ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಇಶಾನ್ ಕಿಶಾನ್ ಬ್ಯಾಟಿಂಗ್ ಹಿಂದಿನ ಶಕ್ತಿ ಮಹೇಲಾ ಜಯವರ್ಧನೆ…!

saaksha tv by saaksha tv
April 8, 2021
in IPL 2021, Newsbeat, ಐಪಿಎಲ್ 2021
ishan kishan saakshatv mumbai indians
Share on FacebookShare on TwitterShare on WhatsappShare on Telegram

ಐಪಿಎಲ್ 2021- ಇಶಾನ್ ಕಿಶಾನ್ ಬ್ಯಾಟಿಂಗ್ ಹಿಂದಿನ ಶಕ್ತಿ ಮಹೇಲಾ ಜಯವರ್ಧನೆ…!

ishan kishan mumbai indians team india saakshatvಇಶಾನ್ ಕಿಶಾನ್. ಟೀಮ್ ಇಂಡಿಯಾದ ಭವಿಷ್ಯದ ಆಟಗಾರ. ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ. ಸಿಕ್ಕ ಅವಕಾಶಗಳನ್ನು ಸರಿಯಾಗಿಯೇ ಬಳಸಿಕೊಳ್ಳುತ್ತಿರುವ ಇಶಾನ್ ಕಿಶಾನ್ ಅವರ ಕ್ರಿಕೆಟ್ ಪ್ರತಿಭೆಯನ್ನು ಅನಾವರಣಗೊಳಿಸಲು ಮುಂಬೈ ಇಂಡಿಯನ್ಸ್ ಕೋಚ್ ಮಹೇಲಾ ಜಯವರ್ಧನೆ ಪ್ರಮುಖ ಪಾತ್ರ ವಹಿಸಿದ್ದರು.
ಹೌದು, ಈ ವಿಚಾರವನ್ನು ಸ್ವತಃ ಮಹೇಲಾ ಜಯವರ್ಧನೆಯವರೇ ಹೇಳಿಕೊಂಡಿದ್ದಾರೆ.
2018ರಲ್ಲಿ ಇಶಾನ್ ಕಿಶಾನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿದ್ದರು. ಅದು ಕೂಡ 6.2 ಕೋಟಿ ರೂಪಾಯಿಗೆ. ಹೀಗಾಗಿ ಇಶಾನ್ ಕಿಶಾನ್ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿತ್ತು ಮುಂಬೈ ಇಂಡಿಯನ್ಸ್.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

IPL 2021: How Mahela Jayawardene made Ishan Kishan more consistent

ಆದ್ರೆ ಇಶಾನ್ ಕಿಶಾನ್ ಅವರ ಮೇಲಿನ ನಿರೀಕ್ಷೆಗಳು ಕೆಲವೇ ದಿನಗಳಲ್ಲಿ ಹುಸಿಯಾಗಿದ್ದವು. ಯಾಕಂದ್ರೆ ಇಶಾನ್ ಕಿಶಾನ್ ತುಂಬಾನೇ ಸೋಂಬೇರಿಯಾಗಿದ್ದರು. ಯಾವಾಗಲೂ ಗೇಮ್ಸ್ ಆಟಗಳಲ್ಲಿ ನಿರತರಾಗಿದ್ದರು. ನೆಟ್ಸ್ ನಲ್ಲಿ ತಾಲೀಮ್ ನಡೆಸುತ್ತಿರುವಾಗ ಏಕಾಗ್ರತೆ ಇರಲಿಲ್ಲ. ಬೇಕಾಬಿಟ್ಟಿ ಅಭ್ಯಾಸ ನಡೆಸುತ್ತಿದ್ದರು. ಇದು ಮುಂಬೈ ಇಂಡಿಯನ್ಸ್ ತಂಡದ ಸಿಬ್ಬಂದಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು.
ನೆಟ್ ಅಭ್ಯಾಸದ ವೇಳೆ ಇಶಾನ್ ಕಿಶಾನ್ ಏನು ಮಾಡುತ್ತಿದ್ದರು ಎಂಬುದರ ಅರಿವೇ ಅವರಿಗಿರಲಿಲ್ಲ. ತಾಳ್ಮೆ, mahela jayavardhane mumbai indians saakshatvಏಕಾಗ್ರತೆ, ಶಿಸ್ತುಗಳು ಇರಲಿಲ್ಲ. ಆತನ ಮನಸ್ಸು ಎಲ್ಲೋ ಇರುತ್ತಿತ್ತು. ಬ್ಯಾಟಿಂಗ್ ಮಾಡುವಾಗ ಫುಟ್ ವರ್ಕ್‍ಗಳ ಮೇಲೆ ಗಮನ ಹರಿಸುತ್ತಿರಲಿಲ್ಲ. ಇದನ್ನೆಲ್ಲಾ ಗಮನಿಸುತ್ತಿದ್ದ ನಾನು ಹಲವು ಬಾರಿ ಆತನನ್ನು ನೆಟ್ಸ್ ನಿಂದ ಹೊರಗಡೆ ಕಳುಹಿಸುತ್ತಿದ್ದೆ. ನೀವು ಏನು ಯೋಚನೆ ಮಾಡಿಕೊಂಡು ಅಭ್ಯಾಸ ನಡೆಸುತ್ತಿದ್ದೀರಿ. ನಿಮಗೆ ಇಷ್ಟವಿಲ್ಲ ಅಂದ್ರೆ ಹೊರಗಡೆ ನಡೀರಿ. ನಾನು ನಿಮಗೆ ನೀಡುವ ಅರ್ಧಗಂಟೆಯ ಸಮಯವನ್ನು ಬೇರೆ ಆಟಗಾರರಿಗೆ ನೀಡುತ್ತೇನೆ ಎಂದು ಜಯವರ್ಧನೆ ಇಶಾನ್ ಕಿಶಾನ್ ಅವರಿಗೆ ವಾರ್ನಿಂಗ್ ನೀಡಿರುವುದನ್ನು ಹೇಳಿಕೊಂಡಿದ್ದಾರೆ.
2018ರ ಐಪಿಎಲ್ ನಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶಾನ್ ತನ್ನ ಪ್ರತಿಭೆ ಸಾಮಥ್ರ್ಯವನ್ನು ಪ್ರದರ್ಶಿಸಿದ್ರು ಎನ್ನುವ ಜಯವರ್ಧನೆ, ಆ ಪಂದ್ಯಕ್ಕೆ ಇಶಾನ್ ಕಿಶಾನ್ ನಾಲ್ಕನೇ ಕ್ರಮಾಂಕದಲ್ಲಿ ಆಡಲು ಅವಕಾಶ ನೀಡಿದ್ದೇವು. ಅದನ್ನು ಅವರು ಸರಿಯಾಗಿಯೇ ಬಳಸಿಕೊಂಡ್ರು. 21 ಎಸೆತಗಳಲ್ಲಿ 62 ರನ್ ಕೂಡ ಸಿಡಿಸಿದ್ದರು. ಅಂದು ನನಗೆ ಆತನ ಆಟದ ಬಗ್ಗೆ ನಿಖರತೆ ಸಿಕ್ಕಿತ್ತು. ಆತ ಜಾಸ್ತಿ ಯೋಚನೆ ಮಾಡುತ್ತಿದ್ರೆ ಏಕಾಗ್ರತೆ ಕಡಿಮೆ ಮಾಡಿಕೊಳ್ಳುತ್ತಾನೆ ಎಂದು. ಆತನ ಬ್ಯಾಟಿಂಗ್ ಸುಧಾರಣೆಗೆ ಮುಂಬೈ ಇಂಡಿಯನ್ಸ್ ತಂಡದ ಸಿಬ್ಬಂದಿಗಳು ಸಾಕಷ್ಟು ಶ್ರಮ ಪಟ್ಟಿದ್ದಾರೆ ಎಂಬ ವಿಷಯವನ್ನು ಜಯವರ್ಧನೆ ಹೇಳಿದ್ದಾರೆ.

ಒಟ್ಟಿನಲ್ಲಿ ಒಬ್ಬ ಕೋಚ್, ಆಟಗಾರನ ಮೇಲೆ ಯಾವ ರೀತಿ ಗಾಢವಾದ ಪರಿಣಾಮ ಬೀರುತ್ತಾನೆ ಎಂಬುದು ಇಶಾನ್ ಕಿಶಾನ್ ವಿಚಾರದಲ್ಲಿ ಗೊತ್ತಾಗುತ್ತದೆ. ಇವತ್ತು ಇಶಾನ್ ಕಿಶಾನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿರಬಹುದು. ಆದ್ರೆ ಅದರ ಹಿಂದಿನ ಶಕ್ತಿ ಮುಂಬೈ ಇಂಡಿಯನ್ಸ್ ತಂಡದ ಹೆಡ್ ಕೋಚ್ ಮತ್ತು ಸಿಬ್ಬಂದಿಗಳು ಎಂಬುದು ಮಾತ್ರ ಸುಳ್ಳಲ್ಲ.

Tags: #Ishan KishanIPLipl 2021kkrmahela Jayawardenemumbai indiansteam india
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram