IRCTC scam: ಬಿಹಾರ Deputy CM ತೇಜಸ್ವಿ ಯಾದವ್ ಜಾಮೀನು ರದ್ದತಿಗೆ ನಿರಾಕರಿಸಿದ ಕೋರ್ಟ್…
ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಹಗರಣದಲ್ಲಿ ಸಿಬಿಐ ಸಲ್ಲಿಸಿದ ಮನವಿಯ ಮೇರೆಗೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಜಾಮೀನು ರದ್ದುಗೊಳಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ತೇಜಸ್ವಿ ಯಾದವ್ ಜಾಮೀನು ನಿರಾಕರಿಸಲು ನ್ಯಾಯಾಲಯವು ಯಾವುದೇ ನಿರ್ದಿಷ್ಟ ಆಧಾರಗಳನ್ನು ಕಂಡುಕೊಂಡಿಲ್ಲ ಎಂದು ತಿಳಿಸಿದೆ. ಆದಾಗ್ಯೂ, ಸಿಬಿಐನ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ತೇಜಸ್ವಿ ಯಾದವ್ ಅವರಿಗೆ ಸಾರ್ವಜನಿಕವಾಗಿ ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಿ ಮತ್ತು ಸೂಕ್ತವಾದ ಪದಗಳನ್ನು ಆಯ್ಕೆ ಮಾಡಲು ಕೇಳಿಕೊಂಡಿದ್ದಾರೆ.
ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ “ಯಾದವ್ ಅವರು ಕಾನೂನಿನ ಪ್ರಕ್ರಿಯೆಯನ್ನು ಬುಡಮೇಲು ಮಾಡಲು ಪ್ರಯತ್ನಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಯನ್ನ ಮತ್ತು ಆನಂತರದ ವಿಚಾರಣೆಯನ್ನ ವಿಫಲಗೊಳಿಸಿದ್ದಾರೆ. ಅವರಿಗೆ ನೀಡಲಾದ ಸ್ವಾತಂತ್ರ್ಯವನ್ನು ಸ್ಪಷ್ಟವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ಹೇಳಿಕೊಂಡಿದೆ.
ಬಿಹಾರದ ಉಪಮುಖ್ಯಮಂತ್ರಿ ಅವರು ತನಗೆ ಈ ಹಿಂದೆ ನೀಡಲಾದ ಜಾಮೀನಿನಲ್ಲಿ ನಿಗದಿಪಡಿಸಿದ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಈ ನಿರ್ದೇಶನಗಳನ್ನು ನೀಡಿದೆ.
2018ರ ಅಕ್ಟೋಬರ್ನಲ್ಲಿ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಸೆಪ್ಟೆಂಬರ್ 17ರಂದು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಯಾದವ್ ಪರ ವಕೀಲರಿಗೆ ನ್ಯಾಯಾಧೀಶರು ಸೆಪ್ಟೆಂಬರ್ 28ರಂದು ಕಾಲಾವಕಾಶ ನೀಡಿದರು.
IRCTC scam: Delhi court refuses to cancel bail of Bihar Deputy CM Tejashwi Yadav