ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರವೇ ಬೆಂಬಲ ಕೊಡ್ತಾ ಇದ್ಯಾ..?

admin by admin
April 10, 2021
in Newsbeat, Saaksha Special, ಎಸ್ ಸ್ಪೆಷಲ್
B S Yediyurappa
Share on FacebookShare on TwitterShare on WhatsappShare on Telegram

ರೋಗಿ ಬಯಸಿದ್ದೂ ಹಾಲು ಡಾಕ್ಟರ್ ಹೇಳಿದ್ದೂ ಹಾಲು ಎಂಬಂತೆ ಆಯ್ತಾ ಸಾರಿಗೆ ನೌಕರರ ಮುಷ್ಕರ..?

ಸಾರಿಗೆ ನೌಕರರ ಮುಷ್ಕರದ ಹಿಂದೆ ಸರ್ಕಾರದ ಕೈವಾಡ..?

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರವೇ ಬೆಂಬಲ ಕೊಡ್ತಾ ಇದ್ಯಾ..?

ಮುಷ್ಕರ ಶುರುವಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಸರ್ಕಾರ ಬಂಡೆಯಂತಾಗಿರುವುದು ಏಕೆ..?

ಜನಸಂದಣಿ ತಡೆಯೋಕೆ ಸರ್ಕಾರ ರೂಪಿಸಿದ ಮಾಸ್ಟರ್ ಪ್ಲಾನಾ ಸಾರಿಗೆ ನೌಕರರ ಮುಷ್ಕರ..?

ಇವು ಸದ್ಯ ರಾಜ್ಯದ ಪ್ರಜ್ಞಾವಂತ ಜನರಲ್ಲಿ ಮೊಳಕೆ ಹೊಡೆಯುತ್ತಿರುವ ಪ್ರಶ್ನೆಗಳು.

ಹೌದು..! ಸಾರಿಗೆ ನೌಕರರ ಮುಷ್ಕರಕ್ಕೂ, ಸರ್ಕಾರ ಇದಕ್ಕೆ ಬೆಂಬಲ ನೀಡೋದಕ್ಕೂ ಎಲ್ಲಿಯ ಸಂಬಂಧ ಅಂತ ಪ್ರಶ್ನೆ ಮೂಡಬಹುದು. ಆದ್ರೆ ಸರ್ಕಾರದ ನಡೆಯನ್ನ ಗಮನಿಸಿದ್ರೆ ಎಲ್ಲೋ ಒಂದು ಕಡೆ ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿರುವಂತಿದೆ. ಸಾರಿಗೆ ಸಚಿವರ ಹೇಳಿಕೆ, ಸಿಎಂ ಬಿಎಸ್ ಯಡಿಯೂರಪ್ಪನವರ ವರಸೆಯನ್ನ ಸೂಕ್ಷ್ಮವಾಗಿ ಗಮನಿಸಿದ್ರೆ ಸಾರಿಗೆ ನೌಕರರ ಮುಷ್ಕರವನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಂತೆ ಕಾಣಿಸುತ್ತಲೇ ಇಲ್ಲ.

ಜನಸಂದಣಿ ತಡೆಯೋಕೆ ಸರ್ಕಾರ ರೂಪಿಸಿದ ಮಾಸ್ಟರ್ ಪ್ಲಾನಾ..?

ನಿಜ..! ಸದ್ಯ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿಕ್ಕುದೆಸೆ ಇಲ್ಲದಾಗೆ ಸಿಕ್ಕ ಸಿಕ್ಕವರ ದೇಹ ಹೊಕ್ಕಿ ಮರಣಮೃದಂಗ ಬಾರಿಸುತ್ತಿದೆ. ಪ್ರತಿದಿನ ರಾಜ್ಯದಲ್ಲಿ ಸಾವಿರಾರು ಮಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಶತಾಯಗತಾಯ ಕೊರೊನಾಗೆ ಕಡಿವಾಣ ಹಾಕಲೇಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ. ಇದಕ್ಕಾಗಿ ಕೆಲ ನಿಯಮಗಳನ್ನೂ ಸಹ ತಂದಿದೆ. ಆದ್ರೆ ಕೊರೊನಾಗೆ ಬ್ರೇಕ್ ಹಾಕಬೇಕೆಂದ್ರೆ ಮುಖ್ಯವಾಗಿ ಜನರ ಓಡಾಟ ನಿಲ್ಲಬೇಕು. ಜನ ಸಾರ್ವಜನಿಕವಾಗಿ ಗುಂಪು ಗೂಡುವುದು, ಒಟ್ಟಾಗಿ ಓಡಾಡುವುದು, ಒಂದು ಕಡೆಯಿಂದ ಮತ್ತೊಂದು ಕಡೆಗೆ ಜನರ ಓಡಾಟ ನಿಲ್ಲಬೇಕು. ಜನರ ಓಡಾಟ ನಿಲ್ಲಬೇಕು ಅಂದ್ರೆ ಸಾರಿಗೆ ಬಂದ್ ಆಗಬೇಕು. ಆದ್ರೆ ಸದ್ಯ ರಾಜ್ಯ ಸರ್ಕಾರ ಸಾರಿಗೆಯನ್ನ ತಾನಾಗಿಯೇ ಬಂದ್ ಮಾಡುವ ಸ್ಥಿತಿಯಲ್ಲಿಲ್ಲ. ಯಾಕೆಂದ್ರೆ ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆಯ ಬಗ್ಗೆ ಎಲ್ಲೋ ಒಂದು ಕಡೆ ಜನರಲ್ಲಿ ಅಸಮಾಧಾನವಿದೆ. ಸಚಿವರ ಹೇಳಿಕೆಗಳು ಮತ್ತು ಉಳ್ಳವರ ಪರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳಿಂದ ಸರ್ಕಾರ ಜನರ ಕೆಂಗಣ್ಣಿಗೆ ಗುರಿ ಆಗುತ್ತಿದೆ. ಅತೀ ಮುಖ್ಯವಾಗಿ ಕಳೆದ ವರ್ಷದ ಲಾಕ್ ಡೌನ್ ನಿಂದ ಜನರು ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸಾರಿಗೆ ಬಂದ್ ಮಾಡಿದ್ರೇ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಎಷ್ಟೋ ವ್ಯಾಪಾರ ವಹಿವಾಟುಗಳು ನಿಂತು ಹೋಗುತ್ತವೆ. ಈ ಎಲ್ಲ ಅಂಶಗಳನ್ನ ಮನಗಂಡಿರುವ ಸರ್ಕಾರ, ಸಾರಿಗೆ ನೌಕರರ ಮುಷ್ಕರಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ಯಾ ಅನ್ನೋ ಪ್ರಶ್ನೆ ಉದ್ಭವಿಸಿದೆ.

strike

ಅಂದಹಾಗೆ ಸಾಮಾನ್ಯವಾಗಿ ಅಂದ್ರೆ ಕೊರೊನಾ ಹೊರತಾದ ಸಂದರ್ಭದಲ್ಲಿ ಏನಾದರೂ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರೇ ಸರ್ಕಾರ ತರಾತುರಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸಿ ಪರಿಹಾರವನ್ನ ಹುಡುಕುತ್ತಿತ್ತು. ಅಥವಾ ಕನಿಷ್ಠ ನೌಕರರ ಮನವೊಲಿಸುವ ಕೆಲಸವನ್ನಾದರೂ ಮಾಡುತ್ತಿತ್ತು. ಆದ್ರೆ ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನೌಕರರು ಮುಷ್ಕರ ನಡೆಸುತ್ತಿದ್ದರೂ ಸರ್ಕಾರ ಈ ಯಾವುದೇ ಕೆಲಸಕ್ಕೆ ಮುಂದಾಗುತ್ತಿಲ್ಲ ಯಾಕೆ..? ಎಲ್ಲೋ ಒಂದೊಂದು ಹೇಳಿಕೆಗಳನ್ನ ನೀಡುತ್ತಾ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಅಂತ ಅನಿಸುತ್ತಿದೆ. ಯಾಕೆಂದ್ರೆ ಸಾರಿಗೆ ನೌಕರರ ಮುಷ್ಕರದಿಂದ ಜನಸಂದಣಿ ಕಡಿಮೆ ಆಗಿರುವುದು ಕೊರೊನಾ ದೃಷ್ಠಿಕೋನದಿಂದ ಸರ್ಕಾರಕ್ಕೆ ಒಳ್ಳೆಯ ವಿಚಾರವೇ ಅಲ್ವಾ..?

ಆಯ್ತು.. ನಮ್ಮ ಅನುಮಾನುಗಳು ಸತ್ಯಕ್ಕೆ ದೂರ ಅಂತಾನೇ ಇಟ್ಟುಕೊಳ್ಳೋಣ. ಸಾರಿಗೆ ನೌಕರರ ಮುಷ್ಕರದಲ್ಲಿ ಸರ್ಕಾರದ ಕೈವಾಡ ಇಲ್ಲವೇ ಇಲ್ಲ ಅಂದುಕೊಳ್ಳೋಣ. ಹಾಗಾದ್ರೆ ಸರ್ಕಾರ ಮುಷ್ಕರ ತಡೆಯೋಕೆ ಮುಂದಾಗುತ್ತಿಲ್ಲ ಯಾಕೆ..? ಸಾರಿಗೆ ನೌಕರರ ಮುಷ್ಕರವನ್ನ ತಡೆಯೋ ಇಚ್ಛಾಶಕ್ತಿಯನ್ನ ಸರ್ಕಾರ ಪ್ರದರ್ಶನ ಮಾಡುತ್ತಿಲ್ಲ ಯಾಕೆ..? ಈ ಪ್ರಶ್ನೆಗಳಿಗೆ ಉತ್ತರ ಕೋಡೊರು ಯಾರು..?

belagavi
ಜಾಹೀರಾತು
Tags: B.s Yediyurappabus strikekarnataka
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram