ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಸಿಎಸ್ ಕೆ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ನೀಡಿದ ಸಾಕ್ಷಿ ಸಿಂಗ್ ಧೋನಿ

Sanath Rai by Sanath Rai
October 27, 2020
in IPL 2020, Newsbeat, ಕ್ರೀಡೆ
saakshisingh dhoni csk ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಸಿಎಸ್ ಕೆ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ನೀಡಿದ ಸಾಕ್ಷಿ ಸಿಂಗ್ ಧೋನಿ

ms dhoni csk ipl 2020 saakshatvಇದು ಒಂದು ರೀತಿಯ ಆಟ..
ಕೆಲವೊಂದು ಬಾರಿ ಗೆಲುವು…ಕೆಲವೊಂದು ಬಾರಿ ಸೋಲು..
ಹಲವು ವರ್ಷಗಳಿಂದ ರೋಚಕ ಗೆಲುವು ಸಿಕ್ಕಿದೆ…
ಹಾಗೇ ಕೆಲವೊಂದು ಸೋಲುಗಳನ್ನು ಅನುಭವಿಸಬೇಕಾಗುತ್ತದೆ.
ಗೆಲುವನ್ನು ನಾವು ಸಂಭ್ರಮಿಸುತ್ತೇವೆ. ಹಾಗೇ ಎದುರಾಳಿ ತಂಡಗಳ ಹೃದಯವೂ ಛಿದ್ರಗೊಳ್ಳುತ್ತದೆ.
ಕೆಲವು ಗೆಲುವು.. ಕೆಲವು ಸೋಲು.. ಹಾಗೇ ಅವಕಾಶಗಳನ್ನು ಕಳೆದುಕೊಳ್ಳುತ್ತೇವೆ.
ಯಾಕಂದ್ರೆ ಇದು ಒಂದು ಆಟ ಅಷ್ಟೇ..
ನಿಜವಾದ ಸೇನಾನಿಗಳು ಗೆಲುವಿಗಾಗಿ ಹೋರಾಡುತ್ತಾರೆ..
ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೇ ಉಳಿದಿದೆ..
ಹೀಗೆ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಿಂಗ್ ಧೋನಿ ಅವರು ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದಾರೆ.
ಹೌದು, ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಅಭಿಮಾನ ಎಂತಹುದ್ದು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ.
saakshi singh letter csk fans ipl 2020 saakshatvಆದ್ರೆ ಈ ಬಾರಿಯ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನೀರಸ ಪ್ರದರ್ಶನ ನೀಡಿದೆ. ಹೀಗಾಗಿ ಅಭಿಮಾನಿಗಳು ಬೇಸರಗೊಂಡಿದ್ದಾರೆ.
ಆದ್ರೆ ಅಭಿಮಾನಿಗಳ ಬೇಸರವನ್ನು ಅರಿತುಕೊಂಡಿರುವ ಸಾಕ್ಷಿ ಸಿಂಗ್ ಧೋನಿ ಅಭಿಮಾನಿಗಳನ್ನು ಸಮಧಾನಪಡಿಸಲು ಮುಂದಾಗಿದ್ದಾರೆ.
ಆಟದಲ್ಲಿ ಸೋಲು ಗೆಲುವು ಇದ್ದದ್ದೇ. ಅದನ್ನು ಅರಿತುಕೊಂಡು ಮುಂದಿನ ದಿನಗಳಲ್ಲಿ ಗೆಲುವು ಸಾಧಿಸಬೇಕು.
ಕಳೆದ 10 ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮಾಡಿರುವ ಸಾಧನೆಯನ್ನು ಮರೆಯಬಾರದು. ಈ ಬಾರಿ ಸೋತಿರಬಹುದು. ಆದ್ರೆ ಮುಂದಿನ ಬಾರಿ ಮತ್ತೆ ಫಿನಿಕ್ಸ್ ನಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೇಲೆದ್ದು ಬರುತ್ತೆ ಅನ್ನೋದು ಸಾಕ್ಷಿ ಸಿಂಗ್ ಅವರ ಅಭಿಮತವಾಗಿದೆ.
ಅಂದ ಹಾಗೇ, ಈ ಬಾರಿಯ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ನಿಂದ ಹೊರಬಿದ್ದಿದೆ.
