ADVERTISEMENT
Tuesday, July 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಕಿಂಗ್ಸ್ ಇಲೆವೆನ್ ಪಂಜಾಬ್‍ಗೆ ಶಾಕ್ ನೀಡಿದ ಸಿಎಸ್ ಕೆ

admin by admin
November 2, 2020
in IPL 2020, Newsbeat, ಕ್ರೀಡೆ
csk m.s. dhoni saakshatv ipl 2020
Share on FacebookShare on TwitterShare on WhatsappShare on Telegram

ಐಪಿಎಲ್ 2020- ಕಿಂಗ್ಸ್ ಇಲೆವೆನ್ ಪಂಜಾಬ್‍ಗೆ ಶಾಕ್ ನೀಡಿದ ಸಿಎಸ್ ಕೆ

ruthuraj gayakwad csk ipl 2020 saakshatvಐಪಿಎಲ್ ಟೂರ್ನಿಯ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಆಘಾತ ನೀಡಿದೆ.
ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಸಿಎಸ್ ಕೆ ತಂಡ 9 ವಿಕೆಟ್ ಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪರಾಭವಗೊಳಿಸಿತ್ತು.
ಈ ಮೂಲಕ ಕಿಂಗ್ಸ್ ಇಲೆವೆನ್ ತಂಡದ ಪ್ಲೇ ಆಫ್ ಕನಸು ಭಗ್ನಗೊಂಡಿದೆ. ಟೂರ್ನಿಯ ಕೊನೆಯ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸಿಎಸ್ ಕೆ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿತ್ತು.
ಟಾಸ್ ಗೆದ್ದ ಸಿಎಸ್ ಕೆ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕ ಕಿಂಗ್ಸ್ ಇಲೆವೆನ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು.
ಮಯಾಂಕ್ ಅಗರ್ ವಾಲ್ ಮತ್ತು ಕೆ.ಎಲ್. ರಾಹುಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ನಡೆಸಿದ್ರು.
ಆದ್ರೆ ಇವರಿಬ್ಬರ ಆರ್ಭಟ ಹೆಚ್ಚು ಸಮಯ ಉಳಿಯಲಿಲ್ಲ. ಮಯಾಂಕ್ ಅಗರ್ ವಾಲ್ 15 ಎಸೆತಗಳಲ್ಲಿ ಐದು ಬೌಂಡರಿಗಳ ಮೂಲಕ 26 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.
ನಂತರ ರಾಹುಲ್ ಕೂಡ 29 ರನ್ ಗೆ ತನ್ನ ಹೋರಾಟವನ್ನು ಮುಗಿಸಿದ್ರು.
ಈ ಹಂತದಲ್ಲಿ ಚೆನ್ನೈ ಬೌಲರ್ ಗಳು ಮೇಲುಗೈ ಸಾಧಿಸಿದ್ರು. ನಿಕೊಲಾಸ್ ಪೂರನ್ 2 ರನ್ ಗೆ ಸೀಮಿತವಾದ್ರು.
ಹಾಗೇ ಅಪಾಯಕಾರಿ ಕ್ರಿಸ್ ಗೇಲ್ ರನ್ ಗಳಿಸಲು ಪರದಾಟ ನಡೆಸಿದ್ರು. 19 ಎಸೆತಗಳಲ್ಲಿ ಗೇಲ್ ಗಳಿಸಿದ್ದು ಕೇವಲ 12 ರನ್.
ಇನ್ನು ಮನ್ ದೀಪ್ ಸಿಂಗ್ 14 ರನ್ ಗಳಿಸಿದ್ರು. ಹಾಗೇ ಜೇಮ್ಸ್ ನಿಶಾಮ್ 2 ರನ್ ಮತ್ತು ಕ್ರಿಸ್ ಜೋರ್ಡಾನ್ ಅಜೇಯ 4 ರನ್ ಗಳಿಸಿದ್ರು.
ಮತ್ತೊಂದೆಡೆ ದೀಪಕ್ ಹೂಡಾ ಏಕಾಂಗಿ ಹೋರಾಟ ನಡೆಸಿದ್ರು. ಬಿರುಸಿನ ಆಟವನ್ನಾಡಿದ್ದ ದೀಪಕ್ ಹೂಡಾ ಅವರು 30 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳ ಸಹಾಯದಿಂದ ಅಜೇಯ 62 ರನ್ ಸಿಡಿಸಿದ್ರು.
kings 11 punjab ipl 2020 saakshatvಅಂತಿಮವಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 6 ವಿಕೆಟ್ ನಷ್ಟಕ್ಕೆ 153 ರನ್ ದಾಖಲಿಸಿತ್ತು.
ಸಿಎಸ್ ಕೆ ತಂಡದ ಪರ ಲುಂಗಿ ಎನ್‍ಗಿಡಿ ಮೂರು ವಿಕೆಟ್ ಕಬಳಿಸಿ ಕಿಂಗ್ಸ್ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿದ್ರು.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸವಾಲಿಗೆ ಸಿಎಸ್ ಕೆ ದಿಟ್ಟ ಉತ್ತರವನ್ನೇ ನೀಡಿತ್ತು.
ಮೊದಲ ವಿಕೆಟ್ ಗೆ ಋತುರಾಜ್ ಗಾಯಕ್ವಾಡ್ ಮತ್ತು ಫಾಪ್ ಡು ಪ್ಲೇಸಸ್ ಅವರು 82 ರನ್ ಕಲೆ ಹಾಕಿದ್ರು.
ಈ ಹಂತದಲ್ಲಿ 34 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ ಅಜೇಯ 48 ರನ್ ಗಳಿಸಿದ್ರು.
ಇನ್ನೊಂದೆಡೆ ಋತುರಾಜ್ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡ್ರು. ಟೀಕೆ ಮಾಡಿದವರಿಗೆ ತಕ್ಕ ಉತ್ತರವನ್ನೂ ನೀಡಿದ್ರು.
ಅಲ್ಲದೆ ಟೂರ್ನಿಯಲ್ಲಿ ಸತತ ಮೂರು ಅರ್ಧಶತಕ ದಾಖಲಿಸಿ ಮಿಂಚು ಹರಿಸಿದ್ರು. ಗಾಯಕ್ವಾಡ್ 49 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಒಂದು ಸಿಕ್ಸರ್ ನ ನೆರವಿನಿಂದ ಅಜೇಯ 62 ರನ್ ಸಿಡಿಸಿದ್ರು.
ಇನ್ನೊಂದೆಡೆ ಅಂಬಟಿ ರಾಯುಡು ಅಜೇಯ 30 ರನ್ ಗಳಿಸಿದ್ರು. ಕೊನೆಗೂ ಟೂರ್ನಿಯ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 1 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು.
ಅಮೋಘ ಆಟವನ್ನಾಡಿದ್ದ ಸಿಎಸ್ ಕೆ ತಂಡದ ಆರಂಭಿಕ ಋತುರಾಜ್ ಗಾಯಕ್ವಾಡ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Related posts

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

July 15, 2025
6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

July 15, 2025
Tags: #Ambati Rayudu#Chris Gayle#Ruturaj Gaikwad#saakshatvchennai super kingsIPL 2020k l rahulKings XI PunjabM.S DhoniMayank Agarwal
ShareTweetSendShare
Join us on:

Related Posts

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

by Shwetha
July 15, 2025
0

SBI SCO Recruitment 2025 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ಅತಿ ದೊಡ್ಡ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಆಗಿದ್ದು, ತಾಂತ್ರಿಕತೆಯ ಬೆಳವಣಿಗೆಯೊಂದಿಗೆ ತನ್ನ...

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

by Shwetha
July 15, 2025
0

ಶರಾವತಿ ಹಿನ್ನೀರಿನ ಜನರ ಪಿಡುಗಿನ ಕಥೆಗೆ ಕೊನೆಗೂ ಮುಕ್ತಿ ಸಿಕ್ಕಿದೆ! ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ – ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಅಧಿಕೃತವಾಗಿ ಲೋಕಾರ್ಪಣೆಯಾಗಿದೆ. ಕೇಂದ್ರ...

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

by Shwetha
July 15, 2025
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಶಕ್ತಿ ಯೋಜನೆ' ಈಗ ಹೊಸ ಮೈಲಿಗಲ್ಲು ತಲುಪಿದೆ. ಉಚಿತ ಬಸ್ ಪ್ರಯಾಣ ಯೋಜನೆಯಡಿಯಲ್ಲಿ ಮಹಿಳೆಯರಿಗೆ ವಿತರಿಸಲಾಗಿರುವ ಉಚಿತ ಟಿಕೆಟ್‌ಗಳ ಸಂಖ್ಯೆ 500...

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

by Shwetha
July 15, 2025
0

ಯೆಮನ್‌ನಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ಭಾರತ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಆದರೆ, ಯೆಮನ್‌ನ ಪರಿಸ್ಥಿತಿ...

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

by Shwetha
July 15, 2025
0

ನಂದಿನಿ ಉಳಿಸಿ, ನಂದಿನಿ ಬೆಳೆಸಿ, ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸಿ ಎಂಬ ಧ್ಯೇಯ ಮುಂದಿಟ್ಟುಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಬಮುಲ್)ದ ಅಧ್ಯಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram