ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಒಂದು ರನ್ ಸೋಲು ಗೆಲುವಿನ ಲೆಕ್ಕಚಾರ…! ರಿಷಬ್ ಪಂತ್ ಗೆ ವಿರಾಟ್ ಸಮಧಾನ

admin by admin
April 28, 2021
in IPL 2021, Newsbeat, Uncategorized, ಐಪಿಎಲ್ 2021
rishab pant delhi capitals virat kohli rcb saakshatv ipl 2021
Share on FacebookShare on TwitterShare on WhatsappShare on Telegram

ಒಂದು ರನ್ ಸೋಲು ಗೆಲುವಿನ ಲೆಕ್ಕಚಾರ…! ರಿಷಬ್ ಪಂತ್ ಗೆ ವಿರಾಟ್ ಸಮಧಾನ

 rishab pant delhi capitals virat kohli rcb saakshatv ipl 2021ರಿಷಬ್ ಪಂತ್ .. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ನಾಯಕ. ಟೀಮ್ ಇಂಡಿಯಾದ ಭವಿಷ್ಯದ ಆಟಗಾರ. ಕಳೆದ ಆಸ್ಟ್ರೇಲಿಯಾ ಸರಣಿಯ ನಂತರ ರಿಷಬ್ ಪಂತ್ ಅವರ ವರ್ಚಸ್ಸು ಬದಲಾಗಿದೆ. ಕ್ರಿಕೆಟ್ ದಿಗ್ಗಜರು ರಿಷಬ್ ಪಂತ್ ಅವರ ಬ್ಯಾಟಿಂಗ್ ವೈಖರಿ ಮತ್ತು ಪಂದ್ಯ ಗೆಲ್ಲಿಸಿಕೊಡುವ ಸಾಮಥ್ರ್ಯಕ್ಕೆ ಉಘೆ ಉಘೇ ಅಂತಿದ್ದಾರೆ.
ಇದ್ರ ಬೆನ್ನಲ್ಲೇ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಅವಕಾಶವೂ ಸಿಕ್ಕಿತ್ತು. ಸದ್ಯ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ರೆ, ಎರಡು ಪಂದ್ಯಗಳನ್ನು ಸೋತಿದೆ.
ನಾಯಕನಾಗಿ ರಿಷಬ್ ಪಂತ್ ಬ್ಯಾಟಿಂಗ್ ನಲ್ಲಿ ಪರವಾಗಿಲ್ಲ ಅನ್ನೋ ಪ್ರದರ್ಶನವನ್ನು ನೀಡಿದ್ದಾರೆ. ಜವಾಬ್ದಾರಿಯುತವಾಗಿ ಬ್ಯಾಟ್ ಬೀಸುತ್ತಿದ್ದಾರೆ. ಆದ್ರೆ ನಾಯಕನಾಗಿ ಎದುರಾಳಿ ತಂಡಕ್ಕೆ ರಣತಂತ್ರ ರೂಪಿಸುವವಲ್ಲಿ ಸ್ವಲ್ಪ ಎಡವುತ್ತಿದ್ದಾರೆ. ಅದನ್ನು ಬಿಟ್ಟು ರಿಷಬ್ ಪಂತ್ ನಾಯಕನಾಗಿ ಉತ್ತಮವಾಗಿಯೇ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಈ ನಡುವೆ ರಿಷಬ್ ಪಂತ್ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಒಂದು ರನ್ ನಿಂದ ಸೋತಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಶಿಮ್ರೋನ್ ಹೆಟ್ಮೇರ್ ಜೊತೆ ಸೇರಿಕೊಂಡು ಗೆಲ್ಲಲು ಅಸಾಧ್ಯವಾದ ಗುರಿಯನ್ನು ಬೆನ್ನಟ್ಟಿದ್ದರು. ಇನ್ನೇನೂ ಗೆಲುವು ಕೈಗೆ ಸಿಗುತ್ತೆ ಅಂದುಕೊಳ್ಳುವಷ್ಟರಲ್ಲಿ ಕೈ ಜಾರಿ ಹೋಯ್ತು. ಹೆಟ್ಮೇರ್ ಅವರನ್ನು ಹುರಿದುಂಬಿಸುತ್ತಾ ನಾಯಕನ ಆಟವನ್ನಾಡಿದ್ದು ರಿಷಬ್ ಪಂತ್ ಅವರ ಪ್ರಬುದ್ಧತೆಯನ್ನು ಎತ್ತಿ ತೋರಿಸುತ್ತಿತ್ತು. ತಾಳ್ಮೆಯಿಂದಲೇ ಬ್ಯಾಟ್ ಮಾಡುತ್ತಿದ್ದ ರಿಷಬ್ ಪಂತ್ ಕೊನೆಯ ಎಸೆತವನ್ನು ಅರಿತುಕೊಳ್ಳುವಲ್ಲಿ ವಿಫಲರಾದ್ರು. ಕೊನೆಯ ಎಸೆತದಲ್ಲಿ ಐದು ರನ್ ಗಳು ಬೇಕಿದ್ದವು. ಆದ್ರೆ ರಿಷಬ್ ಪಂತ್ ಸಿಕ್ಸರ್ ಬಾರಿಸುವ ಬದಲು ಬೌಂಡರಿ ಬಾರಿಸಿದ್ರು. ಹೀಗಾಗಿ ಆರ್ ಸಿಬಿ ಒಂದು ರನ್ ನಿಂದ ಗೆಲುವಿನ ನಗೆ ಬೀರಿತ್ತು.
rishab pant delhi capitals virat kohli rcb saakshatv ipl 2021ಈ ಸೋಲು ಸಹಜವಾಗಿಯೇ ರಿಷಬ್ ಪಂತ್ ಅವರನ್ನು ಕಣ್ಣೀರು ಭರಿಸುವಂತೆ ಮಾಡಿತ್ತು. ಆದ್ರೂ ರಿಷಬ್ ಪಂತ್ ತೋರಿಸಿಕೊಳ್ಳಲಿಲ್ಲ. ನಿರಾಸೆ, ಬೇಸರದಿಂದಲೇ ಸೋಲನ್ನು ಒಪ್ಪಿಕೊಂಡ ರಿಷಬ್ ಪಂತ್ ಆಘಾತಕ್ಕೀಡಾಗಿದ್ರು.
ಈ ಸಮಯದಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ರಿಷಬ್ ಪಂತ್ ಅವರನ್ನು ಸಮಾಧಾನಪಡಿಸಿದ್ರು. ಆದ್ರೂ ರಿಷಬ್ ಪಂತ್ ಸಮಾಧಾನಗೊಳ್ಳುವ ಸ್ಥಿತಿಯಲ್ಲಿಲ್ಲ. ಅಷ್ಟೊಂದು ಬೇಸರ, ನೋವು, ನಿರಾಸೆ ರಿಷಬ್ ಪಂತ್ ಮುಖದಲ್ಲಿ ಎದ್ದು ಕಾಣುತ್ತಿತ್ತು.
ಆದ್ರೆ ಇದು ರಿಷಬ್ ಪಂತ್ ಗೆ ಪಾಠ. ಪಂದ್ಯದಿಂದ ಪಂದ್ಯಕ್ಕೆ ಪ್ರಬುದ್ಧತೆ ಸಾಧಿಸಿಕೊಳ್ಳುತ್ತಿರುವ ರಿಷಬ್ ಪಂತ್ ಈ ಸೋಲನ್ನು ಮರೆಯಲೇಬೇಕು. ಇದೇ ಗುಂಗಿನಲ್ಲಿದ್ರೆ ಮುಂದಿನ ಹಾದಿ ಕಷ್ಟ ಕಷ್ಟ.. ಆಟ ಅಂದ ಮೇಲೆ ಸೋಲು ಗೆಲುವು ಇದ್ದದ್ದೇ. ಇದು ರಿಷಬ್ ಪಂತ್ ಗೂ ಗೊತ್ತು. ಹೀಗಾಗಿ ರಿಷಬ್ ಪಂತ್ ಆರ್ ಸಿಬಿ ವಿರುದ್ಧದ ಸೋಲನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಸೇಡು ತೀರಿಸಿಕೊಳ್ಳಲು ಇನ್ನೊಂದು ಪಂದ್ಯವಿದೆ.
ಒಟ್ಟಿನಲ್ಲಿ ರಿಷಬ್ ಪಂತ್ ತಪ್ಪು ಗಳನ್ನು ತಿದ್ದಿಕೊಂಡು ಮುಂದಿನ ಪಂದ್ಯಕ್ಕೆ ತಯಾರಿ ನಡೆಸಿಕೊಳ್ಳಬೇಕು

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026
Tags: #rishab pant#saakshatvCricketdelhi capitalsIPLipl 2021RCBt-20 cricketvirat kohli
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram