ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಪಾಲಾಗಿರುವ ನಟ ದರ್ಶನ್ಗೆ (Darshan) ಸದ್ಯಕ್ಕೆ ಜಾಮೀನು (Bail) ಸಿಗುವುದಿಲ್ಲ ಎನ್ನಲಾಗುತ್ತಿದೆ.
ಜಗ್ಗುದಾದನ ಕುರಿತು ಈಗಾಗಲೇ ಪೊಲೀಸರು ಸಾಕಷ್ಟು ಸಾಕ್ಷ್ಯವನ್ನು ಕಲೆ ಹಾಕಿದ್ದಾರೆ. ಒಂದೊಮ್ಮೆ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದರೆ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ ತಯಾರಿ ನಡೆಸಿದ್ದಾರೆ. ಕಳೆದ 6 ದಿನಗಳಿಂದ ನಟ ದರ್ಶನ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿರುವ ನಟ ದರ್ಶನ್ಗೆ, ನಿಮ್ಮ ವಿರುದ್ಧ ರೌಡಿಶೀಟರ್ ಪಟ್ಟಿಯನ್ನು ಯಾಕೆ ತೆರೆಯಬಾರದು ಎಂದು ನೊಟೀಸ್ ಕಳುಹಿಸಲು ಪೊಲೀಸರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.
ಹೀಗಾಗಿ ಇನ್ನು ಮುಂದೆ ದರ್ಶನ್ ವಿರುದ್ಧ ರೌಡಿಶೀಟ್ ಓಪನ್ ಆದರೂ ಆಗಬಹುದು. ಏಕೆಂದರೆ ಈ ಹಿಂದೆ ಹಲವಾರು ಪ್ರಕರಣಗಳು ಕೂಡ ದರ್ಶನ್ ವಿರುದ್ಧ ದಾಖಲಾಗಿದ್ದವು. ಪತ್ನಿಯ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿ ಕೂಡ ಬಂದಿದ್ದರು. ಈಗ ತನ್ನ ಗೆಳತಿಗೆ ಮೆಸೆಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ಜಗ್ಗುದಾದಾ ಆಂಟ್ ಟೀಂ ಕೊಲೆ ಮಾಡಿ ಜೈಲುಪಾಲಾಗಿದೆ. ಈ ಹಿನ್ನೆಲೆಯಲ್ಲಿ ರೌಡಿಶೀಟ್ ಓಪನ್ ಮಾಡುವ ಸಾಧ್ಯತೆಯೂ ಇದೆ.
ಗುರುವಾರ ಕೂಡ ದರ್ಶನ್ ಜೈಲಿನಲ್ಲಿ ಯಾರನ್ನೂ ಭೇಟಿ ಮಾಡಿಲ್ಲ. ತಮ್ಮ ಭೇಟಿಗೆ ಯಾರಿಗೂ ಅವಕಾಶ ಕೊಡಬಾರದು ಅಂತ ಜೈಲಾಧಿಕಾರಿಗಳಿಗೆ ದರ್ಶನ್ ಕೋರಿದ್ದಾರೆ. ಹೀಗಾಗಿ ದಾಸ ಸೆಲ್ ನಲ್ಲಿ ಕಂಬಿಗಳ ಮಧ್ಯೆ ಏಕಾಂಗಿಯಾಗಿ ಕುಳಿತು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ.