ರಿಜರೇಟರ್ನಲ್ಲಿ ಇರಿಸಿ.

ಬ್ರೆಡ್ ತುಂಡುಗಳನ್ನು ತೆಗೆದುಕೊಳ್ಳಿ. ಬ್ರೆಡ್ ನ ಅಂಚುಗಳನ್ನು ಕತ್ತರಿಸಿ. ಈಗ ಬ್ರೆಡ್‌ ಅನ್ನು ಸಣ್ಣ ತುಂಡುಗಳನ್ನು ಮಾಡಿ ಪುಡಿ ಮಾಡಿ.
ಅಡಿಗೆ ಸೋಡಾ ಸೇರಿಸಿ. ಹಾಲನ್ನು ಸೇರಿಸಿ ಮಿಶ್ರಣ ಮಾಡಿ.
ಬ್ರೆಡ್‌ನ ತಾಜಾತನಕ್ಕೆ ಅನುಗುಣವಾಗಿ ಹಾಲಿನ ಪ್ರಮಾಣವನ್ನು ಹೊಂದಿಸಿ. ಅರೆ ಮೃದುವಾದ ಹಿಟ್ಟನ್ನು ತಯಾರಿಸಿ. ಅಗತ್ಯವಿದ್ದರೆ ಹೆಚ್ಚು ಹಾಲು ಸೇರಿಸಿ.
ರೆಫ್ರಿಜರೇಟರ್ನಲ್ಲಿ ಇರಿಸಿದ ಮಿಶ್ರಣವನ್ನು ಬೆರೆಸಿಕೊಳ್ಳಿ. ಇದನ್ನು ಸಣ್ಣ ಚೆಂಡುಗಳನ್ನಾಗಿ ಮಾಡಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ. ಗುಲಾಬ್ ಜಾಮೂನ್‌ಗಳನ್ನು ಕಡಿಮೆ ಶಾಖದಲ್ಲಿ ಕಂದು ಬಣ್ಣ ಬರುವವರೆಗೆ ಹುರಿಯಿರಿ.

ಗುಲಾಬ್ ಜಾಮೂನ್‌ಗಳನ್ನು ಹುರಿದ ನಂತರ, ಅವುಗಳನ್ನು ಬೆಚ್ಚಗಿನ ಸಕ್ಕರೆ ಪಾಕದಲ್ಲಿ ಬಿಡಿ. ಸಿರಪ್ ನಲ್ಲಿ 2-3 ಗಂಟೆಗಳ ಕಾಲ ಬಿಡಿ. ಈಗ ಸಕ್ಕರೆ ಪಾಕದ ಜೊತೆಗೆ ಬ್ರೆಡ್ ಗುಲಾಬ್ ಜಾಮೂನ್‌ಗಳನ್ನು ಸವಿಯಿರಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: human intrestedintresting factsintresting news
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram