ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಮುಗಿದಿಲ್ಲ ಇನ್ನೂ ಸನ್ ರೈಸರ್ಸ್ ಹೋರಾಟ.. ಡೆಲ್ಲಿ ಕ್ಯಾಪಿಟಲ್ಸ್ ಗೆ ಸತತ ಮೂರನೇ ಸೋಲು

Sanath Rai by Sanath Rai
October 28, 2020
in IPL 2020, Newsbeat, ಕ್ರೀಡೆ
Wriddhiman Saha ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಮುಗಿದಿಲ್ಲ ಇನ್ನೂ ಸನ್ ರೈಸರ್ಸ್ ಹೋರಾಟ.. ಡೆಲ್ಲಿ ಕ್ಯಾಪಿಟಲ್ಸ್ ಗೆ ಸತತ ಮೂರನೇ ಸೋಲು

SunRisers Hyderabad  ipl 2020 saakshatvಸನ್ ರೈಸರ್ಸ್ ಹೈದ್ರಬಾದ್ ತಂಡದ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ.
ಐಪಿಎಲ್ ಟೂರ್ನಿಯ 47ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡ 88 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪರಾಭವಗೊಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿ ಒತ್ತಡಕ್ಕೆ ಸಿಲುಕಿದೆ.
ದುಬೈನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು.
ಆದ್ರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಲೆಕ್ಕಚಾರಗಳು ಆರಂಭದಲ್ಲೇ ಬುಡಮೇಲಾದವು.
ಆರಂಭಿಕ ಡೇವಿಡ್ ವಾರ್ನರ್ ಮತ್ತು ವೃದ್ದಿಮಾನ್ ಶಾಹ ಅವರು ಡೆಲ್ಲಿ ಬೌಲರ್ ಗಳಿಗೆ ಸವಾಲಾಗಿ ಪರಿಣಮಿಸಿದ್ರು.
ಟೂರ್ನಿಯಲ್ಲಿ ಮೊದಲ ಪಂದ್ಯವನ್ನಾಡಿದ್ದ ವೃದ್ದಿಮಾನ್ ಶಾಹ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ರು.
ಡೇವಿಡ್ ವಾರ್ನರ್ ಮತ್ತು ವೃದ್ದಿಮಾನ್ ಶಾಹ ಅವರು 9.4 ಓವರ್ ಗಳಲ್ಲಿ 107 ರನ್ ಗಳಿಸಿ ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದ್ರು.
ಈ ಹಂತದಲ್ಲಿ ಡೇವಿಡ್ ವಾರ್ನರ್ ಅವರು 34 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 66 ರನ್ ದಾಖಲಿಸಿದ್ರು.
ಇನ್ನೊಂದೆಡೆ ವೃದ್ದಿಮಾನ್ ಶಾಹ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ರು.
45 ಎಸೆತಗಳಲ್ಲಿ 12 ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ ವೃದ್ದಿಮಾನ್ ಶಾಹ ಅವರು ಆಕರ್ಷಕ 87 ರನ್ ಗಳಿಸಿದ್ರು.
ನಂತರ ಮನೀಷ್ ಪಾಂಡೆ ಅವರು 31 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ನ ನೆರವಿನಿಂದ ಅಜೇಯ 44 ರನ್ ಗಳಿಸಿದ್ರು.
rashid khan ipl 2020 saakshatvಹಾಗೇ ಕೇನ್ ವಿಲಿಯಮ್ಸನ್ ಅವರು ಅಜೇಯ 10 ರನ್ ದಾಖಲಿಸಿದ್ರು.
ಅಂತಿಮವಾಗಿ ಸನ್ ರೈಸರ್ಸ್ ಹೈದ್ರಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 219 ರನ್ ದಾಖಲಿಸಿತು.
ಗೆಲ್ಲಲು ಕಠಿಣ ಸವಾಲನ್ನು ಎದುರಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ಆಘಾತ ಅನುಭವಿಸಿತ್ತು.
ಡೆಲ್ಲಿ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್ ಡಕೌಟಾದ್ರು. ನಂತರ ಮಾರ್ಕೊಸ್ ಸ್ಟೋನಿಸ್ ಐದು ರನ್ ಗೆ ಸೀಮಿತವಾದ್ರು. ಶಿಮ್ರೋನ್ ಹೆಟ್ಮೇರ್ 16 ರನ್ ಗೆ ಹೋರಾಟ ಮುಗಿಸಿದ್ರು.
ಮತ್ತೊಂದೆಡೆ ಅಜ್ಯಂಕ್ಯಾ ರಹಾನೆ 26 ರನ್ ಗಳಿಸಿ ಔಟಾದ್ರು. ಶ್ರೇಯಸ್ ಅಯ್ಯರ್ ಆಟ 7 ರನ್ ಗೆ ಕೊನೆಗೊಂಡಿತ್ತು.
ಇನ್ನೊಂದೆಡೆ ರಿಷಬ್ ಪಂತ್ 36 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.
ಇನ್ನುಳಿದಂತೆ ಅಕ್ಷರ್ ಪಟೇಲ್ 1 ರನ್, ಕಾಗಿಸೊ ರಬಾಡ 3 ರನ್, ಆರ್ ಅಶ್ವಿನ್ 7 ರನ್ ಗಳಿಸಿದ್ರು. ತುಷಾರ್ ದೇಶಪಾಂಡೆ ಅಜೇಯ 20 ರನ್ ಸಿಡಿಸಿದ್ರು.
ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 19 ಓವರ್ ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಯ್ತು.
ಸನ್ ರೈಸರ್ಸ್ ಹೈದ್ರಬಾದ್ ತಂಡದ ಪರ ರಶೀದ್ ಖಾನ್ ಮೂರು ವಿಕೆಟ್ ಕಬಳಿಸಿ ಡೆಲ್ಲಿಗೆ ಕಂಟಕವಾಗಿ ಪರಿಣಮಿಸಿದ್ರು. ಸಂದೀಪ್ ಶರ್ಮಾ ಮತ್ತು ನಟರಾಜ್ ತಲಾ ಎರಡು ವಿಕೆಟ್ ಪಡೆದ್ರು.
ಮಿಂಚಿನ ಆಟವಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೃದ್ದಿಮಾನ್ ಶಾಹ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
Tags: #devid warner#rishab pant#saakshatv#shikhar dhavandelhi capitalsIPL 2020Manish PandeyRashid KhanSunRisers HyderabadThangarasu NatarajanWriddhiman Saha
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram