ಗುಬ್ಬಚ್ಚಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು Saaksha Tv
ಚಿಕ್ಕಬಳ್ಳಾಪುರ: ಗುಬ್ಬಚ್ಚಿ ಮೃತಪಟ್ಟ ಹಿನ್ನೆಲೆ, ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲರು ಸೇರಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ
ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದ ಜನರೊಂದಿಗೆ ಗುಬ್ಬಚ್ಚಿ ಬಹಳಷ್ಟು ಆತ್ಮೀಯವಾಗಿತ್ತು. ಈ ಗುಬ್ಬಚ್ಚಿ ಮೃತಪಟ್ಟಿರುವ ಹಿನ್ನಲೆ ಗ್ರಾಮಸ್ಥರು ಅಂತ್ಯಸಂಸ್ಕಾರ ಮಾಡಿದ್ದಾರೆ. ಅಲ್ಲದೇ ಗ್ರಾಮಸ್ತರೆಲ್ಲರು ಸೇರಿ ಪುಟ್ಟದಾದ ಸಮಾಧಿ ಕಟ್ಟಿದ್ದಾರೆ.
ಈಗ ಗ್ರಾಮದ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲರು ಸೇರಿ 11ನೇ ದಿನದ ತಿಥಿ ಕಾರ್ಯವನ್ನೂ ಮಾಡಿದ್ದಾರೆ. ಅಲ್ಲದೇ ಗ್ರಾಮದ ಮತ್ತು ಸುತ್ತಮುತ್ತಲಿನ ಜನಕ್ಕೂ ಊಟ ಹಾಕಿಸಿದ್ದಾರೆ. ಹಾಗೇ ಗ್ರಾಮದ ಹಲವೆಡೆ ಮತ್ತೆ ಹುಟ್ಟಿ ಬಾ ಗುಬ್ಬಚ್ಚಿ ಎಂದು ಬ್ಯಾನರ್ ಕಟ್ಟಿದ್ದಾರೆ. ಜೊತೆಗೆ ಪಕ್ಷಿಗಳನ್ನು ಸಂರಕ್ಷಿಸುವ ಅರಿವನ್ನು ಮೂಡಿಸಿದ್ದಾರೆ. ಈ ಮೂಲಕ ಗ್ರಾಮದ ಜನರು ಪಕ್ಷಿ ಪ್ರೇಮ ಮೆರೆದಿದ್ದಾರೆ.