ಐಪಿಎಲ್ ಹಂಗಾಮ.. ಸಿನಿಮಾ ಕಿಕ್.. ಪ್ರಮುಖ ಸುದ್ದಿಗಳು
01 ದಿ ಕಾಶ್ಮೀರ ಫೈಲ್ಸ್ ಸಿನಿಮಾ ನಿಜವಾದ ಗೇಮ್ ಚೇಂಜರ್ ಎಂದು ಸೆನ್ಸೇಷನಲ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಸುದ್ದಿವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ರಾಮ್ ಗೋಪಾಲ್ ವರ್ಮಾ, ಮಾರ್ಚ್ 25 ರಂದು ವಿಶ್ವಾದ್ಯಂತ ಬಿಡುಗಡೆಯಾದ ಆರ್ ಆರ್ ಆರ್ ಸಿನಿಮಾ ಸಿನಿಮಾವನ್ನು ಆರಂಭದಲ್ಲಿ ಹೊಗಳಿದರು. ‘ನನ್ನ ಪ್ರಕಾರ ಆರ್ಆರ್ಆರ್ ಸಿನಿಮಾ ದೊಡ್ಡ ಸಿನಿಮಾ. ಆದರೆ ಅದು ಗೇಮ್ ಚೇಂಜರ್ ಅಲ್ಲ. ಏಕೆಂದರೆ ರಾಜಮೌಳಿ ಸಿನಿಮಾ ಸಮಾಜದಲ್ಲಿ ಬದಲಾವಣೆ ತರುತ್ತದೆ ಎಂದು ನಾನು ಭಾವಿಸುವುದಿಲ್ಲ. ಆದ್ರೆ ದಿ ಕಾಶ್ಮೀರ ಫೈಲ್ಸ್ ಸಿನಿಮಾ ನಿಜವಾದ ಗೇಮ್ ಚೇಂಜರ್ ಎಂದಿದ್ದಾರೆ.
02 ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ಮೋಹನ್ ರಾಜಾ ನಿರ್ದೇಶನದ ‘ಗಾಡ್ ಫಾದರ್‘ ಸಿನಿಮಾದಲ್ಲಿ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ನಟಿಸಲಿದ್ದಾರೆ. ಇದು ಮಲಯಾಳಂನಲ್ಲಿ ಯಶಸ್ವಿಯಾದ ‘ಲೂಸಿಫರ್‘ ಚಿತ್ರದ ತೆಲುಗು ರಿಮೇಕ್ ಆಗಿದೆ. ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ತಮ್ಮ ಪಾತ್ರದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಈ ನಡುವೆ ಮತ್ತೊಂದು ಸುದ್ದಿ ಹೊರಬಂದಿದ್ದು, ಟಾಲಿವುಡ್ ನ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದರಂತೆ. ಈ ವಿಷಯವನ್ನು ಸ್ವತಃ ಚಿರಂಜೀವಿಯೇ ಟ್ವಿಟ್ಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.
03 ಪ್ರಭಾಸ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಸೋಶಿಯಲ್ ಮೀಡಿಯಾದಲ್ಲಿ ಗಿರಕಿ ಹೊಡೆಯುತ್ತಿದೆ. ರಾಧೇಶ್ಯಾಮ ಚಿತ್ರ ಬಿಡುಗಡೆಯಾದ ನಂತರ ಪ್ರಭಾಸ್ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು ಗೊತ್ತಿರುವ ವಿಚಾರವೇ. ಈ ಹಿನ್ನೆಲೆಯಲ್ಲಿ ಸೋಲಾರ್ ಶೂಟಿಂಗ್ ಸ್ಥಗಿತಗೊಂಡಿತ್ತು. ಪ್ರಭಾಸ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡು ತಿಂಗಳು ಬೇಕು ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಇತ್ತೀಚಿನ ಸುದ್ದಿಯ ಪ್ರಕಾರ, ಪ್ರಭಾಸ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಒಂದು ತಿಂಗಳು ತೆಗೆದುಕೊಳ್ಳುತ್ತದೆ. ಅಂದರೆ ಸುಮಾರು 3 ತಿಂಗಳ ಕಾಲ ಪ್ರಭಾಸ್ ರೆಸ್ಟ್ ಮೋಡ್ ನಲ್ಲಿ ಇರಲಿದ್ದಾರೆ ಎಂದು ಸಿನಿ ಮೂಲಗಳು ತಿಳಿಸಿವೆ.
04 ಟೀಂ ಇಂಡಿಯಾ ಆಟಗಾರ, ಪಂಜಾಬ್ ಕಿಂಗ್ಸ್ ಸ್ಟಾರ್ ಓಪನರ್ ಶಿಖರ್ ಧವನ್ ಟಿ20 ಕ್ರಿಕೆಟ್ ನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ಧವನ್ ಟಿ20ಯಲ್ಲಿ 1000 ಬೌಂಡರಿಗಳನ್ನು ಬಾರಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್-2022ರ ಅಂಗವಾಗಿ ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಧವನ್ ಈ ಸಾಧನೆ ಮಾಡಿದ್ದಾರೆ. ಒಟ್ಟಾರೆ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಯಲ್ಲಿ ಧವನ್ ಐದನೇ ಸ್ಥಾನದಲ್ಲಿದ್ದಾರೆ.
05 ನಾಯಕತ್ವದ ಒತ್ತಡ ಮಯಾಂಕ್ ಬ್ಯಾಟಿಂಗ್ ಮೇಲೆ ಬೀರುತ್ತಿದೆ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಪಡುತ್ತಿದ್ದಾರೆ. ಇದೇ ವಿಚಾರವಾಗಿ ಸ್ಪಂದಿಸಿರುವ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, ‘‘ಮಯಾಂಕ್ ಮೇಲೆ ನಾಯಕತ್ವದ ಪ್ರಭಾವ ಹೆಚ್ಚಾಗಿದೆ. ಆ ಅಂಶ ಸ್ಪಷ್ಟವಾಗಿ ಅರ್ಥವಾಗುತ್ತಿದೆ. ನಾಲ್ಕು ಪಂದ್ಯಗಳಲ್ಲಿ ಕೇವಲ 42 ರನ್ ಗಳಿಸಿದ್ದಾರೆ. ಓಪನರ್ ಆಗಿ ಬರುತ್ತಿರುವ ಮಯಾಂಕ್ ಗೆ ಇದು ಸರಿ ಹೊಂದುವುದಿಲ್ಲ . ಕಳೆದ ಸೀಸನ್ ನಲ್ಲಿ ಕಾಣಿಸಿಕೊಂಡಿದ್ದ ಮಯಾಂಕ್ ಈಗ ಕಾಣಿಸುತ್ತಿಲ್ಲ ಎಂದು ಅಭಿಪ್ರಾಯಪಡುತ್ತಿದ್ದಾರೆ.