ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ರಾಜಸ್ತಾನ ರಾಯಲ್ಸ್ ಗೆ ತಲೆಬಾಗಿದ ಕಿಂಗ್ಸ್ ಇಲೆವೆನ್ ಪಂಜಾಬ್

Sanath Rai by Sanath Rai
October 31, 2020
in IPL 2020, Newsbeat, ಕ್ರೀಡೆ
kings 11 punjab rajasthan royals ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ರಾಜಸ್ತಾನ ರಾಯಲ್ಸ್ ಗೆ ತಲೆಬಾಗಿದ ಕಿಂಗ್ಸ್ ಇಲೆವೆನ್ ಪಂಜಾಬ್

chris gayle ipl 2020 saakshatvಐಪಿಎಲ್ ಟೂರ್ನಿಯ 50ನೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಏಳು ವಿಕೆಟ್ ಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಮಣಿಸಿತು.
ಗೆಲ್ಲಲೇಬೇಕಾದ ಪಂದ್ಯದಲ್ಲಿ ಉಭಯ ತಂಡಗಳು ಜಿದ್ದಾಜಿದ್ದಿನ ಆಟವನ್ನಾಡಿದ್ದವು. ಕಿಂಗ್ಸ್ ಪಂಜಾಬ್ ತಂಡದ ಕ್ರಿಸ್ ಗೇಲ್ ಮಿಂಚಿನ ಆಟ ರಾಜಸ್ತಾನ ರಾಯಲ್ಸ್ ತಂಡದ ಜೋಸ್ ಬಟ್ಲರ್ ಅವರ ಅಬ್ಬರದ ಆಟದ ಮುಂದೆ ಮಂಕಾಗಿ ಹೋಯ್ತು.
ಅಬುಧಾಬಿಯಲ್ಲಿ ಟಾಸ್ ಸೋತ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತ್ತು.
ಆದ್ರೆ ಆರಂಭದಲ್ಲೇ ಆರಂಭಿಕ ಮನ್ ದೀಪ್ ಸಿಂಗ್ ಡಕೌಟಾದ್ರು.
ಬಳಿಕ ಕೆ.ಎಲ್. ರಾಹುಲ್ ಅವರನ್ನು ಜೊತೆ ಸೇರಿಕೊಂಡ ಕ್ರಿಸ್ ಗೇಲ್ ಮಿಂಚಿನ ಆಟವನ್ನಾಡಿದ್ದರು.
ಎರಡನೇ ವಿಕೆಟ್ ಗೆ ರಾಹುಲ್ ಮತ್ತು ಗೇಲ್ 14.3 ಓವರ್ ಗಳಲ್ಲಿ 119 ರನ್ ಕೂಡ ಕಲೆ ಹಾಕಿದ್ದರು.
ಈ ಹಂತದಲ್ಲಿ ಕೆ.ಎಲ್. ರಾಹುಲ್ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 46 ರನ್ ದಾಖಲಿಸಿದ್ರು.
ben stockes ipl 2020 saakshatvನಂತರ ನಿಕೊಲಾಸ್ ಪೂರನ್ 10 ಎಸೆತಗಳಲ್ಲಿ ಮೂರು ಸಿಕ್ಸರ್ ಗಳ ಸಹಾಯದಿಂದ 22 ರನ್ ಗಳಿಸಿದ್ರು.
ಇನ್ನು ಸ್ಫೋಟಕ ಆಟವನ್ನಾಡಿದ್ದ ಕ್ರಿಸ್ ಗೇಲ್ 63 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎಂಟು ಸಿಕ್ಸರ್ ಗಳ ನೆರವನಿಂದ 99 ರನ್ ಸಿಡಿಸಿದ್ರು.
ಅಂತಿಮವಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು.
ಕಿಂಗ್ಸ್ ಪಂಜಾಬ್ ತಂಡದ ಸವಾಲಿಗೆ ರಾಜಸ್ತಾನ ರಾಯಲ್ಸ್ ದಿಟ್ಟ ಉತ್ತರವನ್ನೇ ನೀಡಿತ್ತು.
ಬೆನ್ ಸ್ಟೋಕ್ಸ್ 26 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ಆಕರ್ಷಕ 50 ರನ್ ಗಳಿಸಿದ್ರು. ಇನ್ನೊಂದೆಡೆ ರಾಬಿನ್ ಉತ್ತಪ್ಪ 23 ಎಸೆತಗಳಲ್ಲಿ 30 ರನ್ ದಾಖಲಿಸಿದ್ರು.
ಬಳಿಕ ಸಂಜು ಸಾಮ್ಸನ್ ಅವರು 25 ಎಸೆತಗಳಲ್ಲಿ 4 ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ 48 ರನ್ ಗಳಿಸಿ ರನೌಟಾದ್ರು.
ಏತನ್ಮಧ್ಯೆ ನಾಯಕ ಸ್ಟೀವನ್ ಸ್ಮಿತ್ ಮತ್ತು ಜೋಸ್ ಬಟ್ಲರ್ ಜವಾಬ್ದಾರಿಯುತವಾಗಿ ಬ್ಯಾಟ್ ಮಾಡಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು.
ಸ್ಟೀವನ್ ಸ್ಮಿತ್ ಅಜೇಯ 31 ರನ್ ಗಳಿಸಿದ್ರೆ, ಜೋಸ್ ಬಟ್ಲರ್ ಅಜೇಯ 22 ರನ್ ದಾಖಲಿಸಿದ್ರು. ರಾಜಸ್ತಾನ ರಾಯಲ್ಸ್ ತಂಡ 17.3 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 186 ರನ್ ದಾಖಲಿಸಿತು.
ಆಲ್ ರೌಂಡ್ ಆಟವನ್ನಾಡಿದ್ದ ಬೆನ್ ಸ್ಟೋಕ್ಸ್ ಅವರು ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.
ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋತ್ರೂ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಕಾಯ್ದುಕೊಂಡಿದೆ. ರಾಜಸ್ತಾನ ರಾಯಲ್ಸ್ ಐದನೇ ಸ್ಥಾನದಲ್ಲಿದೆ.
ಇದೀಗ ಉಭಯ ತಂಡಗಳಿಗೆ ಅಂತಿಮ ಪಂದ್ಯಗಳು ಹೆಚ್ಚು ಮಹತ್ವ ಪಡೆದುಕೊಂಡಿವೆ.

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026
Tags: #Chris Gayle#robin uttappa#saakshatv#Sanju Samsonben-stokesIPL 2020KL RahuLmohammad shamiSteven Smith
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram