ದೆಹಲಿ ಹಿಂಸಾಚಾರ ಖಂಡಿಸಿ ಇರಾನ್ ವಿದೇಶಾಂಗ ಸಚಿವ ಜಾವೇದ್ ಜರೀಫ್ ಟ್ವೀಟ್ ಮಾಡಿದ್ದು, ಜಾವೇದ್ ನಡೆಯನ್ನು ತೀವ್ರವಾಗಿ ಖಂಡಿಸಿರುವ ಭಾರತ, ಈ ಕುರಿತು ಸ್ಪಷ್ಟನೆ ನೀಡುವಂತೆ ಇರಾನ್ ರಾಯಭಾರಿ ಅಲಿ ಚೆಗೆನಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಕುರಿತು ಟ್ವೀಟ್ ಮಾಡಿದ್ದ ಜಾವೇದ್ ಜರೀಫ್, ಹಿಂಸಾಚಾರ ಹತ್ತಿಕ್ಕುವಂತೆ ಭಾರತ ಸರ್ಕಾರಕ್ಕೆ ಸಲಹೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸದಂತೆ ಇರಾನ್ ಸೇರಿ ಎಲ್ಲ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇರಾನ್ ರಾಯಭಾರಿ ಅಲಿ ಚೆಗೆನಿ ಅವರಿಗೆ ನೋಟಿಸ್ ಜಾರಿ ಮಾಡಿರುವ ಭಾರತದ ವಿದೇಶಾಂಗ ಇಲಾಖೆ, ಈ ಕುರಿತು ಸ್ಪಷ್ಟನೆ ನೀಡುವಂತೆ ಕೋರಿದೆ.
ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...








