ಮೊದಲ ಟೆಸ್ಟ್ ಪಂದ್ಯ ಸೋತರೂ ಮತ್ತೆ ಪುಟಿದೇಳುವ ವಿಶ್ವಾಸದಲ್ಲಿರುವ ಭಾರತಕ್ಕೆ ಆಘಾತ ಎದುರಾಗಿದೆ. ಫಸ್ಟ್ ಮ್ಯಾಚ್ ನಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದ ಇಶಾಂತ್ ಶರ್ಮಾ 2ನೇ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಗಳಿವೆ. ಇಶಾಂತ್ ಶರ್ಮಾ ಬಲ ಪಾದದ ನೋವಿನಿಂದ ಬಳಲುತ್ತಿದ್ದಾರೆ. ವಿದರ್ಭ ವಿರುದ್ಧದ ರಣಜಿ ಟ್ರೋಫಿ ಪಂದ್ಯದ ವೇಳೆ ಇಶಾಂತ್, ಬಲ ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಆದ್ರೀಗ ಗಾಯ ಮತ್ತೆ ಮರುಕಳಿಸಿದ ಪರಿಣಾಮ ಇಶಾಂತ್, ನೆಟ್ ಪ್ರಾಕ್ಟೀಸ್ ವೇಳೆ ಬೌಲಿಂಗ್ ಮಾಡಲು ಪರದಾಡಿದ್ರು. ಸುಮಾರು 20 ನಿಮಿಷಗಳ ಕಾಲ ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ್ದ ಇಶಾಂತ್, ಬಳಿಕ ಟೀಮ್ ಮ್ಯಾನೇಜ್ ಮೆಂಟ್ ಗೆ ಬಲ ಪಾದದ ನೋವಿನ ಬಗ್ಗೆ ತಿಳಿಸಿದ್ರು. ನಂತರ ಇಶಾಂತ್ ರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಒಂದು ವೇಳೆ ಇಶಾಂತ್ ಕ್ರೈಸ್ಟ್ ಚರ್ಚ್ ಪಂದ್ಯದಿಂದ ಹೊರಗುಳಿದಿದ್ದೇ ಆದ್ರೆ, ಉಮೇಶ್ ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ
ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...