ಸದ್ಯ ಆಡಿರುವ 12 ಪಂದ್ಯಗಳಲ್ಲಿ ಎಂಟು ಪಂದ್ಯಗಳನ್ನು ಸೋತಿದೆ. ನಾಲ್ಕು ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಇನ್ನು ಐಪಿಎಲ್ ಆರಂಭವಾಗುವುದಕ್ಕಿಂತ ಮುನ್ನವೇ ತಂಡದಲ್ಲಿ ಸಾಕಷ್ಟು ಗೊಂದಲಗಳು ಮೂಡಿದ್ದವು.
ಆರಂಭದಲ್ಲೇ ಸುರೇಶ್ ರೈನಾ ತಂಡದಿಂದ ಹೊರನಡೆದಿರುವುದು ದೊಡ್ಡ ಪೆಟ್ಟು. ನಂತರ ಆಟಗಾರರು ಮತ್ತು ಸಿಬ್ಬಂದಿಗಳು ಕೋವಿಡ್ ಸೋಂಕಿನಿಂದ ಬಳಲಿದ್ದರು.
ಈ ನಡುವೆ ತಂಡದ ಮಾಲೀಕ ಎನ್. ಶ್ರೀನಿವಾಸನ್ ಅವರ ಹೇಳಿಕೆಗಳು ಕೂಡ ತಂಡದ ಮೇಲೆ ಸಾಕಷ್ಟು ಪರಿಣಾಮವನ್ನು ಬೀರಿತ್ತು. ಮತ್ತೊಂದೆಡೆ ಹರ್ಭಜನ್ ಸಿಂಗ್ ಕೂಡ ತಂಡವನ್ನು ಸೇರಿಕೊಳ್ಳಲಿಲ್ಲ.
ಈ ನಡುವೆ ಹಿರಿಯ ಆಟಗಾರರನ್ನು ಹೆಚ್ಚು ನಂಬಿಕೊಂಡಿದ್ದ ಸಿಎಸ್‍ಕೆ ತಂಡ ಯುವ ಆಟಗಾರರ ಕಡೆಗೆ ಹೆಚ್ಚಿನ ಗಮನವನ್ನೇ ಹರಿಸಲಿಲ್ಲ.
ಹಿರಿಯ ಆಟಗಾರರು ಕೂಡ ಸಮಯಕ್ಕೆ ಸರಿಯಾಗಿ ಆಡಲಿಲ್ಲ. ಅದು ಅಲ್ಲದೆ ನಾಯಕ ಮಹೇಂದ್ರ ಸಿಂಗ್ ಧೋನಿಯ ಬ್ಯಾಟಿಂಗ್ ಫಾರ್ಮ್ ಕೂಡ ಕೈಕೊಟ್ಟಿತ್ತು.
mahendra singh dhoni csk ipl 2020 saakshatvಸದ್ಯದ 12 ಪಂದ್ಯಗಳಲ್ಲಿ ಧೋನಿ ಗಳಿಸಿದ್ದು ಬರೀ 130 ರನ್ ಮಾತ್ರ.
ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೇ ಮೊದಲ ಬಾರಿ ಹೀನಾಯ ಪ್ರದರ್ಶನ ನೀಡಿದೆ. ಮೂರು ಬಾರಿ ಚಾಂಪಿಯನ್ ಹಾಗೂ ಐದು ಬಾರಿ ರನ್ನರ್ ಅಪ್ ಆಗಿರುವ ಚೆನ್ನೈ ಐಪಿಎಲ್ ನ ಬಲಿಷ್ಠ ತಂಡ ಅಂತನೇ ಬಿಂಬಿತವಾಗಿತ್ತು.
ಆದ್ರೆ ಎಲ್ಲದಕ್ಕೂ ಒಂದು ಸಮಯ ಅಂತ ಇರುತ್ತೆ. ಕಾಲಚಕ್ರಕ್ಕೆ ತಕ್ಕಂತೆ ನಾವು ಬದಲಾವಣೆಯಾಗಲೇಬೇಕು.
ಅದೇ ರೀತಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಈಗ ಬದಲಾವಣೆಯ ಪರ್ವ ಶುರುವಾಗಿದೆ. ಹೊಸ ತಂಡವನ್ನು ಕಟ್ಟಿ ಮತ್ತೆ ಐಪಿಎಲ್ ನಲ್ಲಿ ಕಳೆದುಹೋಗಿದ್ದ ಗೌರವ ಮತ್ತು ಪ್ರತಿಷ್ಠೆಯನ್ನು ಪಡೆದುಕೊಳ್ಳಬೇಕಿದೆ.
ಆದ್ರೆ ಮುಂದಿನ ವರ್ಷ ಧೋನಿ ಸಿಎಸ್‍ಕೆ ತಂಡದ ನಾಯಕನಾಗಿ ಮುಂದುವರಿಯುತ್ತಾರಾ ಅನ್ನೋ ಪ್ರಶ್ನೆಯೊಂದು ಕಾಡುತ್ತಿದೆ.
ಒಂದಂತೂ ಸತ್ಯ.. ಧೋನಿ ತಂಡದಲ್ಲಿ ಆಡಲಿ ಬಿಡಲಿ.. ಮುಂಬರುವ ದಿನಗಳಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರುತ್ತಾರೆ ಎಂಬುದು ಅಷ್ಟೇ ಸತ್ಯ. ಯಾಕಂದ್ರೆ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಥಾಲಾ..

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026
Tags: #saakshatvchennai super kingscskcsk fanscsk fans clubIPL 2020Mahendra Singh DhoniMrs DhoniSakshi DhoniSuresh Raina
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram