‘ವಿಕ್ರಾಂತ್ ರೋಣ’ಕ್ಕಾಗಿ ಕನ್ನಡ ಕಲಿತ ಬಾಲಿವುಡ್ ನಟಿ ಜಾಕ್ವೆಲಿನ್..!
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಬಿಗ್ ಬಜೆಟ್ ಸಿನಿಮಾ ‘ವಿಕ್ರಾಂತ್ ರೋಣ’ ಶೂಟಿಂಗ್ ಮುಕ್ತಾಯಗೊಂಡಿದ್ದು, ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಸಿನಿಮಾ ತಂಡಕ್ಕೆ ಭಾವುಕ ವಿದಾಯ ಹೇಳಿದ್ದಾರೆ.. ಈ ಸಿನಿಮಾದಲ್ಲಿ ವಿಶೇಷ ಹಾಡಿಗೆ ಬಾಲಿವುಡ್ ದ ಹಾಟ್ ಅಂಡ್ ಗ್ಲಾಮರಸ್ ಚೆಲುವೆ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದಾರೆ.. ಆದ್ರೆ ಈ ಬಗ್ಗೆ ಇದೀಗ ಮತ್ತೊಂದು ಇಂಟರೆಸ್ಟಿಂಗ್ ವಿಚಾರ ಗೊತ್ತಾಗಿದ್ದು, ಕನ್ನಡಿಗರ ಮನ ಗೆದ್ದಿದ್ದಾರೆ ಜಾಕ್ವೆಲಿನ್. ಹೌದು.. ಶ್ರೀಲಂಕಾ ಸುಂದರಿ ಜಾಕ್ವೆಲಿನ್ ಕನ್ನಡದ ಈ ಸಿನಿಮಾಕ್ಕಾಗಿ ಕನ್ನಡವನ್ನು ಕಲಿತು ಇದೀಗ ಸುದ್ದಿಯಾಗಿದ್ದಾರೆ.
ಜಾಕ್ವೆಲಿನ್ ಹಾಡು ಅಷ್ಟೇ ಅಲ್ಲದ್ದೇ ಕೆಲವು ದೃಶ್ಯಗಳಲ್ಲಿಯೂ ಕಾಣಿಸಿಕೊಂಡಿದ್ದು, ಅದಕ್ಕಾಗಿ ಅವರು ಕನ್ನಡವನ್ನು ಕಲಿತು ನಟಿಸಿದ್ದಾರೆ ಎಂಬ ಮಾಹಿತಿ ವಿಕ್ರಾಂತ್ ರೋಣ ಸೆಟ್ನಿಂದ ಸಿಕ್ಕಿದೆ. ವಿಕ್ರಾಂತ್ ರೋಣ ಭಾರತೀಯ ಕಥೆಯನ್ನು ವಿಶ್ವಮಟ್ಟದಲ್ಲಿ ಹೇಳುವಂತಹ ಪ್ರಯತ್ನವಾಗಿದೆ. ನಾನು ಈ ಸಿನಿಮಾ ಭಾಗವಾಗಿದ್ದು ಖುಷಿಯ ವಿಚಾರವಾಗಿದೆ. ಸಿನಿಮಾದಲ್ಲಿ ನಾನು ಇರುವ ದೃಶ್ಯಗಳು ಮತ್ತು ಹಾಡು ಅದ್ಭುತವಾಗಿ ಮೂಡಿಬಂದಿದೆ ಎಂದು ಜಾಕ್ವೆಲಿನ್ ಫರ್ನಾಂಡಿಸ್ ಹೇಳಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ನಮ್ಮ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಬಹಳ ವಿಶೇಷ ಎಂದು ನಮಗೆ ಅನಿಸುತ್ತದೆ. ಈ ಹಾಡು ಮತ್ತು ಅವರು ಕಾಣಿಸಿಕೊಂಡಿರುವ ಅಷ್ಟೂ ದೃಶ್ಯಗಳು ನೋಡುಗರಿಗೆ ವಿಶೇಷ ಅನುಭವವನ್ನು ನೀಡುತ್ತದೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಸೆಟ್ನಲ್ಲಿ ಆರು ದಿನಗಳ ಕಾಲ ವಿಭಿನ್ನವಾದ ಸೆಟ್ ಹಾಕಿ ಚಿತ್ರೀಕರಿಸಿದ್ದೇವೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಹೇಳಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ಆರು ದಿನಗಳ ಕಾಲ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡ ಡೈಲಾಗ್ಗಳನ್ನು ಪ್ರಾಕ್ಟೀಸ್ ಮಾಡಿಕೊಂಡು ಬಂದು ಹೇಳಿದ್ದಾರೆ. ಅವರು ಇರುವ ದೃಶ್ಯಗಳಿಗೆ ಅವರಿಂದಲೇ ಡಬ್ಬಿಂಗ್ ಮಾಡಿಸಬೇಕು ಎನ್ನುವ ಪ್ಲ್ಯಾನ್ ಇದೆ ಎಂದು ಅನೂಪ್ ಭಂಡಾರಿ ಹೇಳಿದ್ದಾರೆ.
ಇನ್ನೂ ಈ ಹಾಡಿಗೆ ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಅದ್ಭುತವಾದ ಸೆಟ್ ಹಾಕಿದ್ದರು. 250 ಮಂದಿ ನೃತ್ಯ ಕಲಾವಿದರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಖ್ಯಾತ ಕೊರಿಯಾಗ್ರಾಫರ್ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಜಾಕ್ವೆಲಿನ್ ಹಾಡಿನ ಜತಗೆ ಒಂದಷ್ಟು ದೃಶ್ಯಗಳಲ್ಲಿಯೂ ಕಾಣಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಜಾಕ್ ಮಂಜು ಹೇಳಿದ್ದಾರೆ.
ಇನ್ನೂ ಹಾಡಿನ ಚಿತ್ರೀಕರಣಕ್ಕೆ ಮತ್ತು ಸಂಭಾವನೆ ಸೇರಿ 5 ಕೋಟಿ ರೂಪಾಯಿ ಖರ್ಚು ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಜಾಕ್ವೆಲಿನ್ ಸಂಭಾವನೆ 1 ಕೋಟಿ ರೂಪಾಯಿ ಎಂದು ಹೇಳಲಾಗಿದೆ.. ವಿಕ್ರಾಂತ್ ರೋಣ 3ಡಿಯಲ್ಲಿ ಸಿದ್ಧವಾಗುತ್ತಿರುವ ಕನ್ನಡ ಸಿನಿಮಾವಾಗಿದ್ದು, 14 ಭಾಷೆಗಳಲ್ಲಿ 55 ದೇಶಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.
BIGGBOSS 8 : ಜೈಲಿನಲ್ಲಿ ಚಕ್ರವರ್ತಿ – ಶಮಂತ್ ವಿರುದ್ಧ ರೊಚ್ಚಿಗೆದ್ದ ಚಂದ್ರಚೂಡ್..!
ದೊಡ್ಮನೆ ಪ್ರಾಪರ್ಟಿ ಮೇಲೆ ರಾಬರ್ಟ್ ಕಣ್ಣು : ಉಮಾಪತಿ ಹೇಳಿದ್ದೇನು..?