ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಬೇಕೇ ಬೇಕು… ಸುರೇಶ್ ರೈನಾ…ಬೇಕು.. ಸಾಮಾಜಿಕ ಜಾಲ ತಾಣದಲ್ಲಿ ಸಿಎಸ್‍ಕೆ ಅಭಿಮಾನಿಗಳ ಡಿಮ್ಯಾಂಡ್..!

admin by admin
September 26, 2020
in IPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಬೇಕೇ ಬೇಕು… ಸುರೇಶ್ ರೈನಾ…ಬೇಕು.. ಸಾಮಾಜಿಕ ಜಾಲ ತಾಣದಲ್ಲಿ ಸಿಎಸ್‍ಕೆ ಅಭಿಮಾನಿಗಳ ಡಿಮ್ಯಾಂಡ್..!

ಚೆನ್ನೈ ಸೂಪರ್ ಕಿಂಗ್ಸ್ ತಂಡ 2020ರ ಐಪಿಎಲ್ ಟೂರ್ನಿಯಲ್ಲಿ ಅಭಿಮಾನಿಗಳನ್ನು ನಿರಾಸೆಗೊಳಿಸುತ್ತಿದೆ. ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಧೋನಿ ಪಡೆ ಈಗ ಒತ್ತಡಕ್ಕೆ ಸಿಲುಕಿದೆ. ದಿಟ್ಟ ನಿರ್ಧಾರದೊಂದಿಗೆ ಗ್ಯಾಂಬ್ಲಿಂಗ್ ಮಾಡುತ್ತಾ ತಂಡವನ್ನು ಗೆಲುವಿನ ದಡ ಸೇರಿಸುತ್ತಿದ್ದ ಧೋನಿಯ ಗೇಮ್ ಪ್ಲಾನ್ ಗಳು ವರ್ಕ್ ಔಟ್ ಆಗುತ್ತಿಲ್ಲ
ಮುಖ್ಯವಾಗಿ ಸಿಎಸ್ ಕೆ ತಂಡ ಉತ್ತಮ ಆರಂಭ ಪಡೆದುಕೊಳ್ಳುತ್ತಿಲ್ಲ. ಹಾಗೇ ಮೂರನೇ ಕ್ರಮಾಂಕದ ಬ್ಯಾಟ್ಸ್ ಮೆನ್ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಹೊಸ ಅಭಿಯಾನವನ್ನು ಶುರು ಮಾಡಿಕೊಂಡಿದ್ದಾರೆ.
ಸಿಎಸ್‍ಕೆ ತಂಡದ ಚಿನ್ನ ತಲಾ ಸುರೇಶ್ ರೈನಾ ಮತ್ತೆ ತಂಡವನ್ನು ಸೇರಿಕೊಳ್ಳಬೇಕು ಎಂದು ಸಿಎಸ್‍ಕೆ ಅಭಿಮಾನಿಗಳು ಕೇಳಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಅಭಿಯಾನವನ್ನು ಶುರು ಮಾಡಿಕೊಂಡಿರುವ ಸಿಎಸ್ ಕೆ ಅಭಿಮಾನಿಗಳು ಸುರೇಶ್ ರೈನಾ ತಂಡವನ್ನು ಸೇರಿಕೊಳ್ಳಬೇಕು. ಮೂರನೇ ಕ್ರಮಾಂಕದ ಕೊರತೆಯನ್ನು ನಿವಾರಿಸಬೇಕು ಅನ್ನೋ ಬೇಡಿಕೆಯನ್ನು ಮುಂದಿಟ್ಟುಕೊಂಡಿದ್ದಾರೆ.
ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಂದ ಟೂರ್ನಿಯಿಂದ ಹೊರನಡೆದಿದ್ದರು. ತನ್ನ ಕುಟುಂಬದ ಮೇಲೆ ನಡೆದ ಭೀಕರ ಹತ್ಯೆಯ ಕಾರಣದಿಂದಾಗಿ ಸುರೇಶ್ ರೈನಾ ದುಬೈನಿಂದ ತವರಿಗೆ ಆಗಮಿಸಿದ್ದರು. ಸುರೇಶ್ ರೈನಾ ತಂಡದಿಂದ ನಿರ್ಗಮಿಸುತ್ತಿದ್ದಂತೆ ಸಿಎಸ್‍ಕೆ ತಂಡದ ಮಾಲೀಕ ಎನ್. ಶ್ರೀನಿವಾಸನ್ ರೈನಾ ವಿರುದ್ಧ ಕಿಡಿ ಕಾರಿದ್ದರು. ಕೇದಾರ್ ಜಾಧವ್ ಕೂಡ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದರು. ಆದ್ರೆ ಈ ಬಗ್ಗೆ ನಾಯಕ ಮಹೇಂದ್ರ ಸಿಂಗ್ ಧೋನಿ ಯಾವುದೇ ಹೇಳಿಕೆಗಳನ್ನು ನೀಡಿಲ್ಲ.
ಈ ನಡುವೆ, ಸುರೇಶ್ ರೈನಾ ಮತ್ತೆ ತಂಡವನ್ನು ಸೇರಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ರೂ ಸಿಎಸ್‍ಕೆ ಮ್ಯಾನೇಜ್ ಮೆಂಟ್ ಯಾವುದೇ ಉತ್ತರವನ್ನು ಹೇಳಿಲ್ಲ. ಇದೀಗ ರೈನಾ ಅವರ ಅನುಪಸ್ಥಿತಿ ಸಿಎಸ್‍ಕೆ ತಂಡದ ಮೇಲೆ ಗಾಢವಾದ ಪರಿಣಾಮ ಬೀರುತ್ತಿದೆ.
ಸಿಎಸ್‍ಕೆ ತಂಡ ಉತ್ತಮ ಆರಂಭವನ್ನು ಪಡೆಯಲು ವಿಫಲವಾದಾಗ ಸುರೇಶ್ ರೈನಾ ಮೂರನೇ ಕ್ರಮಾಂಕದಲ್ಲಿ ಜವಾಬ್ದಾರಿಯುತವಾಗಿ ತಂಡಕ್ಕೆ ಆಧಾರವಾಗುತ್ತಿದ್ದರು. ಹೀಗಾಗಿ ಕೊನೆಯ ಕ್ಷಣಗಳಲ್ಲಿ ಸವಾಲು ಎಷ್ಟೇ ದೊಡ್ಡದಾಗಿರಲಿ, ಧೋನಿಗೆ ಯಾವುದೇ ಒತ್ತಡಗಳು ಇಲ್ಲದೇ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗುತ್ತಿತ್ತು.
ಆದ್ರೆ ಸದ್ಯದ ಪರಿಸ್ಥಿತಿಯಲ್ಲಿ ಸಿಎಸ್‍ಕೆ ತಂಡ ಉತ್ತಮ ಆರಂಭವನ್ನು ಪಡೆಯುತ್ತಿಲ್ಲ. ಮೂರನೇ ಕ್ರಮಾಂಕ ಹಾಗೂ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳಿಂದಲೂ ನಿರೀಕ್ಷಿತ ಆಟ ಹೊರಬರುತ್ತಿಲ್ಲ. ಹೀಗಾಗಿ ಧೋನಿ ಒತ್ತಡಕ್ಕೆ ಸಿಲುಕಿದ್ದಾರೆ. ಧೋನಿಗೂ ಸುರೇಶ್ ರೈನಾ ಅವರ ಅನುಪಸ್ಥಿತಿ ಕಾಡುತ್ತಿದೆ ಎಂಬುದು ಮನವರಿಕೆಯಾಗಿದೆ.
ಅದೇ ರೀತಿ ಬೌಲಿಂಗ್ ನಲ್ಲೂ ಜಾದು ಮಾಡುವ ರೈನಾ ಫೀಲ್ಡಿಂಗ್ ನಲ್ಲೂ ರನ್ ವೇಗಕ್ಕೆ ಕಡಿವಾಣ ಹಾಕುತ್ತಿದ್ದರು. ಒಟ್ಟಾರೆಯಾಗಿ ಧೋನಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಎಸ್ ಕೆ ತಂಡದ ಆಟಗಾರರು ಆಟದ ಎಲ್ಲಾ ವಿಭಾಗದಲ್ಲೂ ನಿರಾಸೆ ಮೂಡಿಸುತ್ತಿದ್ದಾರೆ.
ಸುರೇಶ್ ರೈನಾ ಐಪಿಎಲ್ ನಲ್ಲಿ ಅದ್ಭುತವಾದ ಪ್ರದರ್ಶನವನ್ನೇ ನೀಡಿದ್ದಾರೆ. ಗರಿಷ್ಠ ಪಂದ್ಯವನ್ನಾಡಿರುವ ದಾಖಲೆ ಒಂದು ಕಡೆಯಾದ್ರೆ, ಗರಿಷ್ಠ ರನ್ ಪೇರಿಸಿದವರ ಸಾಲಿನಲ್ಲೂ ಮುಂಚೂಣಿಯಲ್ಲಿದ್ದಾರೆ. ಅದೇ ರೀತಿ ಗರಿಷ್ಠ ಸಿಕ್ಸರ್ ಸಿಡಿಸಿದ್ದ ದಾಖಲೆಯ ಪಟ್ಟಿಯಲ್ಲೂ ನಾಲ್ಕನೇ ಸ್ಥಾನದಲ್ಲಿದ್ದಾರೆ.

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
Tags: #IPL 2020 newschennai super kingscskIPL 2020Mahendra Singh DhoniSuresh RainaUAEuae ipl 2020
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram