ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಸನ್ ರೈಸರ್ಸ್ ಮುಂದೆ ಮಂಕಾದ ಧೋನಿ ಬಳಗ.. ಸಿಎಸ್ ಕೆ ತಂಡಕ್ಕೆ ಹ್ಯಾಟ್ರಿಕ್ ಸೋಲು..

admin by admin
October 8, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
ipl Priyan Garg’

Priyan Garg’

Share on FacebookShare on TwitterShare on WhatsappShare on Telegram

ಐಪಿಎಲ್ 2020- ಸನ್ ರೈಸರ್ಸ್ ಮುಂದೆ ಮಂಕಾದ ಧೋನಿ ಬಳಗ.. ಸಿಎಸ್ ಕೆ ತಂಡಕ್ಕೆ ಹ್ಯಾಟ್ರಿಕ್ ಸೋಲು..

mahendra singh dhoni ipl
mahendra singh dhoni

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಬಾರಿ ಯಾಕೋ ಅದೃಷ್ಟ ಕೈಕೊಟ್ಟಿದೆ. ಐಪಿಎಲ್ ಟೂರ್ನಿಯ 14ನೇ ಪಂದ್ಯದಲ್ಲಿ ಧೋನಿ ಪಡೆ ಹ್ಯಾಟ್ರಿಕ್ ಸೋಲು ಅನುಭವಿಸಿದೆ. ಸನ್ ರೈಸರ್ಸ್ ಹೈದ್ರಬಾದ್ ತಂಡದ ವಿರುದ್ಧ ಏಳು ರನ್ ಗಳಿಂದ ಸಿಎಸ್ ಕೆ ತಂಡ ಪರಾಭವಗೊಂಡಿದೆ. ಕೊನೆಯ ಓವರ್ ಗಳಲ್ಲಿ ನಾಯಕ ಹಾಗೂ ಮ್ಯಾಚ್ ವಿನ್ನರ್ ಧೋನಿ ಕ್ರೀಸ್ ನಲ್ಲಿದ್ರೂ ತಂಡಕ್ಕೆ ಗೆಲುವು ದಕ್ಕಲಿಲ್ಲ.
ಟಾಸ್ ಗೆದ್ದ ಸನ್ ರೈಸರ್ಸ್ ಹೈದ್ರಬಾದ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ಶಿಸ್ತು ಬದ್ಧ ಬೌಲಿಂಗ್ ದಾಳಿ ನಡೆಸಿದ್ದ ಸಿಎಸ್ ಕೆ ಬೌಲರ್ ಗಳು ವಾರ್ನರ್ ಬಳಗದ ಬ್ಯಾಟ್ಸ್ ಮೆನ್ ಗಳನ್ನು ಕಟ್ಟಿ ಹಾಕಲು ಯಶಸ್ವಿಯಾಗಿದ್ದರು. ಸ್ಫೋಟಕ ಬ್ಯಾಟ್ಸ್ ಮೆನ್ ಜೋನಿ ಬೇರ್ ಸ್ಟೋ ಶೂನ್ಯ ಸುತ್ತಿದ್ರು. ಹಾಗೇ ಮನೀಶ್ ಪಾಂಡೆ 21 ಎಸೆತಗಳಲ್ಲಿ ಐದು ಬೌಂಡರಿಗಳ ಸಹಾಯದಿಂದ 29 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದ್ರು. ಬಳಿಕ ಡೇವಿಡ್ ವಾರ್ನರ್ ಕೂಡ 28 ರನ್ ಗೆ ಸುಸ್ತಾದ್ರು. ಮಧ್ಯಮ ಕ್ರಮಾಂಕದ ಆಧಾರವಾಗಿದ್ದ ಕೇನ್ ವಿಲಿಯಮ್ಸ್ 9 ರನ್‍ಗೆ ಸೀಮಿತವಾದ್ರು.
ಈ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಸಿಎಸ್‍ಕೆ ತಂಡದ ಲೆಕ್ಕಚಾರಗಳನ್ನು ಬುಡಮೇಲು ಮಾಡಿದ್ದು ಪ್ರಿಯಮ್ ಗರ್ಗ್. 26 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಸಿಕ್ಸರ್ ನ ಸಹಾಯದಿಂದ ಆಕರ್ಷಕ 51 ರನ್ ದಾಖಲಿಸಿದ್ರು. ಹಾಗೇ ಅಭಿಷೇಕ್ ಶರ್ಮಾ 24 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು 1 ಸಿಕ್ಸರ್ ಸಿಡಿಸಿ ಆಕರ್ಷಕ 31 ರನ್ ಗಳಿಸಿದ್ರು. ಇನ್ನು ಅಬ್ದುಲ್ ಸಮಾದ್ ಅಜೇಯ 8 ರನ್ ಸಿಡಿಸಿದ್ರು. ಅಂತಿಮವಾಗಿ ಸನ್ ರೈಸರ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ದಾಖಲಿಸಿತು.
ಗೆಲ್ಲಲು 165 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲೇ ಪಂದ್ಯದ ಮೇಲೆ ಪ್ರಾಬಲ್ಯ ಸಾಧಿಸಲು ವಿಫಲವಾಯ್ತು. ಶೇನ್ ವಾಟ್ಸನ್ ಒಂದು ರನ್ ಗಳಿಸಿ ಭುವನೇಶ್ವರ್‍ಗೆ ವಿಕೆಟ್ ಒಪ್ಪಿಸಿದ್ರು. ಅಂಬಟಿ ರಾಯುಡು (8 ರನ್) ನಟರಾಜನ್‍ಗೆ ಕ್ಲೀನ್ ಬೌಲ್ಡಾದ್ರು. ಇನ್ನೊಂದೆಡೆ ಫಾಪ್ ಡುಪ್ಲೇಸಸ್ 22 ರನ್ ಗಳಿಸಿ ರನೌಟದ್ರು. ಕೇದಾರ್ ಜಾಧವ್ ಹೋರಾಟ ಮೂರು ರನ್ ಗೆ ಸೀಮಿತವಾಯ್ತು.
42ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಿಎಸ್ ಕೆ ತಂಡಕ್ಕೆ ಎಮ್.ಎಸ್. ಧೋನಿ ಮತ್ತು ರವೀಂದ್ರ ಜಡೇಜಾ ಆಧಾರವಾಗಿ ನಿಂತ್ರು. ಅಲ್ಲದೆ ಐದನೇ ವಿಕೆಟ್ ಗೆ 72 ರನ್ ಪೇರಿಸಿದ್ರು. ರವೀಂದ್ರ ಜಡೇಜಾ 35 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 50 ರನ್ ದಾಖಲಿಸಿದ್ರರು.
ಮತ್ತೊಂದೆಡೆ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಗೆಲುವಿನ ದಡ ಸೇರಿಸಲು ಸಾಕಷ್ಟು ಪ್ರಯತ್ನ ಪಟ್ಟರು. ಆದ್ರೆ ಕೊನೆಯ ಎರಡು ಓವರ್ ಗಳಲ್ಲಿ ಧೋನಿಗೆ ದೊಡ್ಡ ಹೊಡೆತ ಹೊಡೆಯಲು ಸಾಧ್ಯವಾಗಿಲ್ಲ. ಪರಿಣಾಮ ಧೋನಿ ಅಜೇಯ 47 ರನ್ ಗಳಿಸಿದ್ರೆ, ಸ್ಯಾಮ್ ಕುರನ್ ಅಜೇಯ 15 ರನ್ ದಾಖಲಿಸಿದ್ರು. ಕೊನೆಗೆ ಸಿಎಸ್ ಕೆ ತಂಡ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 157 ರನ್ ಗಳಿಸಿ ಏಳು ರನ್ ಗಳಿಂದ ಸೋಲು ಒಪ್ಪಿಕೊಂಡಿತ್ತು.
ಸನ್ ರೈಸರ್ಸ್ ತಂಡದ ಪರ ನಟರಾಜನ್ ಅವರು ಎರಡು ವಿಕೆಟ್ ಪಡೆದ್ರೆ, ಭುವನೇಶ್ವರ್, ಅಬ್ದುಲ್ ಸಮಾದ್ ತಲಾ ಒಂದು ವಿಕೆಟ್ ಪಡೆದ್ರು. ಅಜೇಯ ಅರ್ಧಶತಕ ಸಿಡಿಸಿದ್ದ ಪ್ರಿಯಮ್ ಗರ್ಗ್ ಪಂದ್ಯ ಶ್ರೇಷ್ಠರಾಗಿ ಹೊರಹೊಮ್ಮಿದ್ರು.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026
Tags: #devid warnerchennai super kingsCricketDubaiIPLIPL 2020Mahendra Singh DhoniManish PandeyPriyan Gargravindra jadejaSunRisers Hyderabad
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram