ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ

Mahesh M Dhandu by Mahesh M Dhandu
June 17, 2021
in Newsbeat, State, ರಾಜ್ಯ
MSME
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ

•ರಾಜ್ಯದ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳ ಉತ್ತೇಜನಕ್ಕೆ ತಂತ್ರಜ್ಞಾನ ಹಬ್‌ಗಳು ಅಗತ್ಯ

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

•ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಪತ್ರದ ಮೂಲಕ ಮನವಿ
•ರಾಜ್ಯವನ್ನು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೇರಿಸುವ ನಿಟ್ಟಿನಲ್ಲಿ ನೂತನ ನೀತಿ

ಬೆಂಗಳೂರು ಜೂನ್‌ 17: ದೇಶದ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪನ್ನಗಳ ಕ್ಷೇತ್ರದಲ್ಲಿ ಮೂಂಚೂಣಿ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ ಗಳನ್ನು ಘೋಷಿಸುವ ಮೂಲಕ ರಾಜ್ಯದ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಖಾತೆ ಸಚಿವರಾದ ರಾಜನಾಥ್‌ ಸಿಂಗ್‌ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ರೌಂಡ್‌ ಟೇಬಲ್‌ ವೆಬಿನಾರ್‌ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ದೇಶದಲ್ಲಿ ರಕ್ಷಣಾ ಹಾಗೂ ಏರೋಸ್ಪೇಸ್‌ ಗೆ ಸಂಬಂಧಿಸಿದಂತಹ ಕ್ಷೇತ್ರಗಳಿಗೆ ಹಲವಾರು ಯೋಜನೆಗಳ ಮೂಲಕ ಪ್ರೋತ್ಸಾಹ ನೀಡುತ್ತಿದೆ. ರಕ್ಷಣಾ ಉತ್ಪಾದನಾ ಕಾರಿಡಾರ್‌ ಯೋಜನೆ ಯ ಮೂಲಕ ಉತ್ತರ ಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಕ್ರಮವಾಗಿ 6 ಮತ್ತು 5 ನೋಡ್‌ ಗಳನ್ನು ಉತ್ತೇಜಿಸುವ ಕಾರ್ಯಕ್ಕೆ ಮುಂದಾಗಿದೆ. ಹೊಸ ರಕ್ಷಣಾ ಕಾರಿಡಾರ್‌ ಗಳನ್ನು ನಿರ್ಮಿಸುವುದರ ಜೊತೆಯಲ್ಲೇ, ಈಗಾಗಲೇ ಅಸ್ತಿತ್ವದಲ್ಲಿರುವ ಏರೋಸ್ಪೇಸ್‌ ಮತ್ತು ರಕ್ಷಣಾ ಉತ್ಪಾದನಾ ಪರಿಸರವನ್ನು ಹೊಂದಿರುವ ಪ್ರದೇಶಗಳಿಗೂ ಉತ್ತೇಜನ ನೀಡಬೇಕು ಎಂಬುದು ನಮ್ಮ ಮನವಿಯಾಗಿದೆ.

ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ ನಿರ್ಮಾಣಕ್ಕೆ ಎಲ್ಲಾ ರೀತಿಯ ಅನುಕೂಲವಿದ್ದು ಉತ್ತಮ ಪರಿಸರವಿದೆ. ರಾಜ್ಯದಲ್ಲಿ ಅತ್ಯುತ್ತಮ ಸಂಶೋಧನೆ ಮತ್ತು ಅಭಿವೃದ್ದಿಯ ಕೇಂದ್ರಗಳು ಇವೆ. ಅಲ್ಲದೆ, ಹೆಚ್‌ಎಎಲ್‌, ಬಿಇಎಲ್‌ ನಂತಹ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ಮತ್ತು ಡಿಆರ್‌ಡಿಓದ ಪ್ರಯೋಗಾಲಯಗಳಾದ ಡಿಏಆರ್‌ಇ ಮತ್ತು ಎಡಿಇ ಗಳಿವೆ. ಏರ್‌ಬಸ್‌, ಬೋಯಿಂಗ್‌, ಜಿಈ ಏವಿಯೇಷನ್‌ ನಂತಹ ಪ್ರಮುಖ ಕಂಪನಿಗಳು ರಾಜ್ಯದಲ್ಲಿವೆ. ಇದು ನಮ್ಮ ರಾಜ್ಯವನ್ನು ಏರೋಸ್ಪೇಸ್‌ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಿದೆ ಎಂದು ಹೇಳಿದರು.

ದೇಶದ ಶೇಕಡಾ 25 ಕ್ಕೂ ಹೆಚ್ಚು ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ಕೈಗಾರಿಕೆಗಳು ರಾಜ್ಯದಲ್ಲಿವೆ. ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಿರುವ ಶೇಕಡಾ 67 ರಷ್ಟು ಏರ್‌ಕ್ರಾಫ್ಟ್‌ ಮತ್ತು ಹೆಲಿಕ್ಯಾಪ್ಟರ್‌ ಉತ್ಪಾದನೆ ರಾಜ್ಯದಲ್ಲಿ ನಡೆಯುತ್ತದೆ. ಅಲ್ಲದೆ, ಎಫ್‌ಡಿಐ ಇಂಟಲಿಜೆನ್ಸ್‌ ನ ವಿಶ್ವ ಏರೋಸ್ಪೇಸ್‌ ನಗರಗಳ ಸೂಚ್ಯಾಂಕದ ಮೊದಲ 10 ನೇ ಸ್ಥಾನದಲ್ಲಿ ಬೆಂಗಳೂರು ನಗರ ಸ್ಥಾನ ಪಡೆದುಕೊಂಡಿದೆ. ಹಾಗೆಯೇ, ಈ ಕ್ಷೇತ್ರಕ್ಕೆ ಬಿಡಿಭಾಗಗಳನ್ನು ಪೂರೈಸುವ 2000 ಕ್ಕೂ ಹೆಚ್ಚು ಎಂಎಸ್‌ಎಂಇ ಗಳಿವೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ದೇಶದಲ್ಲೇ ಮೊದಲು ಏರೋಸ್ಪೇಸ್‌ ಹಾಗೂ ಡಿಫೆನ್ಸ್‌ ಪಾಲಿಸಿಯನ್ನು ಜಾರಿಗೊಳಿಸಿದ ರಾಜ್ಯ ನಮ್ಮ ದಾಗಿದೆ ಎಂದರು.
ಬೆಂಗಳೂರು, ಮೈಸೂರು, ತುಮಕೂರು ಮತ್ತು ಚಾಮರಾಜನಗರ ಈ ನಾಲ್ಕೂ ನೋಡ್‌/ಹಬ್‌ ಗಳು ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಎಕೋಸಿಸ್ಟಮ್‌ ಗೆ ಈಗಾಗಲೇ ಸಿದ್ದವಿರುವ ಮೂಲಭೂತ ಸೌಕರ್ಯಗಳನ್ನು ಹೊಂದಿವೆ. ಮುಂದಿನ ದಿನಗಳಲ್ಲೂ ಕರ್ನಾಟಕ ರಾಜ್ಯ ದೇಶದ ಏರೋಸ್ಪೇಸ್‌ ಮತ್ತು ಡೀಫೆನ್ಸ್‌ ಉತ್ಪಾದನಾ ಕ್ಷೇತ್ರದಲ್ಲಿ ಸ್ಥಳೀಯವಾಗಿ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲಿದೆ ಎಂದರು.

jagadish shettar

ರಾಜ್ಯದಲ್ಲಿ ಘೋಷಣೆ ಆಗುವ ರಕ್ಷಣಾ ತಂತ್ರಜ್ಞಾನ ಹಬ್‌, ದೇಶದ ಡಿಫೆನ್ಸ್‌ ಆಫ್‌ಸೆಟ್‌ ಪಾಲಿಸಿ ಅಡಿಯಲ್ಲಿ ಡಿಫೆನ್ಸ್‌ ಕಾರಿಡಾರ್‌ ನ ವರ್ಧಿತ ಗುಣಕಗಳು (enhanced multipliers) ಹಾಗೂ ರಕ್ಷಣಾ ವೇದಿಕೆ ಮತ್ತು ಉತ್ಪನ್ನಗಳ ಪರೀಕ್ಷೆ ಮತ್ತು ಪ್ರಮಾಣ ಪತ್ರ ಮತ್ತಿತರ ವಿಶೇಷ ಸೌಲಭ್ಯಗಳಿಂದ ರಾಜ್ಯದಲ್ಲಿ ಏರೋಸ್ಪೇಸ್‌ ಮತ್ತು ರಕ್ಷಣಾ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುತ್ತದೆ. ಅಲ್ಲದೆ, ಆತ್ಮನಿರ್ಭರ ಭಾರತ ಗುರಿಗೆ ಮತ್ತಷ್ಟು ಬಲ ತುಂಬಲಿದೆ. ಈ ಹೊಸ ಉಪಕ್ರಮಗಳಿಂದ ನಮ್ಮ ರಾಜ್ಯದ ವೈಜ್ಞಾನಿಕ ನಾಯಕತ್ವ ಹಾಗೂ ಈ ಕ್ಷೇತ್ರಕ್ಕೆ ನಮ್ಮ ರಾಜ್ಯದಿಂದ ನೀಡಿರುವ ಸಂಶೋಧನೆ ಮತ್ತು ಅಭಿವೃದ್ದಿಯ ಕೊಡುಗೆಗೆ ಸ್ವೀಕೃತಿ ನೀಡಿದಂತಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದೇವೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಸತತ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ಕೈಗಾರಿಕಾ ಅಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣ ಮಾತನಾಡಿ, ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2021-2026 ರ ಕರಡು ಅಂಶಗಳನ್ನು ವಿವರಿಸಿದರು. ರಾಜ್ಯವನ್ನು ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಕೈಗಾರಿಕಾ ಕ್ಷೇತ್ರದ ಪ್ರಮುಖ ಬಂಡವಾಳ ಹೂಡಿಕೆಯ ರಾಜ್ಯವನ್ನಾಗಿಸುವುದು ಪ್ರಮುಖ ಗುರಿಯಾಗಿದೆ. ರಾಜ್ಯದಲ್ಲಿ ರಕ್ಷಣಾ ಹಬ್ ಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೆ, ಬಂಡವಾಳ ಹೂಡಿಕೆಗೆ ಆಕರ್ಷಕವಾದ ಸೌಲಭ್ಯಗಳನ್ನು ಈ ನೀತಿ ಒಳಗೊಂಡಿರಲಿದೆ ಎಂದು ಹೇಳಿದರು.

ವೆಬಿನಾರ್‌ ನಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜಕುಮಾರ್‌ ಖತ್ರಿ, ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕರಾದ ರಮೇಶ್‌, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.

Tags: bangaloreJagadish Shettarkarnataka
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram