ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಮಂಕಾಗುತ್ತಿರುವ ಈ ಐದು ಬ್ಯಾಟ್ಸ್ ಮೆನ್ ಗಳು.. ಫ್ರಾಂಚೈಸಿಗಳಿಗೆ ದೊಡ್ಡ ತಲೆನೋವು..!

admin by admin
October 8, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
dinesh karthik ipl 2020 saakhatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಮಂಕಾಗುತ್ತಿರುವ ಈ ಐದು ಬ್ಯಾಟ್ಸ್ ಮೆನ್ ಗಳು.. ಫ್ರಾಂಚೈಸಿಗಳಿಗೆ ದೊಡ್ಡ ತಲೆನೋವು..!

robin uttappa ipl 2020 saakshatv2020ರ ಐಪಿಎಲ್ ನಲ್ಲಿ ಯುವ ಆಟಗಾರರದ್ದೇ ದರ್ಬಾರು. ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದ್ದ ಹುಡುಗರು ಐಪಿಎಲ್ ನಲ್ಲಿ ಚಿಂದಿ ಉಡಾಯಿಸುತ್ತಿದ್ದಾರೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಸುಮಾರು 10ರಿಂದ 15 ಮಂದಿ ಯುವ ಆಟಗಾರರು ಈ ಬಾರಿಯ ಐಪಿಎಲ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ. ಈ ಹುಡುಗರ ಬ್ಯಾಟಿಂಗ್ ವೈಖರಿಯನ್ನು ನೋಡಿದಾಗ ಕಣ್ಣಂಚಿನಲ್ಲಿ ಭವಿಷ್ಯದ ಟೀಮ್ ಇಂಡಿಯಾ ಎದ್ದು ಕಾಣುತ್ತಿದೆ.
ಹೌದು, ಯುವ ಆಟಗಾರರ ಅಬ್ಬರದ ಮುಂದೆ ಹಿರಿಯ ಹಾಗೂ ಅನುಭವಿ ಆಟಗಾರರ ಆಟ ಕಳೆಗುಂದುತ್ತಿದೆ. ಹಾಗಂತ ಎಲ್ಲರೂ ಅಲ್ಲ. ಟೀಮ್ ಇಂಡಿಯಾದ ಬಹುತೇಕ ಆಟಗಾರರು ಹಾಗೂ ಕೆಲವು ವಿದೇಶಿ ಆಟಗಾರರು ಐಪಿಎಲ್ ನಲ್ಲಿ ಗಮನಸೆಳೆಯುವಂತಹ ಪ್ರದರ್ಶನ ನೀಡುತ್ತಿದ್ದಾರೆ.
ಆದ್ರೆ ಇನ್ನು ಕೆಲವು ಹಿರಿಯ ಆಟಗಾರರು ತೀರಾ ನೀರಸ ಪ್ರದರ್ಶನ ನೀಡಿ ಟೀಕೆಗೂ ಗುರಿಯಾಗುತ್ತಿದ್ದಾರೆ. ಮುಖ್ಯವಾಗಿ ಈ ಬಾರಿಯ ಐಪಿಎಲ್ ನಲ್ಲಿ ವೈಫಲ್ಯ ಅನುಭವಿಸಿದ್ದ ಟಾಪ್ -5 ಬ್ಯಾಟ್ಸ್ ಮೆನ್ ಗಳು ಯಾರು ಅಂತ ಪ್ರಶ್ನೆ ಮಾಡಿದಾಗ ಉತ್ತರ ಈ ಕೆಳಗಿನಂತಿದೆ.

ದಿನೇಶ್ ಕಾರ್ತಿಕ್.
ದಿನೇಶ್ ಕಾರ್ತಿಕ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ. ನಾಯಕ ಹಾಗೂ ವಿಕೆಟ್ ಕೀಪರ್ ಆಗಿ ದಿನೇಶ್ ಕಾರ್ತಿಕ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದ್ರೆ ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಗಳಿಸಿದ್ದು ಕೇವಲ 37 ರನ್.

ರಾಬಿನ್ ಉತ್ತಪ್ಪ
ರಾಬಿನ್ ಉತ್ತಪ್ಪ.. ಹೊಡಿಬಡಿ ಆಟಗಾರ. ಕೆಕೆಆರ್ ತಂಡದ ಹಿರಿಯ ಆಟಗಾರನಾಗಿದ್ದ ರಾಬಿನ್ ಉತ್ತಪ್ಪ ಅವರನ್ನು ರಾಜಸ್ತಾನ ರಾಯಲ್ಸ್ ತಂಡ ಮೂರು ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಆದ್ರೆ ಈ ಬಾರಿಯ ಐಪಿಎಲ್ ನಲ್ಲಿ ಉತ್ತಪ್ಪ ನಿರಾಸೆ ಮೂಡಿಸಿದ್ದಾರೆ. ಸದ್ಯದ ಟೂರ್ನಿಯಲ್ಲಿ ರಾಬಿನ್ ಉತ್ತಪ್ಪ 33 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಅದೇ ರೀತಿ ಕೆಟ್ಟ ಫೀಲ್ಡಿಂಗ್ ಮೂಲಕವೂ ಟೀಕೆಗೆ ಗುರಿಯಾಗಿದ್ದಾರೆ.

