ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ 17 ಜನ ಆರೋಪಿಗಳು ಜೈಲು ಪಾಲಾಗಿದ್ದಾರೆ. ಎ1 ಪವಿತ್ರಾಗೌಡ, ಎ2 ದರ್ಶನ್ ಸೇರಿದಂತೆ 17 ಜನ ಈಗ ಬೇರೆ ಬೇರೆ ಜೈಲಿನಲ್ಲಿ ಇದ್ದಾರೆ. ಈ ಮಧ್ಯೆ ತನಿಖೆ ಕೈಗೊಂಡಿರುವ ಪೊಲೀಸರು ಜಾರ್ಚ್ ಶೀಟ್ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಪವಿತ್ರಾಗೌಡಗೆ (Pavithra Gowda) ರೇಣುಕಾಸ್ವಾಮಿ ಅಶ್ಲೀಲ ಫೋಟೊ ಕಳುಹಿಸಿರುವುದು ಪೊಲೀಸ್ ತನಿಖೆಯಲ್ಲಿ ಸತ್ಯ ಎನ್ನಲಾಗಿದೆ. ಪವಿತ್ರಾಗೌಡ ಅಕೌಂಟಿಗೆ ರೇಣುಕಾಸ್ವಾಮಿ ಬಳಸುತ್ತಿದ್ದ ಅಕೌಂಟ್ ನಿಂದ ಅಶ್ಲೀಲ ಫೋಟೋ ಕಳುಹಿಸಿದ್ದ ಎಂಬುವುದು ದೃಢಪಟ್ಟಿದೆ. ಈ ವಿಷಯವನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ರೇಣುಕಾಸ್ವಾಮಿ ಪೋಟೊ ಕಳಿಸಿರುವ ಕುರಿತು ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಪತ್ರ ಬರೆದಿದ್ದರು. ಪೊಲೀಸರ ಮನವಿಗೆ ಸ್ಪಂದಿಸಿರುವ ಇನ್ಸ್ಟಾಗ್ರಾಂ ಮಾಹಿತಿ ನೀಡಿದೆ ಎನ್ನಲಾಗಿದೆ. ಪವಿತ್ರಾಗೌಡಗೆ ಕಳುಹಿಸಿದ್ದ ಮೇಸೆಜ್ಗಳು ಹಾಗೂ ಅಶ್ಲೀಲ ಪೋಟೊ ಬಗ್ಗೆ ಇನ್ಸ್ಟಾಗ್ರಾಂ ಖಚಿತಪಡಿಸಿದೆ. ಈ ಮಾಹಿತಿಯನ್ನು ಪೊಲೀಸರು ಚಾರ್ಜ್ಶೀಟ್ ಸೇರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಅಥವಾ ನಾಡಿದ್ದ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಬಹುದು ಎನ್ನಲಾಗಿದೆ.