INX ಮೀಡಿಯಾ ಹಗರಣ – ಚಿದಂಬರಂ ವಿರುದ್ಧ ವಿಚಾರಣೆಗೆ ತಡೆ ನೀಡಿದ ದೆಹಲಿ ಹೈಕೋರ್ಟ್
ನವದೆಹಲಿ : INX ಮೀಡಿಯಾ ಹಗರಣದಲ್ಲಿ ಪ್ರಮುಖ ಆರೋಪಿ ಎನಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರ ಕುರಿತು ಸಿಬಿಐ ತನಿಖೆಗೆ ಸಂಬಂಧಿಸಿ ಕೆಳ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಆರೋಪಿತರಿಗೆ ದಾಖಲೆಗಳನ್ನು ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ನ್ಯಾಯಾಮೂರ್ತಿ ಸುರೇಶಕುಮಾರ್ ಕೈಟ್ ಅವರು ಚಿದಂಬರಂ ಹಾಗೂ ಇತರರಿಗೆ ನೋಟಿಸ್ ನೀಡಿದ್ದಾರೆ.
ಚಿದಂಬರಂ ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ, ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿಯು 305 ಕೋಟಿ ರೂಪಾಯಿಗಳ ವಿದೇಶಿ ಹೂಡಿಕೆಯನ್ನು ಸ್ವೀಕರಿಸಲು ಐಎನ್ಎಕ್ಸ್ ಮೀಡಿಯಾಕ್ಕೆ ಅನುಮತಿ ನೀಡಿತ್ತು. ಈ ರೀತಿ ಅನುಮತಿ ನೀಡುವ ವೇಳೆ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ 2017ರಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತು. ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿತು. ಅಲ್ಲದೇ ಚಿದಂಬರಂ ಸೆರೆವಾಸವನ್ನೂ ಅನುಭವಿಸಿ ಇದೀಗ ಜಾಮೀನಿನ ಮೇಲೆ ಹೊರಬಂದಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.
ಇಸ್ರೇಲ್ ಮೇಲೆ ಹಮಾಸ್ ನಡೆಸುತ್ತಿರುವ ದಾಳಿ ಖಂಡಿಸಿದ ಭಾರತ