ಮುರಳಿ ವಿಜಯ್
ಮುರಳಿ ವಿಜಯ್.. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ. 2010ರಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಅಜೇಯ 127 ರನ್ ಕೂಡ ಸಿಡಿಸಿದ್ದರು. ಆಡಿರುವ ಮೂರು ಪಂದ್ಯಗಳಲ್ಲಿ ಮುರಳಿ ವಿಜಯ್ ಗಳಿಸಿದ್ದ ರನ್ ಕೇವಲ 32. ಹೀಗಾಗಿ ಸಿಎಸ್ ಕೆ ತಂಡದ 11ರ ಬಳಗದಿಂದಲೂ ಹೊರಗುಳಿದಿದ್ದಾರೆ.

Glenn Maxwell  ipl 2020 saakshatvಸುನೀಲ್ ನರೇನ್
ಸುನೀಲ್ ನರೇನ್.. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಲ್ ರೌಂಡರ್. ಸ್ಪಿನ್ ಜಾದು ಮೂಲಕ ಗಮನ ಸೆಳೆದಿದ್ದ ಸುನೀಲ್ ನರೇನ್ ಕೆಕೆಆರ್ ತಂಡದ ಇನಿಂಗ್ಸ್ ಕೂಡ ಆರಂಭಿಸುತ್ತಿದ್ದರು. ಆದ್ರೆ ಸುನೀಲ್ ನರೇನ್ ಅವರು ಸಿಪಿಎಲ್ ನಲ್ಲಿ ಮಾಡಿರುವಂತಹ ಬ್ಯಾಟಿಂಗ್ ಅಬ್ಬರವನ್ನು ಐಪಿಎಲ್ ನಲ್ಲಿ ಮಾಡಲು ವಿಫಲರಾಗಿದ್ದಾರೆ. ಸದ್ಯ ನಾಲ್ಕು ಪಂದ್ಯಗಳನ್ನು ಆಡಿರುವ ನರೇನ್ ಅವರು 27 ರನ್ ಗಳಿಸಿದ್ದಾರೆ.

ಗ್ಲೇನ್ ಮ್ಯಾಕ್ಸ್ ವೆಲ್
ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ಅವರು ಚುಟುಕು ಕ್ರಿಕೆಟ್‍ನ ಅದ್ಭುತ ಆಟಗಾರ. ಕಿಂಗ್ಸ್ ಇಲೆವೆನ್ ತಂಡ 10.75 ಕೋಟಿಗೆ ಖರೀದಿ ಮಾಡಿತ್ತು. ಆದ್ರೆ ಗ್ಲೇನ್ ಮ್ಯಾಕ್ಸ್ ವೆಲ್ ಅವರು ನಿರೀಕ್ಷಿತ ಮಟ್ಟದ ಆಟವನ್ನು ಆಡುತ್ತಿಲ್ಲ. ಗ್ಲೇನ್ ಬ್ಯಾಟ್ ನಿಂದ ಸರಾಗವಾಗಿ ರನ್ ಕೂಡ ಹರಿದುಬರುತ್ತಿಲ್ಲ. ಆಡಿರುವ ಐದು ಪಂದ್ಯಗಳಲ್ಲಿ ಮ್ಯಾಕ್ಸ್ ವೆಲ್ ಅವರು ಗಳಿಸಿದ್ದ ರನ್ ಕೇವಲ 41 .
ಒಟ್ಟಿನಲ್ಲಿ ದಿನೇಶ್ ಕಾರ್ತಿಕ್, ಸುನೀಲ್ ನರೇನ್, ಮುರಳಿ ವಿಜಯ್, ರಾಬಿನ್ ಉತ್ತಪ್ಪ ಹಾಗೂ ಗ್ಲೇನ್ ಮ್ಯಾಕ್ಸ್ ವೆಲ್ ವಿಫಲರಾಗಿರೋದು ಆಯಾ ಫ್ರಾಂಚೈಸಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Tags: #dinesh karthik#Murali Vijay#Sunil NarinecskGlenn MaxwellIPLIPL 2020kings punjabkkrRobin Uthapparr
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram