ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಡೆಲ್ಲಿ ಗೆಲುವಿನ ಹಾದಿಗೆ ಸಹಕರಿಸಿದ ಜಸ್ಪ್ರಿತ್ ಬೂಮ್ರಾ ನೋಬಾಲ್ ಎಸೆತಗಳು…!

admin by admin
April 21, 2021
in IPL 2021, Newsbeat, ಐಪಿಎಲ್ 2021
amith mishra delhi capitals ipl 2021 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021- ಡೆಲ್ಲಿ ಗೆಲುವಿನ ಹಾದಿಗೆ ಸಹಕರಿಸಿದ ಜಸ್ಪ್ರಿತ್ ಬೂಮ್ರಾ ನೋಬಾಲ್ ಎಸೆತಗಳು…!

rohith sharma mumbai indians ipl 2021 saakshatvಅಮಿತ್ ಮಿಶ್ರಾ ಅವರ ಸ್ಪಿನ್ ಜಾದೂ ಹಾಗೂ ಶಿಖರ್ ಧವನ್ ಅವರ ಸಮಯೋಚಿತ ಆಟದ ನೆರವನ್ನು ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಆರು ವಿಕೆಟ್ ಗಳಿಂದ ಪರಾಭವಗೊಳಿಸಿತ್ತು.
ಚೆನ್ನೈ ನಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದ್ರೆ ಆರಂಭದಲ್ಲೇ ಕ್ವಿಂಟನ್ ಡಿ ಕಾಕ್ 1 ರನ್ ಗಳಿಸಿ ಮಾರ್ಕಸ್ ಸ್ಟೋನಿಸ್ ಅವರಿಗೆ ವಿಕೆಟ್ ಒಪ್ಪಿಸಿದ್ರು.
ಬಳಿಕ ರೋಹಿತ್ ಶರ್ಮಾ ಜೊತೆ ಸೇರಿಕೊಂಡ ಸ್ಕೈ ಖ್ಯಾತಿಯ ಸೂರ್ಯಕುಮಾರ್ ಯಾದವ್ ಬಿರುಸಿನ 24 ರನ್ ಗಳಿಸಿ ಆವೇಶ್ ಖಾನ್‍ಗೆ ವಿಕೆಟ್ ಒಪ್ಪಿಸಿದ್ರು.
ಮತ್ತೊಂದೆಡೆ ರೋಹಿತ್ ಶರ್ಮಾ ಜವಾಬ್ದಾರಿಯುತ ಆಟವನ್ನಾಡಿದ್ರೂ ಅವರ ಹೋರಾಟ 44 ರನ್ ಗೆ ಕೊನೆಗೊಂಡಿತ್ತು. ಅಮಿತ್ ಮಿಶ್ರಾ ಅವರ ಸ್ಪಿನ್ ಜಾದುಗೆ ರೋಹಿತ್ ಬಲಿಯಾದ್ರು.
ಇನ್ನೊಂದೆಡೆ ಇಶಾನ್ ಕಿಶಾನ್ ಕೂಡ ಹೆಚ್ಚು ಸಮಯ ಕ್ರೀಸ್ ನಲ್ಲಿ ಉಳಿಯಲಿಲ್ಲ. 26 ರನ್ ಗಳಿಸುವಷ್ಟರಲ್ಲಿ ಇಶಾನ್ ಅಮಿತ್ ಮಿಶ್ರಾಗೆ ಬಲಿಯಾದ್ರು. ಅಪಾಯಕಾರಿ ಹಾರ್ದಿಕ್ ಪಾಂಡ್ಯ ಅವರನ್ನು ಕೂಡ ಅಮಿತ್ ಮಿಶ್ರಾ ಶೂನ್ಯ ಸುತ್ತುವಂತೆ ಮಾಡಿದ್ರು. ಹಾಗೇ ಕೃನಾಲ್ ಪಾಂಡ್ಯ 1 ರನ್ ಗಳಿಸಿ ಲಲಿತ್ ಯಾದವ್ ಗೆ ವಿಕೆಟ್ ಒಪ್ಪಿಸಿದ್ರೆ, ಕಿರಾನ್ ಪೊಲಾರ್ಡ್ 2 ರನ್ ಗಳಿಸಿ ಅಮಿತ್ ಮಿಶ್ರಾಗೆ ನಾಲ್ಕನೇ ಬಲಿಯಾದ್ರು.
shikhar dhawan smith delhi capitals ipl2021 saakshatvಕೆಳ ಕ್ರಮಾಂಕದಲ್ಲಿ ಜಯಂತ್ ಯಾದವ್ 23 ರನ್ ಗಳಿಸಿದ್ರೆ, ರಾಹುಲ್ ಚಾಹರ್ 6 ರನ್ ಗಳಿಸಿದ್ರು. ಜಸ್ಪ್ರಿತ್ ಬೂಮ್ರಾ ಅಜೇಯ 3 ರನ್ ಹಾಗೂ ಟ್ರೆಂಟ್ ಬೌಲ್ಟ್ ಅಜೇಯ 1 ರನ್ ಗಳಿಸಿದ್ರು. ಪರಿಣಾಂ ಮುಂಬೈ ಇಂಡಿಯನ್ಸ್ 9 ವಿಕೆಟ್ ನಷ್ಟಕ್ಕೆ 137 ರನ್ ದಾಖಲಿಸಿತ್ತು.
ಸವಾಲನ್ನು ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲೇ ಪೃಥ್ವಿ ಶಾ ವಿಕೆಟ್ ಕಳೆದುಕೊಂಡಿತ್ತು. ಶಾ ಅಬ್ಬರ ಕೇವಲ ಏಳು ರನ್ ಗೆ ಅಂತ್ಯಗೊಂಡಿತ್ತು.
ನಂತರ ಶಿಖರ್ ಧವನ್ ಮತ್ತು ಸ್ಟೀವನ್ ಸ್ಮಿತ್ ಎರಡನೇ ವಿಕೆಟ್ ಗೆ 53 ರನ್ ಕಲೆ ಹಾಕಿದ್ರು. ಈ ಹಂತದಲ್ಲಿ 33 ರನ್ ಗಳಿಸಿದ್ದ ಸ್ಟೀವನ್ ಸ್ಮಿತ್ ಕಿಲಾನ್ ಪೊಲಾರ್ಡ್ ಅವರ ಎಲ್ ಬಿ ಬಲೆಗೆ ಬೀಳಿಸಿದ್ರು.
ಬಳಿಕ 42 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ನ ನೆರವಿನಿಂದ 45 ರನ್ ಸಿಡಿಸಿದ್ದ ಶಿಖರ್ ಧವನ್ ಕೂಡ ಪೆವಿಲಿಯನ್ ದಾರಿ ಸೇರಿಕೊಂಡ್ರು.
ನಂತರ ನಾಯಕ ರಿಷಬ್ ಪಂತ್ ಲಲಿತ್ ಯಾದವ್ ಜೊತೆ ಸೇರಿಕೊಂಡ್ರು. ಆದ್ರೆ ಪಂತ್ ಏಳು ರನ್ ಗಳಿಸಿ ನಿರಾಸೆ ಮೂಡಿಸಿದ್ರು.
ಇನ್ನೇನೂ ಮುಂಬೈ ಇಂಡಿಯನ್ಸ್ ಪಂದ್ಯದ ಮೇಲೆ ಹಿಡಿತ ಸಾಧಿಸಿಕೊಳ್ಳುವ ಹಂತದಲ್ಲಿ ಲಲಿತ್ ಯಾದವ್ ಮತ್ತು ಶಿಮ್ರೋನ್ ಹೆಟ್ಮರ್ ಅಡ್ಡಿಯನ್ನುಂಟು ಮಾಡಿದ್ರು. ಜಸ್ಪ್ರಿತ್ ಬೂಮ್ರಾ ಅವರ ನೋಬಾಲ್ ಎಸೆತಗಳ ಲಾಭ ಪಡೆದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇನ್ನೂ ಐದು ಎಸೆತಗಳಿರುವಂತೆ ಗೆಲುವಿನ ನಗೆ ಬೀರಿತ್ತು.
ಲಲಿತ್ ಯಾದವ್ ಅಜೇಯ 22 ರನ್ ಗಳಿಸಿದ್ರೆ, ಶಿಮ್ರೋನ್ ಹೆಟ್ಮೇರ್ ಅಜೇಯ 14 ರನ್ ದಾಖಲಿಸಿದ್ರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.1 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡ 138 ರನ್ ಗಳಿಸಿತ್ತು.
4 ಓವರ್ ಗಳಲ್ಲಿ 24 ರನ್ ನೀಡಿ ನಾಲ್ಕು ವಿಕೆಟ್ ಉರುಳಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದ ಅಮಿತ್ ಮಿಶ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Related posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026
ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026
Tags: #Ishan Kishan#saakshatvamith mishradelhi capitalsIPLipl 2021mumbai indiansraishab pantShikhar Dhawansurya kumar yadav
ShareTweetSendShare
Join us on:

Related Posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram