ಕೊಪ್ಪಳ: ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳ (Koppal) ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಆಪ್ತ ವಿ.ಆರ್ ಪಾಟೀಲ್ (VR Patil) ಎಂಬ ಮುಖಂಡನ ಮನೆಯ ಮೇಲೆಯೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗೋವಾ (Goa) ಹಾಗೂ ಹುಬ್ಬಳ್ಳಿಯಿಂದ (Hubballi) ಆಗಮಿಸಿರುವ 20ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉದ್ಯಮಿಯಾಗಿರುವ ವಿ.ಆರ್ ಪಾಟೀಲ್ ಒಡೆತನದ ಖಾಸಗಿ ಶಾಲೆಗೆ ಇತ್ತೀಚೆಗಷ್ಟೇ ಡಿಕೆಶಿ ಭೇಟಿ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಾರು ಅನುಮಾನಗಳಿಗೆ ದಾರಿ ಮಾಡಿ ಕೊಟ್ಟಿದೆ.