ಬೆಂಗಳೂರಿನಲ್ಲಿ ಐಸಿಸ್ ಉಗ್ರರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಗುಪ್ತಚರ ಇಲಾಖೆ ಸೂಚನೆ ಮೇರೆಗೆ ಬಲೆ ಬೀಸಿದ್ದ ಎನ್ ಐಎ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದಾರೆ. ಫಝಿ ಅಲಿಯಾಸ್ ಫಝೀಲ್ ಉರ್ ರೆಹಮಾನ್ ಬಂಧಿತ ವ್ಯಕ್ತಿಯಾಗಿದ್ದು, ಬೆಂಗಳೂರಿನ ಟ್ಯಾನಿಂಗ್ ರಸ್ತೆಯಲ್ಲಿ ಬಂಧಿಸಲಾಗಿದೆ. ಭಾರತದ ಹಲವೆಡೆ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಬೆಂಗಳೂರಿನಲ್ಲಿ ಪ್ಲಾನ್ ನಡೆಯುತ್ತಿದೆ ಎಂಬ ಮಾಹಿತಿಯನ್ನು ಈ ಹಿಂದೆಯೇ ಗುಪ್ತಚರ ಇಲಾಖೆ ನೀಡಿತ್ತು. ಇದರ ಜಾಡು ಹಿಡಿದು ಹೊರಟ ಎನ್.ಐ.ಎ ಅಧಿಕಾರಿಗಳು ಹಲವೆಡೆ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಮತ್ತಷ್ಟು ಜನ ಬೆಂಗಳೂರಿನಲ್ಲೇ ಇದ್ದು, ಶಂಕಿತನಿಂದ ಮತ್ತಷ್ಟು ಮಾಹಿತಿಯನ್ನು ಪಡೆಯಲು ಅಧಿಕಾರಿಗಳು ಗುಪ್ತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...








