ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಇಶಾ ಫೌಂಡೇಶನ್‌ನ ಆಹಾರ ಕಿಟ್‌ ವಿತರಣೆ

admin by admin
May 31, 2021
in Newsbeat, State, ರಾಜ್ಯ
isha foudation dr sudhakar saakshatv
Share on FacebookShare on TwitterShare on WhatsappShare on Telegram

ಸಿಎಂ ಅಧ್ಯಕ್ಷತೆಯ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಚರ್ಚೆ : ಸಚಿವ ಸುಧಾಕರ್‌

ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಹಿರಿಯ ಸಚಿವರ ಜತೆ ಸಮಾಲೋಚನೆ

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಇಶಾ ಫೌಂಡೇಶನ್‌ನ ಆಹಾರ ಕಿಟ್‌ ವಿತರಣೆ

 isha foudation dr sudhakar saakshatv ಚಿಕ್ಕಬಳ್ಳಾಪುರ : ಮುಂದಿನ ಒಂದು ತಿಂಗಳ ಅವಧಿಗೆ ಕೋವಿಡ್‌ ಹಿನ್ನೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ವರದಿ ನೀಡಿದ್ದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯುವ ಸಭೆಯಲ್ಲಿ ಆ ಕುರಿತು ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಆವಲಗುರ್ಕಿ ಗ್ರಾಮ ಪಂಚಾಯಿತಿಯ ಸೂಲಕುಂಟೆ ಗ್ರಾಮದಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ನಿವಾಸಿಗಳಿಗೆ ಸದ್ಗುರು ಜಗ್ಗಿವಾಸುದೇವ್‌ ಅವರ ಇಶಾ ಫೌಂಡೇಶನ್‌ವತಿಯಿಂದ ನೀಡಿರುವ ಆಹಾರ ಧಾನ್ಯಗಳ ಕಿಟ್‌ ವಿತರಿಸಿ ಸೋಮವಾರ ಅವರು ಮಾತನಾಡಿದರು.

ಕೋವಿಡ್‌ ಎರಡನೇ ಅಲೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಂಶಗಳ ತಳಹದಿಯ ಮೇಲೆ ಅಧ್ಯಯನ ನಡೆಸಿರುವ ಸಮಿತಿಯು ಮುಂದಿನ ಹದಿನೈದರಿಂದ ಒಂದು ತಿಂಗಳ ಅವಧಿಗೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ಜು ವರದಿಯಲ್ಲಿ ತಿಳಿಸಿದೆ. ಅದನ್ನು ಮುಖ್ಯಮಂತ್ರಿಯವರಿಗೆ ನೀಡಿದ್ದೇವೆ. ಸಚಿವ ಸಂಪುಟದ ಹಿರಿಯ ಸದಸ್ಯರ ಜತೆ ನಡೆಯುವ ಸಭೆಯಲ್ಲಿ ಸಿಎಂ ಅವರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ತಜ್ಞರು ನೀಡುವ ಸಲಹೆಗಳಿಗೆ ಹೆಚ್ಚಿನ ಮಹತ್ವವಿದೆ ಎಂದು ಅವರು ತಿಳಿಸಿದರು.

ಲಾಕ್‌ಡೌನ್‌ನಿಂದ ಸೋಂಕಿನ ಪ್ರಮಾಣ ತಗ್ಗಿಸಲು ಸಾಧ್ಯವಾಗಿದೆ. ಶೇಕಡಾ ನಲವತ್ತೈದರಿಂದ ಐವತ್ತರಿಷ್ಟಿದ್ದ ಸೋಂಕಿನ ಪ್ರಮಾಣ ಲಾಕ್‌ಡೌನ್‌ ಬಳಿಕ ಶೇಕಡಾ ಹದಿನೈದರಿಂದ ಹದಿನೇಳಕ್ಕೆ ಇಳಿದಿದೆ. ಮೈಸೂರು ಸಹಿತ ಕೆಲ ಜಿಲ್ಲೆಗಳಲ್ಲಿ ಮಾತ್ರ ಸೋಂಕಿನ ಪ್ರಮಾಣ ಇನ್ನೂ ಹೆಚ್ಚಿದೆ. ಇದು ಇನ್ನೂ ಕಡಿಮೆ ಆಗಬೇಕು. ಕಡಿಮೆ ಆಗಿದೆ ಎಂದಾಕ್ಷಣ ಎರಡನೇ ಅಲೆ ಮುಕ್ತಾಯವಾಗಿದೆ ಎಂದು ಭಾವಿಸುವಂತಿಲ್ಲ. ಕೋವಿಡ್‌ ಮುನ್ನೇಚ್ಚರಿಕೆ ಕ್ರಮಗಳನ್ನು ಜನರು ಎಚ್ಚರಿಕೆಯಿಂದ ಅನುಸರಿಸಬೇಕು. ಎಚ್ಚರತಪ್ಪಿದರೆ ಎರಡನೇ ಅಲೆ ಮುಂದುವರಿಯುತ್ತದೆ ಎಂದೂ ಅವರು ಕಿವಿ ಮಾತು ಹೇಳಿದರು.

ಸತತ ಸಂಪರ್ಕದಲ್ಲಿದ್ದೇವೆ

ರಾಜ್ಯದಲ್ಲಿ ಒಟ್ಟು ಸಾವಿರದ ಇನ್ನೂರೈವತ್ತು ಮಂದಿಗೆ ಬ್ಲಾಕ್‌ ಫಂಗಸ್‌ ಸೋಂಕು ಕಾಣಿಸಿಕೊಂಡಿದೆ. ಚಿಕಿತ್ಸೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಔಷಧ ಸಿಗುತ್ತಿಲ್ಲ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಸಾಧ್ಯವಾದಷ್ಟು ಔ಼ಷಧ ತರಿಸುವ ಕೆಲಸ ಮಾಡಲಾಗುತ್ತಿದೆ. ಪ್ರತಿ ದಿನ ಎಂಟರಿಂದ ಹತ್ತು ಸಾವಿರ ವಯಲ್ಸ್‌ ಬೇಕಾಗಿದೆ ಎಂದು ಮನವಿ ಮಾಡಲಾಗಿದೆ. ಸದ್ಯ ರಾಜ್ಯಾದ್ಯಂತ ಆಕ್ಸಿಜನ್‌ ಬಳಕೆ ಕಡಿಮೆಯಾಗಿದೆ ಎಂದೂ ಸಚಿವರು ತಿಳಿಸಿದರು.

ಬ್ಲಾಕ್‌ಫಂಗಸ್‌ ಸೋಂಕಿಗೆ ಕಾರಣಗಳನ್ನು ಪತ್ತೆ ಹಚ್ಚಲು ತಜ್ಞರ ಸಮಿತಿ ರಚಿಸಲಾಗಿದೆ. ಈಗಾಗಲೇ ಅವರು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಇನ್ನೂ ಅಂತಿಮ ವರದಿ ಬರಬೇಕಿದೆ. ಸಕ್ಕರೆ ಕಾಯಿಲೆ ಇದ್ದು ನಿಯಂತ್ರಣದಲ್ಲಿ ಇಲ್ಲದವರಿಗೆ ಕೋವಿಡ್‌ ರಿಂದ ಗುಣಮಖರಾದ ಬಳಿಕ, ಅತಿ ಹೆಚ್ಚು ಆಕ್ಸಿಜನ್‌ ಬಳಕೆ ಮಾಡಿದ್ದವರಿಗೆ, ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಸ್ಟಿರಾಯ್ಡ್‌ ಬಳಕೆ ಮಾಡಿದ್ದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಅಂತಿಮ ವರದಿ ಇನ್ನೂ ಬರಬೇಕಿದೆ ಎಂದು ಸ್ಪಷ್ಟಪಡಿಸಿದರು.

ವೈದ್ಯರ ನಡಿಗೆ ಗ್ರಾಮಗಳ ಕಡೆಗೆ ನಿಜಕ್ಕೂ ಅತ್ಯುತ್ತಮ ಕಾರ್ಯಕ್ರಮ. ಜನರ ಬಳಿಗೇ ತೆರಳಿ ಸರ್ಕಾರದ ಸವಲತ್ತುಗಳನ್ನುಒದಗಿಸುವುದು ಎಂದಿಗೂ ಉತ್ತಮ ಕೆಲಸ. ಇಂಥ ಆರೋಗ್ಯದ ತುರ್ತು ಪರಿಸ್ಥಿತಿಯಲ್ಲಿ ವೈದ್ಯರೇ ಗ್ರಾಮಗಳಿಗೆ ತೆರಳಿ ತಪಾಸಣೆ ಮಾಡುವುದು ನಿಜಕ್ಕೂ ಉತ್ತಮ ಕಾರ್ಯಕ್ರಮವಾಗಿದೆ ಎಂದೂ ಸಚಿವ ಸುಧಾಕರ್‌ ಹೇಳಿದರು.

 dr sudhakar saakshatvಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ನಂದಿ ಪಂಚಾಯಿತಿ ವ್ಯಾಪ್ತಿಯ ಕೊಲಮೇನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆ ಕ್ಯಾಂಪಸ್ಸಿಗೆ ಭೇಟಿ ನೀಡಿದ್ದ ಸಚಿವ ಸುಧಾಕರ್‌ ಅವರು ಜಿಲ್ಲಾಡಳಿತವು ಸಿದ್ಧಪಡಿಸಿರುವ ಕೋವಿಡ್‌ ಕೇರ್‌ ಸೆಂಟರ್‌ ಅನ್ನು ಉದ್ಘಾಟಿಸಿದರು. ಬಳಿಕ ಅಧಿಕಾರಿಗಳ ಜತೆ ಮಾತನಾಡಿದ ಅವರು, ಕೋವಿಡ್‌ ಹಾರೈಕೆ ಕೇಂದ್ರಕ್ಕೆ ದಾಖಲಾಗುವ ಸೋಂಕಿತರಿಗೆ ಉತ್ತಮ ಗುಣಮಟ್ಟದ ಹಾರೈಕೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಉತ್ತಮ ಆಹಾರ, ಔಷಧೋಪಚಾರಗಳ ಜತೆಗೆ ಅವರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಆರ್. ಲತಾ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ವೈದ್ಯರ ನಡೆ ಹಳ್ಳಿ ಕಡೆ

ಸಂಜೆ ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಸಚಿವ ಸುಧಾಕರ್‌ ಅವರು ಚಾಲನೆ ನೀಡಿದರು.

Tags: #cmbsy#karnatakabjpbengaluruCHIKKABALLAPURACovid19covidcarecovidkarnatakaDr. SudhakarhealthministerIsha Foundation
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram