ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾಗೇ ಸುಮ್ಮನೆ ವಿಕೆಟ್ ಕೈಚೆಲ್ಲಿಕೊಂಡ ರಿಷಬ್ ಪಂತ್… ಅತೀಯಾದ ಆತ್ಮವಿಶ್ವಾಸವೇ ಪಂತ್‍ಗೆ ಅಪತ್ತು…!

admin by admin
February 15, 2021
in Newsbeat, Sports, ಕ್ರೀಡೆ
RISHAB PANT TEAM INDIA SAAKSHATV
Share on FacebookShare on TwitterShare on WhatsappShare on Telegram

ಹಾಗೇ ಸುಮ್ಮನೆ ವಿಕೆಟ್ ಕೈಚೆಲ್ಲಿಕೊಂಡ ರಿಷಬ್ ಪಂತ್… ಅತೀಯಾದ ಆತ್ಮವಿಶ್ವಾಸವೇ ಪಂತ್‍ಗೆ ಅಪತ್ತು…!

RISHAB PANT TEAM INDIA SAAKSHATVರಿಷಬ್ ಪಂತ್… ವಿಕೆಟ್ ಕೀಪಿಂಗ್ ನಲ್ಲಿ ಅಷ್ಟಕ್ಕಷ್ಟೇ.. ಆದ್ರೆ ಬ್ಯಾಟಿಂಗ್ ನಲ್ಲಿ ನಂಬಲು ಅಸಾಧ್ಯವಾದ ಆಟಗಾರ.
ಚಂಚಲ ಮನಸ್ಥಿತಿಯನ್ನು ಹೊಂದಿರುವ ರಿಷಬ್ ಪಂತ್ ಸಿಕ್ಕ ಅವಕಾಶಗಳನ್ನು ಕೈಚೆಲ್ಲಿಕೊಳ್ಳುತ್ತಿದ್ದಾರೆ. ಏಕಾಂಗಿಯಾಗಿ ತಂಡವನ್ನು ಗೆಲ್ಲಿಸಿಕೊಡುವಂತಹ ಸಾಮಥ್ರ್ಯವನ್ನು ಹೊಂದಿದ್ರೂ ಕೂಡ ಯಾವಾಗ ವಿಕೆಟ್ ಕೈಚೆಲ್ಲಿಕೊಳ್ಳುತ್ತಾರೆ ಅಂತ ಹೇಳೋಕೆ ಆಗಲ್ಲ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಹೀಗೆ ವಿಚಿತ್ರ ಮನೋಸ್ಥಿತಿ, ಅತೀಯಾದ ಆತ್ಮವಿಶ್ವಾಸದಿಂದಲೇ ಟೀಕೆಗೂ ಗುರಿಯಾಗುತ್ತಿದ್ದಾರೆ. ಚೆನ್ನೈ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಮೋಘ ಆಟವನ್ನಾಡಿದ್ರು. ಅಲ್ಲದೆ ಅಜೇಯ 58 ರನ್ ಕೂಡ ಸಿಡಿಸಿದ್ರು.
ಆದ್ರೆ ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ಪಡೆದುಕೊಂಡ ರಿಷಬ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ರಹಾನೆ ಜಾಗದಲ್ಲಿ ಪಂತ್ ಗೆ ಆಡುವ ಅವಕಾಶ ಸಿಕ್ಕರೂ ಕೂಡ ಗಡಿಬಿಡಿ ಹಾಗೂ ಹೊಡಿಬಡಿಯ ಆಟಕ್ಕೆ ಮುಂದಾಗಿ ವಿಕೆಟ್ ಕೈಚೆಲ್ಲಿಕೊಂಡಿದ್ದಾರೆ.
ಪ್ರತಿ ಎಸೆತದಲ್ಲೂ ರನ್ ಬರಬೇಕು.. ಎದುರಾಳಿ ಬೌಲರ್ ಗಳ ಆತ್ಮಸ್ಥೈರ್ಯವನ್ನು ಕಂಗೆಡಿಸಬೇಕು ಅನ್ನೋ ಗೇಮ್ ಪ್ಲಾನ್ ಇದ್ರೂ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಬೀಸಬೇಕು ಅನ್ನೋದನ್ನು ಮರೆತಂತೆ ಆಡುತ್ತಾರೆ ರಿಷಬ್ ಪಂತ್.
ಹಾಗೇ ನೋಡಿದ್ರೆ ಎರಡನೇ ಪಂದ್ಯದ ಮೂರನೇ ದಿನ ಚೇತೇಶ್ವರ ಪೂಜಾರ ಮತ್ತು ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಾಗ ರಿಷಬ್ ಪಂತ್ ಎಚ್ಚರಿಕೆಯ ಆಟವನ್ನಾಡಬೇಕಾಗಿತ್ತು.
ನಾಯಕ ವಿರಾಟ್ ಕೊಹ್ಲಿಯ ಜೊತೆ ಸೇರಿಕೊಂಡು ತಂಡಕ್ಕೆ ಆಧಾರವಾಗಬೇಕಿತ್ತು. ಆದ್ರೆ ರಿಷಬ್ ಪಂತ್ ಆ ಮನಸ್ಥಿತಿಯಲ್ಲಿರಲಿಲ್ಲ. ಪಟಪಟನೇ ರನ್ ಗಳಿಸಬೇಕು ಅನ್ನೋ ಆತುರಕ್ಕೆ ಬಿದ್ದು ಸ್ಟಂಪ್ ಔಟಾದ್ರು.
ರಿಷಬ್ ಪಂತ್ ಕ್ರೀಸ್ ನಲ್ಲಿದ್ದಾಗ ವಿರಾಟ್ ಕೊಹ್ಲಿ ಸಲಹೆ ಮಾರ್ಗದರ್ಶನಗಳನ್ನು ನೀಡುತ್ತಾರೆ. ಆದ್ರೆ ಅದನ್ನು ರಿಷಬ್ ಪಂತ್ ಕಿವಿಗೆ ಹಾಕಿಕೊಳ್ಳಲಿಲ್ಲ.
ಒಂದೊಂದು ರಿಷಬ್ ಪಂತ್ ಬ್ಯಾಟಿಂಗ್ ಮನೋಭಾವನೆ ವೀರೇಂದ್ರ ಸೆಹ್ವಾಗ್ ನೆನಪಿಸುತ್ತಿದೆ. ಹೊಡಿಬಡಿ ಆಟದಿಂದಲೇ ಸದ್ದು ಮಾಡುತ್ತಿದ್ದ ಸೆಹ್ವಾಗ್ ನಂತೆ ರಿಷಬ್ ಪಂತ್ ಕೂಡ ನೈಜ ಆಟಗಾರ. ಆದ್ರೆ ತಂಡದ ಪರಿಸ್ಥಿತಿಗೆ ತಕ್ಕಂತೆ ಆಟವಾಡಬೇಕು ಅಲ್ವಾ?

RISHAB PANT TEAM INDIA SAAKSHATVಇನ್ನು ಚೆನ್ನೈ ಪಿಚ್ ಸ್ಪಿನ್ನರ್ ಗಳಿಗೆ ಅನುಕೂಲವಾಗುತ್ತಿದೆ. ಹಾಗಂತ ಭಾರತ ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ್ರೂ ಇಂಗ್ಲೆಂಡ್ ಗೆ ಸವಾಲು ಹಾಕುವಂತಹ ರನ್ ಗಳಿಸಿಲ್ಲ. ಪಂದ್ಯ ಮುಗಿಯಲು ಇನ್ನೂ ಮೂರು ದಿನಗಳಿವೆ. ಹಾಗಾಗಿ ಇಂದು ಪೂರ್ತಿಯಾಗಿ ಟೀಮ್ ಇಂಡಿಯಾ ಆಡಿ ಇನ್ನುಳಿದ ಎರಡು ದಿನ ಇಂಗ್ಲೆಂಡ್ ವಿರುದ್ಧ ಒತ್ತಡ ಹೇರಿದ್ರೆ ಗೆಲ್ಲುವ ಅವಕಾಶಗಳು ಹೆಚ್ಚಿರುತ್ತವೆ.
ಈಗಾಗಲೇ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಈಗಾಗಲೇ 86ಕ್ಕೆ ಐದು ವಿಕೆಟ್ ಕಳೆದುಕೊಂಡಿದೆ.
ಗಿಲ್, ಪೂಜಾರ, ರೋಹಿತ್, ರಿಷಬ್ ಪಂತ್, ರಹಾನೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ.
ಮೊದಲ ಇನಿಂಗ್ಸ್ ನಲ್ಲಿ ಟೀಮ್ ಇಂಡಿಯಾ 195 ರನ್ ಗಳ ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಎರಡನೇ ಇನಿಂಗ್ಸ್ ನಲ್ಲಿ ಕನಿಷ್ಠ 205 ರನ್ ಗಳನ್ನಾದ್ರೂ ಕಲೆ ಹಾಕಬೇಕು.
ಇನ್ನು ಇಂಗ್ಲೆಂಡ್ ಬ್ಯಾಟ್ಸ್ ಮೆನ್ ಗಳು ಟೀಮ್ ಇಂಡಿಯಾದ ಬೌಲಿಂಗ್ ದಾಳಿಯ ಎದುರು ದಿಟ್ಟವಾಗಿ ಉತ್ತರ ನೀಡಿದ್ರೆ ಫಲಿತಾಂಶ ಏನು ಬೇಕಾದ್ರೂ ಆಗಬಹುದು .
ಆದ್ರೆ ಪಿಚ್ ನ ವರ್ತನೆಯನ್ನು ನೋಡಿದಾಗ ಪಂದ್ಯ ಹರ್ಭಜನ್ ಸಿಂಗ್ ಹೇಳಿದಂತೆ ನಾಲ್ಕನೇ ದಿನವೇ ಪಂದ್ಯ ಮುಗಿಯಬಹುದು. ಸ್ಪಷ್ಟ ಫಲಿತಾಂಶ ಬರಬಹುದು.

Tags: #Rishabh Pant.#saakshatvAjinkya Rahanebccidelhi capitalsIPLrohith sharmateam indiavirat kohli
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram