ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪಟ್ಟಿಗೆ ಸೇರಿಸಿ ಮೀಸಲಾತಿ ನೀಡುವುದು ಮಹಾಪರಾಧವೇ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಪ್ರಶ್ನಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ-ಲಿಂಗಾಯತ ಸಮುದಾಯಗಳಲ್ಲಿ ನೂರಕ್ಕೂ ಹೆಚ್ಚು ಉಪಜಾತಿಗಳಿವೆ. ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಕೆಲವು ಉಪಜಾತಿಗಳನ್ನು ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಬೇಕಾಗಿದೆ. ಹೀಗಾಗಿ ಸಮಗ್ರವಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ. ಆದ್ದರಿಂದ ವಿಷಯ ಪ್ರಸ್ತಾಪ ಮುಂದೂಡಲಾಗಿದೆ ಎಂದು ಮಾಧುಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ರದ್ದಾಗಿರುವುದಕ್ಕೆ ಬೇರೆ ಕಾರಣಗಳು ಇಲ್ಲ. ದೆಹಲಿ ನಾಯಕರು ತೀರ್ಮಾನ ಮಾಡಬಾರದೆಂದು ಯಾವುದೇ ಒತ್ತಡ ಹೇರಿಲ್ಲ. ಸಿದ್ಧತೆ ಮಾಡಿಕೊಳ್ಳದ ಕಾರಣ ಮೀಸಲಾತಿ ಪ್ರಸ್ತಾಪ ಮುಂದೂಡುವಂತೆ ಸಿಎಂಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.
ವೀರಶೈವ-ಲಿಂಗಾಯತ, ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸಾಕಷ್ಟು ಅಧ್ಯಯನ, ಪೂರಕ, ಅಗತ್ಯ ದಾಖಲೆಗಳ ಸಂಗ್ರಹ ಮಾಡಿಕೊಳ್ಳಬೇಕು. ಅಗತ್ಯ ದಾಖಲೆ ಸಿದ್ಧಮಾಡಿಕೊಂಡು ಸಂಪುಟದಲ್ಲಿ ನಿರ್ಣಯ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರದ ಉದ್ಯೋಗ ಮತ್ತು ಶೈಕ್ಷಣಿಕ ಮೀಸಲಾತಿ ಉದ್ದೇಶಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಲಾಗಿತ್ತು. 1999ರಿಂದಲೂ ವೀರಶೈವ ಸಮಾಜ ಹೋರಾಟ ಮಾಡಿಕೊಂಡು ಬಂದಿದೆ. ರಾಜ್ಯದಲ್ಲಿ ಈಗ ಮೀಸಲಾತಿ ಕೇಳುತ್ತಿಲ್ಲ. ಕೇಂದ್ರದ ಕೋಟಾದಲ್ಲಿ ಅವಕಾಶ ಪಡೆಯುವುದಷ್ಟೇ ಉದ್ದೇಶ ಎಂದು ಸಮರ್ಥಿಸಿಕೊಂಡಿದ್ದಾರೆ.
ವೀರಶೈವ ಲಿಂಗಾಯತರು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರುವುದು ಮಹಾ ಅಪರಾಧವೇ? ಅವಕಾಶ ಪಡೆದುಕೊಳ್ಳುವುದು ಅಪರಾಧ ಮಾಡಿರುವ ರೀತಿ ಏಕೆ ನೋಡಲಾಗುತ್ತಿದೆ? ಮುಂದುವರಿದ ವರ್ಗದಲ್ಲಿದ್ದು, ಉಪ ಜಾತಿಗಳು ಒಬಿಸಿ ಪಟ್ಟಿಯಿಂದ ಬಿಟ್ಟು ಹೋಗಿದ್ದರೆ ಅವರನ್ನೂ ಸೇರಿಸಿಕೊಂಡು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








