ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ಮನೆಯೊಂದು ಮೂರು ಬಾಗಿಲು ಆಯ್ತಾ ಧೋನಿಯ ಸಿಎಸ್ ಕೆ ಟೀಮ್ ?

Sanath Rai by Sanath Rai
October 20, 2020
in IPL 2020, Newsbeat, ಕ್ರೀಡೆ
mahendra singh dhoni ipl 2020 csk saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಮನೆಯೊಂದು ಮೂರು ಬಾಗಿಲು ಆಯ್ತಾ ಧೋನಿಯ ಸಿಎಸ್ ಕೆ ಟೀಮ್ ?

csk team ipl 2020 saakshatvಇಂಡಿಯನ್ ಪ್ರೀಮಿಯರ್ ಲೀಗ್.. ಪ್ರತಿಷ್ಠಿತ ಟಿ-ಟ್ವೆಂಟಿ ದೇಸಿ ಟೂರ್ನಿ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ದುಡ್ಡಿನ ಮಳೆ ಹರಿಯುತ್ತಿರುವ ಈ ಟೂರ್ನಿಯಲ್ಲಿ ಆಟದ ಜೊತೆ ಪಕ್ಕಾ ಮನರಂಜನೆಯೂ ಇದ್ದೇ ಇರುತ್ತೆ.

ಅಂದ ಹಾಗೇ ಐಪಿಎಲ್ ಅಂದ ತಕ್ಷಣ ಮೊದಲು ನೆನಪಾಗುವ ತಂಡ ಚೆನ್ನೈ ಸೂಪರ್ ಕಿಂಗ್ಸ್..

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ನಲ್ಲಿ ಸ್ಥಿರ ಪ್ರದರ್ಶನ ನೀಡಿರುವ ತಂಡ.
ಕಳೆದ 12 ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತ ಪ್ರದರ್ಶನವನ್ನೇ ನೀಡಿದೆ.

ಮೂರು ಬಾರಿ ಚಾಂಪಿಯನ್ ಹಾಗೂ ಐದು ಬಾರಿ ರನ್ನರ್ ಅಪ್ ಆಗಿರುವ ತಂಡ.

ಎರಡು ವರ್ಷ ನಿಷೇಧದಿಂದ ಟೂರ್ನಿಯಲ್ಲಿ ಆಡಿರಲಿಲ್ಲ.

csk team ipl 2020 saakshatvಅದನ್ನು ಬಿಟ್ರೆ ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತವಾದ ಪ್ರದರ್ಶನವನ್ನೇ ನೀಡಿದೆ.

ಆದ್ರೆ 13ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ.

ಸಾಲು ಸಾಲು ಸೋಲುಗಳಿಂದ ಇದೀಗ ಟೂರ್ನಿಯಿಂದಲೇ ಬಹುತೇಕ ಹೊರಬಿದ್ದಿದೆ.

ಹಾಗಾದ್ರೆ ಚೆನ್ನೈ ಸೂಪರ್ ಕಿಂಗ್ಸ್ ಎಡವಿದ್ದು ಎಲ್ಲಿ ?

ಚೆನ್ನೈ ಸೂಪರ್ ಕಿಂಗ್ಸ್ 2020ರ ಐಪಿಎಲ್ ಟೂರ್ನಿಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿತ್ತು.

ಆದ್ರೆ ಆರಂಭದಲ್ಲೇ ತಂಡದಲ್ಲಿ ಬಿರುಕು ಮೂಡಿತ್ತು. ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ ಟೂರ್ನಿ ಆರಂಭಕ್ಕೆ ಮುನ್ನವೇ ತಂಡದಿಂದ ಹೊರನಡೆದಿದ್ದರು.

ರೈನಾ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಮೊದಲ ಆಘಾತವಾಗಿತ್ತು.

ಈ ನಡುವೆ ಸ್ಟಾರ್ ಬೌಲರ್ ಹರ್ಭಜನ್ ಸಿಂಗ್ ಕೂಡ ಟೂರ್ನಿಯಲ್ಲಿ ಆಡುವುದಿಲ್ಲ ಎಂದು ಹೇಳಿದ್ರು.

ಹೀಗೆ ಆರಂಭದಲ್ಲೇ ಆಘಾತ ಅನುಭವಿಸಿದ್ದ ಸಿಎಸ್ ಕೆ ತಂಡಕ್ಕೆ ಮತ್ತೆ ಕಾಡಿದ್ದು ಕೊರೋನಾ ಸೋಂಕು.

ರೈನಾ ಮತ್ತು ಭಜ್ಜಿ ಅನುಪಸ್ಥಿತಿಯ ಮಧ್ಯೆ ಸಿಎಸ್‍ಕೆ ತಂಡದ ಇಬ್ಬರು ಆಟಗಾರರು ಸೇರಿ ಒಟ್ಟು 13 ಮಂದಿಗೆ ಕೊರೋನಾ ಸೋಂಕು ಆವರಿಸಿಕೊಂಡಿತ್ತು.

dhoni ipl 2020 csk saakshatvಹೀಗಾಗಿ ತಂಡಕ್ಕೆ ಸರಿಯಾದ ಅಭ್ಯಾಸ ಸಿಗಲಿಲ್ಲ. ಆಟಗಾರರು ಆತಂಕ, ಒತ್ತಡಕ್ಕೆ ಸಿಲುಕಿದ್ರು.

ಉದ್ಘಾಟನಾ ಪಂದ್ಯದಲ್ಲಿ ಗೆಲುವು ದಾಖಲಿಸಿದ್ರೂ ಅದೇ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಹೋಗಲು ಸಿಎಸ್ ಕೆ ತಂಡಕ್ಕೆ ಸಾಧ್ಯವಾಗಲಿಲ್ಲ.

ಇನ್ನು ಹಿರಿಯ ಆಟಗಾರರಿಗೆ ಮಣೆ ಹಾಕಿರುವ ಸಿಎಸ್‍ಕೆ ಮ್ಯಾನೇಜ್ ಮೆಂಟ್ ಕಿರಿಯ ಆಟಗಾರರನ್ನು ಕಡೆಗಣಿಸಿತ್ತು.

ಶೇನ್ ವಾಟ್ಸನ್, ಡ್ವೇನ್ ಬ್ರೇವೋ, ಕೇದಾರ್ ಜಾಧವ್, ಅಂಬಟಿ ರಾಯುಡು, ಡು ಪ್ಲೇಸಸ್ ನಂತಹ

ಹಿರಿಯ ಆಟಗಾರರನ್ನು ಸಿಎಸ್‍ಕೆ ತಂಡ ಹೆಚ್ಚು ಅವಲಂಬಿತವಾಗಿತ್ತು.

ಏತನ್ಮಧ್ಯೆ ಮಹೇಂದ್ರ ಸಿಂಗ್ ಧೋನಿಯವರ ಫಾರ್ಮ್ ಕೂಡ ಕೈಕೊಟ್ಟಿತ್ತು.

ಧೋನಿಯ ಲೆಕ್ಕಚಾರದ ಆಟಕ್ಕೆ ಸಿಎಸ್‍ಕೆ ಆಟಗಾರರು ಸರಿಯಾದ ಸಾಥ್ ನೀಡಲಿಲ್ಲ.

ಮತ್ತೊಂದೆಡೆ ಸಿಎಸ್ ಕೆ ತಂಡ ಯುವ ದೇಸಿ ಆಟಗಾರರ ಬಗ್ಗೆ ಹೆಚ್ಚು ನಂಬಿಕೆಯನ್ನೂ ಇಟ್ಟುಕೊಂಡಿರಲಿಲ್ಲ.

ಸ್ಫೋಟಕ ಬ್ಯಾಟ್ಸ್ ಮೆನ್ ಗಳ ಕೊರತೆ ಎದ್ದು ಕಾಣುತ್ತಿತ್ತು.

ಅಷ್ಟೇ ಅಲ್ಲ, ಧೋನಿ ಕೂಡ ಯುವ ಆಟಗಾರರ ಬಗ್ಗೆ ಹೆಚ್ಚಿನ ಒಲವು ತೋರಿಸಲಿಲ್ಲ.

ಕೇವಲ ಹಿರಿಯ ಆಟಗಾರರ ಮೇಲೆ ನಂಬಿಕೆ ಇಟ್ಟು ಕೊಂಡಿದ್ದರು. ಹೀಗಾಗಿ ಧೋನಿಯ ಗೇಮ್ ಪ್ಲಾನ್ ಗಳು ಎಲ್ಲವೂ ಉಲ್ಟಾಪಲ್ಟಾವಾದವು.

ಇದೀಗ ಧೋನಿ ತಂಡದ ಪ್ರದರ್ಶನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಯುವ ಆಟಗಾರರ ಮೇಲೆ ಕಿಡಿ ಕಾರಿದ್ದಾರೆ.

ಆದ್ರೆ ಧೋನಿ ಮಾಡಿರುವ ತಪ್ಪುಗಳನ್ನು ಯಾವುದು ಲೆಕ್ಕಕ್ಕೆ ಬರುವುದಿಲ್ಲ.

ಸಿಎಸ್‍ಕೆ ತಂಡದ ಪ್ರತಿಯೊಂದು ನಿರ್ಧಾರಗಳು ಧೋನಿಯ ಅಣತಿಯಂತೆ ನಡೆಯುತ್ತದೆ.

ಆಟಗಾರರ ಬಿಡ್ಡಿಂಗ್, ಖರೀದಿ ಎಲ್ಲವೂ ಧೋನಿ ತೀರ್ಮಾನದಂತೆ ನಡೆಯುತ್ತದೆ ಎಂಬುದು ಗೊತ್ತಿಲ್ಲದ ವಿಚಾರವಲ್ಲ.

mahendra singh dhoni csk ipl 2020 saakshatvಆದ್ರೆ ಧೋನಿ ಯುವ ಆಟಗಾರರಿಗೆ ಅವಕಾಶ ನೀಡುವುದನ್ನು ಮರೆತೆ ಬಿಟ್ಟಿದ್ದಾರೆ.

ಯುವ ಆಟಗಾರರು ಲೆಕ್ಕಕ್ಕೆ ಇಲ್ಲ ಎಂಬ ಅವರ ಧೋರಣೆಯೇ ಸಿಎಸ್‍ಕೆ ತಂಡಕ್ಕೆ ಮುಳುವುವಾಗಿಬಿಟ್ಟಿದೆ.

ಇನ್ನು ಸುರೇಶ್ ರೈನಾ ವಿಚಾರದಲ್ಲಿ ಸಿಎಸ್ ಕೆ ಬಾಸ್ ಎನ್. ಶ್ರೀನಿವಾಸನ್ ಟೀಕೆ ಮಾಡಿದ್ದರು.

ಇದು ಕೂಡ ಧೋನಿ ಮತ್ತು ತಂಡದ ಮೇಲೆ ಗಾಢವಾದ ಪರಿಣಾಮ ಬೀರಿದೆ.

ಅಷ್ಟೇ ಅಲ್ಲ, ಸಿಎಸ್ ಕೆ ಆಟಗಾರರು ಈ ಹಿಂದಿನ ಐಪಿಎಲ್ ಗೆ ಹೋಲಿಕೆ ಮಾಡಿದ್ರೆ ಈ ಬಾರಿ ತುಂಬಾನೇ ಮಂಕಾಗಿದ್ರು.

ಧೋನಿ ಸೇರಿದಂತೆ ಆಟಗಾರರು ಕೂಡ ಅಷ್ಟೊಂದು ಉಲ್ಲಾಸದಿಂದ ಆಡುತ್ತಿಲ್ಲ.

ಒಟ್ಟಿನಲ್ಲಿ ಹಿರಿಯ ಆಟಗಾರರನ್ನು ಮತ್ತು ಆಪ್ತರನ್ನು ಹೆಚ್ಚು ನೆಚ್ಚಿಕೊಂಡ ಧೋನಿ ಈಗ ಕೈಸುಟ್ಟುಕೊಂಡಿದ್ದಾರೆ.

ಯುವ ಆಟಗಾರರಿಗೆ ಮಣೆ ಹಾಕುತ್ತಿದ್ರೆ ಚೆನ್ನೈ ಸೂಪರ್ ಕಿಂಗ್ಸ್

ಈ ಬಾರಿಯ ಐಪಿಎಲ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿತ್ತು ಅನ್ನೋದು ಕ್ರಿಕೆಟ್ ಪಂಡಿತರ ಅಭಿಪ್ರಾಯವಾಗಿದೆ.

Tags: #Ambati Rayudu#Faf du Plessis#saakshatv#shene watsonchennai super kingsDHONIharbhajan singhIPLIPL 2020kedhar jadhavm.sMahendra Singh Dhonipiyush chawlarahul chaharravindra jadejaSuresh Rainauae ipl 2020
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram